<p>ಯಳಂದೂರು: ತಾಲ್ಲೂಕಿನ ಮಾಂಬಳ್ಳಿ, ಅಗರ ಗ್ರಾಮಗಳ ರಸ್ತೆಗಳಲ್ಲಿ ಪ್ರತಿ ದಿನ ಟ್ರಾಪಿಕ್ ಜಾಮ್ ಸಮಸ್ಯೆಯಾಗಿ ಕಾಡಿದೆ. ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಹಳೆಯ ಕಿರಿದಾದ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತವೆ. ದಿನನಿತ್ಯ ಜನ ಮತ್ತು ಜಾನುವಾರು ಸಾಕಣೆದಾರರು ರಸ್ತೆ ದಾಟಲು ಕಿರಿಕಿರಿ ಅನುಭವಿಸುವಂತೆ ಆಗಿದೆ.</p>.<p>ಗ್ರಾಮದ ನಡುವೆ ಕಿರಿದಾದ ರಸ್ತೆ ಹಾದು ಹೋಗಿದೆ. ಬೃಹತ್ ವಾಹನಗಳು ಮತ್ತು ಬಸ್ ಈ ಮಾರ್ಗದಲ್ಲಿ ಸಂಚರಿಸುತ್ತವೆ. ಜೊತೆಗೆ ದ್ವಿಚಕ್ರ ವಾಹನಗಳು ಓಡಾಡುತ್ತವೆ. ಇದರಿಂದ ರಸ್ತೆ ಮಾರ್ಗದಲ್ಲಿ ಅಳವಡಿಸಿರುವ ಪೈಪ್ ಒಡೆದು ನೀರು ಹರಿಯುವ ಸ್ಥಿತಿಯೂ ನಿರ್ಮಾಣವಾಗುತ್ತದೆ. ಹೋಟೆಲ್, ಅಂಗಡಿ ಮುಂಗಟ್ಟುಗಳು ಇದ್ದು, ವಾಹನಗಳ ಅಡ್ಡಾದಿಡ್ಡಿ ಚಾಲನೆಯಿಂದ ದಟ್ಟಣೆ ಹೆಚ್ಚಾಗಿ, ಸವಾರರು ಬವಣೆ ಪಡುವಂತಾಗಿದೆ.</p>.<p>‘ಗ್ರಾಮದ ಹೊರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ (209) ಕಾಮಗಾರಿ ನಡೆಯುತ್ತಿದೆ. ರಸ್ತೆ ನಿರ್ಮಾಣಕ್ಕೆ ಇನ್ನೂ ಸಮಯ ಬೇಕಿದೆ. ಕಿರಿದಾದ ಹಳೆಯ ರಸ್ತೆಯನ್ನು ಅಗಲೀಕರಣ ಮಾಡಿಲ್ಲ. ಇದರಿಂದ ಮಹಿಳೆಯರು ಮತ್ತು ಮಕ್ಕಳು ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡಬೇಕಿದೆ. ಹಾಗಾಗಿ, ಈ ಭಾಗದಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸಿ ವಾಹನಗಳ ವೇಗವನ್ನು ನಿಯಂತ್ರಿಸಬೇಕು’ ಎನ್ನುತ್ತಾರೆ ಗ್ರಾಮದ ಬಸಮ್ಮ,</p>.<p>ಬೈಪಾಸ್ ರಸ್ತೆ ಹಾದು ಹೋಗಿರುವ ಗ್ರಾಮಗಳ ಬದಿ ಹಳೆ ರಸ್ತೆಗಳನ್ನು ದುರಸ್ತಿಗೊಳಿಸಬೇಕು. ಗ್ರಾಮದ ಪ್ರವೇಶ ದ್ವಾರದಲ್ಲಿ ಹಂಪ್ಸ್ ಹಾಕಬೇಕು. ಪಾದಚಾರಿಗಳ ಸಂಚಾರಕ್ಕೆ ಮೊದಲ ಆದ್ಯತೆ ನೀಡಬೇಕು. ಕೆಲವೊಮ್ಮೆ ರಾತ್ರಿ ಸಮಯದಲ್ಲಿ ಅತಿಯಾದ ದಟ್ಟಣೆಯಿಂದ ಅಪಘಾತಗಳು ಸಂಭವಿಸುತ್ತವೆ. ಹಾಗಾಗಿ, ಈ ಭಾಗದಲ್ಲಿ ವಾಹನಗಳ ವೇಗ ನಿಯಂತ್ರಣ ಮಾಡಲು ಪೊಲೀಸರನ್ನು ನಿಯೋಜಿಸಬೇಕು’ ಎಂದು ಅಗರ ಗ್ರಾಮದ ನಾಗರಾಜು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಳಂದೂರು: ತಾಲ್ಲೂಕಿನ ಮಾಂಬಳ್ಳಿ, ಅಗರ ಗ್ರಾಮಗಳ ರಸ್ತೆಗಳಲ್ಲಿ ಪ್ರತಿ ದಿನ ಟ್ರಾಪಿಕ್ ಜಾಮ್ ಸಮಸ್ಯೆಯಾಗಿ ಕಾಡಿದೆ. ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಹಳೆಯ ಕಿರಿದಾದ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತವೆ. ದಿನನಿತ್ಯ ಜನ ಮತ್ತು ಜಾನುವಾರು ಸಾಕಣೆದಾರರು ರಸ್ತೆ ದಾಟಲು ಕಿರಿಕಿರಿ ಅನುಭವಿಸುವಂತೆ ಆಗಿದೆ.</p>.<p>ಗ್ರಾಮದ ನಡುವೆ ಕಿರಿದಾದ ರಸ್ತೆ ಹಾದು ಹೋಗಿದೆ. ಬೃಹತ್ ವಾಹನಗಳು ಮತ್ತು ಬಸ್ ಈ ಮಾರ್ಗದಲ್ಲಿ ಸಂಚರಿಸುತ್ತವೆ. ಜೊತೆಗೆ ದ್ವಿಚಕ್ರ ವಾಹನಗಳು ಓಡಾಡುತ್ತವೆ. ಇದರಿಂದ ರಸ್ತೆ ಮಾರ್ಗದಲ್ಲಿ ಅಳವಡಿಸಿರುವ ಪೈಪ್ ಒಡೆದು ನೀರು ಹರಿಯುವ ಸ್ಥಿತಿಯೂ ನಿರ್ಮಾಣವಾಗುತ್ತದೆ. ಹೋಟೆಲ್, ಅಂಗಡಿ ಮುಂಗಟ್ಟುಗಳು ಇದ್ದು, ವಾಹನಗಳ ಅಡ್ಡಾದಿಡ್ಡಿ ಚಾಲನೆಯಿಂದ ದಟ್ಟಣೆ ಹೆಚ್ಚಾಗಿ, ಸವಾರರು ಬವಣೆ ಪಡುವಂತಾಗಿದೆ.</p>.<p>‘ಗ್ರಾಮದ ಹೊರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ (209) ಕಾಮಗಾರಿ ನಡೆಯುತ್ತಿದೆ. ರಸ್ತೆ ನಿರ್ಮಾಣಕ್ಕೆ ಇನ್ನೂ ಸಮಯ ಬೇಕಿದೆ. ಕಿರಿದಾದ ಹಳೆಯ ರಸ್ತೆಯನ್ನು ಅಗಲೀಕರಣ ಮಾಡಿಲ್ಲ. ಇದರಿಂದ ಮಹಿಳೆಯರು ಮತ್ತು ಮಕ್ಕಳು ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡಬೇಕಿದೆ. ಹಾಗಾಗಿ, ಈ ಭಾಗದಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸಿ ವಾಹನಗಳ ವೇಗವನ್ನು ನಿಯಂತ್ರಿಸಬೇಕು’ ಎನ್ನುತ್ತಾರೆ ಗ್ರಾಮದ ಬಸಮ್ಮ,</p>.<p>ಬೈಪಾಸ್ ರಸ್ತೆ ಹಾದು ಹೋಗಿರುವ ಗ್ರಾಮಗಳ ಬದಿ ಹಳೆ ರಸ್ತೆಗಳನ್ನು ದುರಸ್ತಿಗೊಳಿಸಬೇಕು. ಗ್ರಾಮದ ಪ್ರವೇಶ ದ್ವಾರದಲ್ಲಿ ಹಂಪ್ಸ್ ಹಾಕಬೇಕು. ಪಾದಚಾರಿಗಳ ಸಂಚಾರಕ್ಕೆ ಮೊದಲ ಆದ್ಯತೆ ನೀಡಬೇಕು. ಕೆಲವೊಮ್ಮೆ ರಾತ್ರಿ ಸಮಯದಲ್ಲಿ ಅತಿಯಾದ ದಟ್ಟಣೆಯಿಂದ ಅಪಘಾತಗಳು ಸಂಭವಿಸುತ್ತವೆ. ಹಾಗಾಗಿ, ಈ ಭಾಗದಲ್ಲಿ ವಾಹನಗಳ ವೇಗ ನಿಯಂತ್ರಣ ಮಾಡಲು ಪೊಲೀಸರನ್ನು ನಿಯೋಜಿಸಬೇಕು’ ಎಂದು ಅಗರ ಗ್ರಾಮದ ನಾಗರಾಜು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>