<p><strong>ಮೈಸೂರು:</strong> ನಗರದ ಹೆಬ್ಬಾಳದಲ್ಲಿರುವ ಗಣಪತ್ ಲಾಲ್ ಮಾಲಿಕತ್ವದ ಕಟ್ಟಡಕ್ಕೆ ಎಂಡಿಎಂಎ ತಯಾರು ಮಾಡುತ್ತಿದ್ದ ಆರೋಪದಲ್ಲಿ ದೆಹಲಿಯ ಎನ್ ಸಿಬಿ (ನಾರ್ಕೊಟಿಕ್ ಕಂಟ್ರೋಲ್ ಬ್ಯೂರೊ) ಪೊಲೀಸರು ದಾಳಿ ನಡೆಸಿದ್ದಾರೆ.</p><p>ಜೆ.ಕೆ ಟಯರ್ಸ್ ಹಿಂಭಾಗದ ರಸ್ತೆಯಲ್ಲಿರುವ ಕಟ್ಟಡದಲ್ಲಿ ರಾಸಾಯನಿಕ ತಯಾರಿಕ ಘಟಕವೊಂದು ಪತ್ತೆಯಾಗಿದ್ದು. ಘಟಕದ ಸಿಬ್ಬಂದಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. </p><p>ಈಚೆಗೆ ನರಸಿಂಹರಾಜ ಠಾಣಾ ವ್ಯಾಪ್ತಿಯಲ್ಲಿ ಮಹಾರಾಷ್ಟ್ರ ಪೊಲೀಸರು ಎಂಡಿಎ ತಯಾರಿಕಾ ಘಟಕ ಪತ್ತೆಹಚ್ಚಿದ್ದರು.</p><p>ಕೋಟ್ಯಾಂತರ ಮೌಲ್ಯದ ಎಂಡಿಎಂಎ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಖಚಿತಪಡಿಸಿಲ್ಲ.</p><p>'ಇದು ಫಿನೈಲ್ ಕಾರ್ಖಾನೆ, ಕಾಸ್ಟಿಕ್ ಸೋಡಾ ಮತ್ತು ಉಪ್ಪಿನಂತಹ ಮಾರ್ಜಕ ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಸಂಬಂಧಿಸಿದ ಯಾವುದೇ ವಸ್ತು ಸಿಕ್ಕಿಲ್ಲ' ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>'ಕಟ್ಟಡವು ಬೋರೇಗೌಡ ಅವರಿಗೆ ಸೇರಿದ್ದು, ಗಣಪತ್ ಲಾಲ್ ಅವರು ಕಳೆದ ಫೆಬ್ರವರಿಯಿಂದ ಕಟ್ಟಡವನ್ನು ತಿಂಗಳಿಗೆ ₹ 47 ಸಾವಿರ ಬಾಡಿಗೆಗೆ ಪಡೆದಿದ್ದರು. ಗಣಪತ್ ಲಾಲ್ ಸಂಬಂಧಿಯೊಬ್ಬ ಗುಜರಾತ್ ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿದ್ದಾನೆ. ಅಲ್ಲಿನ ಮಾಹಿತಿ ಆಧರಿಸಿ ಇಲ್ಲಿ ದಾಳಿ ನಡೆಸಿದ್ದಾರೆ' ಎಂದು ಬೋರೇಗೌಡ ಅವರ ವಕೀಲ ಭರತ್ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರದ ಹೆಬ್ಬಾಳದಲ್ಲಿರುವ ಗಣಪತ್ ಲಾಲ್ ಮಾಲಿಕತ್ವದ ಕಟ್ಟಡಕ್ಕೆ ಎಂಡಿಎಂಎ ತಯಾರು ಮಾಡುತ್ತಿದ್ದ ಆರೋಪದಲ್ಲಿ ದೆಹಲಿಯ ಎನ್ ಸಿಬಿ (ನಾರ್ಕೊಟಿಕ್ ಕಂಟ್ರೋಲ್ ಬ್ಯೂರೊ) ಪೊಲೀಸರು ದಾಳಿ ನಡೆಸಿದ್ದಾರೆ.</p><p>ಜೆ.ಕೆ ಟಯರ್ಸ್ ಹಿಂಭಾಗದ ರಸ್ತೆಯಲ್ಲಿರುವ ಕಟ್ಟಡದಲ್ಲಿ ರಾಸಾಯನಿಕ ತಯಾರಿಕ ಘಟಕವೊಂದು ಪತ್ತೆಯಾಗಿದ್ದು. ಘಟಕದ ಸಿಬ್ಬಂದಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. </p><p>ಈಚೆಗೆ ನರಸಿಂಹರಾಜ ಠಾಣಾ ವ್ಯಾಪ್ತಿಯಲ್ಲಿ ಮಹಾರಾಷ್ಟ್ರ ಪೊಲೀಸರು ಎಂಡಿಎ ತಯಾರಿಕಾ ಘಟಕ ಪತ್ತೆಹಚ್ಚಿದ್ದರು.</p><p>ಕೋಟ್ಯಾಂತರ ಮೌಲ್ಯದ ಎಂಡಿಎಂಎ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಖಚಿತಪಡಿಸಿಲ್ಲ.</p><p>'ಇದು ಫಿನೈಲ್ ಕಾರ್ಖಾನೆ, ಕಾಸ್ಟಿಕ್ ಸೋಡಾ ಮತ್ತು ಉಪ್ಪಿನಂತಹ ಮಾರ್ಜಕ ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಸಂಬಂಧಿಸಿದ ಯಾವುದೇ ವಸ್ತು ಸಿಕ್ಕಿಲ್ಲ' ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>'ಕಟ್ಟಡವು ಬೋರೇಗೌಡ ಅವರಿಗೆ ಸೇರಿದ್ದು, ಗಣಪತ್ ಲಾಲ್ ಅವರು ಕಳೆದ ಫೆಬ್ರವರಿಯಿಂದ ಕಟ್ಟಡವನ್ನು ತಿಂಗಳಿಗೆ ₹ 47 ಸಾವಿರ ಬಾಡಿಗೆಗೆ ಪಡೆದಿದ್ದರು. ಗಣಪತ್ ಲಾಲ್ ಸಂಬಂಧಿಯೊಬ್ಬ ಗುಜರಾತ್ ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿದ್ದಾನೆ. ಅಲ್ಲಿನ ಮಾಹಿತಿ ಆಧರಿಸಿ ಇಲ್ಲಿ ದಾಳಿ ನಡೆಸಿದ್ದಾರೆ' ಎಂದು ಬೋರೇಗೌಡ ಅವರ ವಕೀಲ ಭರತ್ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>