<p><strong>ಮೈಸೂರು:</strong> ಮಾವಿನಹಣ್ಣುಗಳನ್ನು ಮಾಗಿಸುವಾಗ ಕ್ಯಾಲ್ಸಿಯಂ ಕಾರ್ಬೈಡ್ನ್ನು ಬಳಸಲೇಬಾರದು ಎಂದು ಆಹಾರ ಸುರಕ್ಷತಾ ಅಂಕಿತ ಅಧಿಕಾರಿ (ಪ್ರಭಾರ) ಡಾ.ಚಿದಂಬರ ಕಿವಿಮಾತು ಹೇಳಿದರು.</p>.<p>ತೋಟಗಾರಿಕಾ ಇಲಾಖೆ ವತಿಯಿಂದ ಇಲ್ಲಿ ಸೋಮವಾರ ಏರ್ಪಡಿಸಿದ್ದ ‘ಕಾರ್ಬೈಡ್ ಮುಕ್ತ ಮಾವು’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಹಣ್ಣುಗಳನ್ನು ಮಾಗಿಸಲು ಕೃತಕ ವಿಧಾನಗಳ ಮೊರೆ ಹೋಗಬಾರದು. ನೈಸರ್ಗಿಕವಾಗಿಯೇ ಹಣ್ಣು ಮಾಡಬೇಕು. ಒಂದು ವೇಳೆ ಕೃತಕವಾಗಿ ಹಣ್ಣು ಮಾಡುವಂತಹ ಪ್ರಮೇಯ ಬಂದಲ್ಲಿ ಯಾವುದೇ ಕಾರಣಕ್ಕೂ ಕ್ಯಾಲ್ಸಿಯಂ ಕಾರ್ಬೈಡ್ನ್ನು ಬಳಸಲೇಬಾರದು ಎಂದು ಹೇಳಿದರು.</p>.<p>ಕ್ಯಾಲ್ಸಿಯಂ ಕಾರ್ಬೈಡ್ ಬಳಸಿ ಮಾಗಿಸಿದ ಹಣ್ಣುಗಳನ್ನು ಪದೇ ಪದೇ ನಿರಂತರವಾಗಿ ತಿನ್ನುತ್ತಾ ಹೋದರೆ ಕ್ಯಾನ್ಸರ್ ಉಂಟಾಗುವ ಅಪಾಯ ಇದೆ. ಹೀಗಾಗಿ, ಇದನ್ನು ಬಳಸದೇ ಎಥಿಲಿನ್ ಆಕ್ಸೈಡ್ ಎಂಬ ಸುರಕ್ಷಿತ ರಾಸಾಯನಿಕ ಬಳಸುವಂತೆ ಅವರು ಸೂಚಿಸಿದರು.</p>.<p>ತೋಟಗಾರಿಕಾ ವಿಜ್ಞಾನಿ ಡಾ.ವೆಂಕಟರಾವ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಅಬೀಬಾ ನಿಶಾದ್, ದಿನೇಶ್ಕುಮಾರ್, ಎಪಿಎಂಸಿ ಕಾರ್ಯದರ್ಶಿ ಗಿರೀಶ್ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮಾವಿನಹಣ್ಣುಗಳನ್ನು ಮಾಗಿಸುವಾಗ ಕ್ಯಾಲ್ಸಿಯಂ ಕಾರ್ಬೈಡ್ನ್ನು ಬಳಸಲೇಬಾರದು ಎಂದು ಆಹಾರ ಸುರಕ್ಷತಾ ಅಂಕಿತ ಅಧಿಕಾರಿ (ಪ್ರಭಾರ) ಡಾ.ಚಿದಂಬರ ಕಿವಿಮಾತು ಹೇಳಿದರು.</p>.<p>ತೋಟಗಾರಿಕಾ ಇಲಾಖೆ ವತಿಯಿಂದ ಇಲ್ಲಿ ಸೋಮವಾರ ಏರ್ಪಡಿಸಿದ್ದ ‘ಕಾರ್ಬೈಡ್ ಮುಕ್ತ ಮಾವು’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಹಣ್ಣುಗಳನ್ನು ಮಾಗಿಸಲು ಕೃತಕ ವಿಧಾನಗಳ ಮೊರೆ ಹೋಗಬಾರದು. ನೈಸರ್ಗಿಕವಾಗಿಯೇ ಹಣ್ಣು ಮಾಡಬೇಕು. ಒಂದು ವೇಳೆ ಕೃತಕವಾಗಿ ಹಣ್ಣು ಮಾಡುವಂತಹ ಪ್ರಮೇಯ ಬಂದಲ್ಲಿ ಯಾವುದೇ ಕಾರಣಕ್ಕೂ ಕ್ಯಾಲ್ಸಿಯಂ ಕಾರ್ಬೈಡ್ನ್ನು ಬಳಸಲೇಬಾರದು ಎಂದು ಹೇಳಿದರು.</p>.<p>ಕ್ಯಾಲ್ಸಿಯಂ ಕಾರ್ಬೈಡ್ ಬಳಸಿ ಮಾಗಿಸಿದ ಹಣ್ಣುಗಳನ್ನು ಪದೇ ಪದೇ ನಿರಂತರವಾಗಿ ತಿನ್ನುತ್ತಾ ಹೋದರೆ ಕ್ಯಾನ್ಸರ್ ಉಂಟಾಗುವ ಅಪಾಯ ಇದೆ. ಹೀಗಾಗಿ, ಇದನ್ನು ಬಳಸದೇ ಎಥಿಲಿನ್ ಆಕ್ಸೈಡ್ ಎಂಬ ಸುರಕ್ಷಿತ ರಾಸಾಯನಿಕ ಬಳಸುವಂತೆ ಅವರು ಸೂಚಿಸಿದರು.</p>.<p>ತೋಟಗಾರಿಕಾ ವಿಜ್ಞಾನಿ ಡಾ.ವೆಂಕಟರಾವ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಅಬೀಬಾ ನಿಶಾದ್, ದಿನೇಶ್ಕುಮಾರ್, ಎಪಿಎಂಸಿ ಕಾರ್ಯದರ್ಶಿ ಗಿರೀಶ್ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>