ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿರಿಯಾಪಟ್ಟಣ | ಕಾರ್-ಟ್ರ್ಯಾಕ್ಟರ್ ನಡುವೆ ಅಪಘಾತ: ಮೂವರು ಸಾವು

Published 18 ಜುಲೈ 2023, 5:37 IST
Last Updated 18 ಜುಲೈ 2023, 5:37 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ತಾಲ್ಲೂಕಿನ ಕಂಪಲಾಪುರ ಗ್ರಾಮದ ಬಳಿ ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಕಾರ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟರು.

ಪಿರಿಯಾಪಟ್ಟಣದ ಟ್ಯಾಂಕ್ ಬಡಾವಣೆ‌ ನಿವಾಸಿಗಳಾದ ಮುದಸೀರ್ ( 35), ಮುಜಾಹಿದ್ (25) ಹಾಗೂ ಅಹಮ್ಮದ್ ಪಾಷ ಅಲಿಯಾಸ್ ಬಾಜಿ ( 46) ಮೃತರು. ಎಲ್ಲರೂ ವೃತ್ತಿಯಲ್ಲಿ ಚಾಲಕರಾಗಿದ್ದು, ಕ್ಯಾಂಟರ್ ವಾಹನಗಳನ್ನು ತಂದು ಮಾರಾಟ ಮಾಡುವ ಸಲುವಾಗಿ ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದರು ಎಂದು ಕುಟುಂಬದವರು ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಶವಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ತಹಶೀಲ್ದಾರ್ ಕುಂಜಿ ಅಹ್ಮದ್ ಶವಾಗಾರಕ್ಕೆ ಭೇಟಿ ನೀಡಿ ಅಪಘಾತದ ವಿವರ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT