ನಂಜನಗೂಡು: ತಾಲ್ಲೂಕಿನ ಸುತ್ತೂರು ಕ್ಷೇತ್ರದಲ್ಲಿ ಮೇ 24ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದ್ದು, ಎಲ್ಲಾ ವರ್ಗದವರೂ ಈ ಕಲ್ಯಾಣ ಕಾರ್ಯದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ವಿವಾಹದಲ್ಲಿ ಭಾಗವಹಿಸುವ ವರನಿಗೆ 21 ವರ್ಷ, ವಧುವಿಗೆ 18 ವರ್ಷ ಪೂರ್ಣಗೊಂಡಿರಬೇಕು. ಅರ್ಜಿ ನಮೂನೆಯಲ್ಲಿ ವರ ಮತ್ತು ವಧುವಿನ ಭಾವಚಿತ್ರಗಳನ್ನು ಲಗತ್ತಿಸಿರಬೇಕು. ಜಾತಿ ದೃಢೀಕರಣ ಪತ್ರ ವಧುವರರ ವಯಸ್ಸಿನ ಬಗ್ಗೆ ಶಾಲೆಯಿಂದ ಪಡೆದ ದಾಖಲಾತಿ ಪತ್ರ ಪಡೆದ ದೃಢೀಕರಣ ಪತ್ರ ಲಗತ್ತಿಸಿರಬೇಕು. ಬಾಲ್ಯ ವಿವಾಹಕ್ಕೆ ಅವಕಾಶವಿರುವುದಿಲ್ಲ.
8 ದಿನಗಳ ಮುಂಚಿತವಾಗಿ ಆಡಳಿತಾಧಿಕಾರಿಗಳು, ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳು, ಸುತ್ತೂರು ಇವರನ್ನು ನೇರವಾಗಿ ಸಂಪರ್ಕಿಸಿ ಅಥವಾ ದೂರವಾಣಿ: 08221–232217, 232033, ಮೊ. 9741342222, 9449030588 ಸಂಪರ್ಕಿಸಿ ಮಾಹಿತಿ ಪಡೆದು ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.