<p><strong>ಮೈಸೂರು</strong>: ‘ಮುಡಾ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿ ಮುಡಾ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬುಧವಾರ ಬಂಧಿಸಿ ಬಿಡುಗಡೆ ಮಾಡಿದರು.</p>.<p>ಗನ್ಹೌಸ್ ಬಳಿ ಜಮಾಯಿಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ‘ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಿ’, ‘ಮುಡಾದ 50:50 ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಲಿ’ ಎಂಬ ಘೋಷಣೆಗಳುಳ್ಳ ಫಲಕಗಳನ್ನು ಪ್ರದರ್ಶಿಸಿದರು. ಪಾದಯಾತ್ರೆ ಆರಂಭಿಸುತ್ತಿದ್ದಂತೆಯೇ ಪೊಲೀಸರು ತಡೆದು ಬಂಧಿಸಿದರು.</p>.<p>ಇನ್ನೊಂದೆಡೆ, ಬೇರೆ ಊರುಗಳಿಂದ ಬಂದ ಪ್ರತಿಭಟನಾಕಾರರು ರೈಲ್ವೆ ನಿಲ್ದಾಣದ ಬಳಿ ಒಟ್ಟು ಸೇರಿ ಮುಡಾ ಕಡೆಗೆ ಧಾವಿಸಿದರು. ರೋಟರಿ ಶಾಲೆ ವೃತ್ತದಲ್ಲಿ ಪೊಲೀಸರು ತಡೆದಾಗ ಮಾತಿನ ಚಕಮಕಿ ನಡೆಯಿತು. ಬ್ಯಾರಿಕೇಡ್ ದಾಟಿ ಮುನ್ನುಗ್ಗಲು ಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದರು.</p>.<p>ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ, ಉಪಾಧ್ಯಕ್ಷ ಎಸ್.ಎಚ್. ಲಿಂಗೇಗೌಡ, ಪ್ರಧಾನ ಕಾರ್ಯದರ್ಶಿ ಸಿ.ಎನ್. ದೀಪಕ್ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮುಡಾ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿ ಮುಡಾ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬುಧವಾರ ಬಂಧಿಸಿ ಬಿಡುಗಡೆ ಮಾಡಿದರು.</p>.<p>ಗನ್ಹೌಸ್ ಬಳಿ ಜಮಾಯಿಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ‘ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಿ’, ‘ಮುಡಾದ 50:50 ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಲಿ’ ಎಂಬ ಘೋಷಣೆಗಳುಳ್ಳ ಫಲಕಗಳನ್ನು ಪ್ರದರ್ಶಿಸಿದರು. ಪಾದಯಾತ್ರೆ ಆರಂಭಿಸುತ್ತಿದ್ದಂತೆಯೇ ಪೊಲೀಸರು ತಡೆದು ಬಂಧಿಸಿದರು.</p>.<p>ಇನ್ನೊಂದೆಡೆ, ಬೇರೆ ಊರುಗಳಿಂದ ಬಂದ ಪ್ರತಿಭಟನಾಕಾರರು ರೈಲ್ವೆ ನಿಲ್ದಾಣದ ಬಳಿ ಒಟ್ಟು ಸೇರಿ ಮುಡಾ ಕಡೆಗೆ ಧಾವಿಸಿದರು. ರೋಟರಿ ಶಾಲೆ ವೃತ್ತದಲ್ಲಿ ಪೊಲೀಸರು ತಡೆದಾಗ ಮಾತಿನ ಚಕಮಕಿ ನಡೆಯಿತು. ಬ್ಯಾರಿಕೇಡ್ ದಾಟಿ ಮುನ್ನುಗ್ಗಲು ಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದರು.</p>.<p>ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ, ಉಪಾಧ್ಯಕ್ಷ ಎಸ್.ಎಚ್. ಲಿಂಗೇಗೌಡ, ಪ್ರಧಾನ ಕಾರ್ಯದರ್ಶಿ ಸಿ.ಎನ್. ದೀಪಕ್ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>