<p><strong>ನಂಜನಗೂಡು</strong>: ತಾಲ್ಲೂಕಿನ ಕಾಡಂಚಿನ ಭಾಗದ ಗ್ರಾಮಗಳಲ್ಲಿನ ಮಾನವ-ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ಸಲುವಾಗಿ ಕಾಡು ಪ್ರಾಣಿಗಳು ಕಾಡಿನಿಂದ ಹೊರಬರುವುದನ್ನು ತಡೆಯಲು ನೆಟ್ಟಿರುವ ರೈಲ್ವೆ ಕಂಬಿಗಳ ಬ್ಯಾರಿಕೇಡ್ಗಳಿಗೆ ₹42 ಲಕ್ಷ ವೆಚ್ಚದಲ್ಲಿ ಚೈನ್ ಲಿಂಕ್ ಮೆಸ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ’ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.</p>.<p>ತಾಲ್ಲೂಕಿನ ಹೆಡಿಯಾಲ ಸಮೀಪದ ಕಾಡಂಚಿನ ಕಾಳನಹುಂಡಿ ಗ್ರಾಮದಲ್ಲಿ ಮಂಗಳವಾರ ಚೈನ್ ಲಿಂಕ್ ಮೆಸ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿ, ‘ಮೆಸ್ ಅಳವಡಿಸುವುದರಿಂದ ಜಿಂಕೆ, ಕಾಡುಹಂದಿಗಳು ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸುವುದನ್ನು ತಡೆಯಬಹುದಾಗಿದೆ’ ಎಂದು ಹೇಳಿದರು.</p>.<p>‘ಹೆಡಿಯಾಲ ಭಾಗದ ಕಾಡಂಚಿನ ಗ್ರಾಮಗಳಲ್ಲಿ ಮಾನವ -ಪ್ರಾಣಿ ಸಂಘರ್ಷ ತಪ್ಪಿಸುವ ಸಲುವಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ರೈತರು ಅನುಭವಿಸುತ್ತಿರುವ ಕಷ್ಟಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರಿಂದ ಕಾಡಂಚಿನ ಭಾಗದ 8 ಕಿ.ಮೀವರೆಗೆ ರೈಲ್ವೆ ಕಂಬಿ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಬಾಕಿ ಉಳಿದಿದ್ದ 3 ಕಿ.ಮೀ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ಗೆ ಚೈನ್ ಲಿಂಕ್ ಮೆಸ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದರಿಂದ ಹೆಡಿಯಾಲ ಕಾಡಂಚಿನ ಭಾಗದ ಗ್ರಾಮಗಳ ರೈತರ ಜಮೀನುಗಳಿಗೆ ಕಾಡು ಪ್ರಾಣಿಗಳು ದಾಳಿ ಮಾಡುವುದು ತಪ್ಪುತ್ತದೆ’ ಎಂದು ಹೇಳಿದರು.</p>.<p>‘ಓಂಕಾರ ಅರಣ್ಯ ಪ್ರದೇಶದ 8 ಕಿ.ಮೀ ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಟ್ ಮತ್ತು ಮೆಸ್ ಅಳವಡಿಕೆ ಕಾಮಗಾರಿ ಟೆಂಡರ್ ಪ್ರಕ್ರಿಯೆ ಹಂತದಲ್ಲಿದ್ದು, ಪೂರ್ಣಗೊಂಡಲ್ಲಿ ನಮ್ಮ ತಾಲ್ಲೂಕಿನಲ್ಲಿ ಮಾನವ -ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ದೊರೆಯಲಿದೆ, ರೈತರು ಕಾಡು ಪ್ರಾಣಿಗಳ ದಾಳಿಯ ಭಯವಿಲ್ಲದೆ ಕೃಷಿ ಚಟುವಟಿಕೆಗಳಲ್ಲಿ ತೊಡಗಬಹುದಾಗಿದೆ’ ಎಂದರು.</p>.<p>‘ದೇವೇಗೌಡನಪುರ ಗ್ರಾಮದಲ್ಲಿ ₹14.5 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿ, ಕಸುವಿನಹಳ್ಳಿಯಲ್ಲಿ ₹13 ಲಕ್ಷ ವೆಚ್ಚದಲ್ಲಿ ಬಸ್ ನಿಲ್ದಾಣ, ಮಸಗೆ ಗ್ರಾಮದಲ್ಲಿ ₹20 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನ, ಎಚಗುಂಡ್ಲ, ಮಸಗೆ, ದೇವಿರಮ್ಮನಹಳ್ಳಿ ಪಾಳ್ಯ, ಹೆಗ್ಗಡಹಳ್ಳಿ ಗ್ರಾಮಗಳಲ್ಲಿ ₹1.20 ಕೋಟಿ ವೆಚ್ಚದಲ್ಲಿ ಅಚ್ಚುಕಟ್ಟು ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಒಟ್ಟು ₹2.95 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ’</p>.<p>ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕಾಡಾ ಅಧ್ಯಕ್ಷ ಮರಿಸ್ವಾಮಿ, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಕೆ. ಮಾರುತಿ, ನಾಗೇಶ್ ರಾಜ್, ಗೋವಿಂದರಾಜು, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕರಳಾಪುರ ನಾಗರಾಜು, ಕಳಲೆ ಮಹೇಶ್, ಕಳಲೆ ರಾಜೇಶ್, ಹಲ್ಲರೆ ಮಹದೇವು, ಲಕ್ಷ್ಮಣ, ಚಿನ್ನಸ್ವಾಮಿ, ಪಾಪಣ್ಣ,ಅಶ್ರಫ್ ಅಲಿ, ನೇಮತ್ ಉಲ್ಲಾ ಖಾನ್, ಹಾಡ್ಯ ಜಯರಾಮು, ಜಿಲ್ಲಾ ಪಂಚಾಯತ್ ಎಇಇ ರಾಜು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್, ವಲಯ ಅರಣ್ಯಾಧಿಕಾರಿ ಎಸ್.ಕೆ.ಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ತಾಲ್ಲೂಕಿನ ಕಾಡಂಚಿನ ಭಾಗದ ಗ್ರಾಮಗಳಲ್ಲಿನ ಮಾನವ-ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ಸಲುವಾಗಿ ಕಾಡು ಪ್ರಾಣಿಗಳು ಕಾಡಿನಿಂದ ಹೊರಬರುವುದನ್ನು ತಡೆಯಲು ನೆಟ್ಟಿರುವ ರೈಲ್ವೆ ಕಂಬಿಗಳ ಬ್ಯಾರಿಕೇಡ್ಗಳಿಗೆ ₹42 ಲಕ್ಷ ವೆಚ್ಚದಲ್ಲಿ ಚೈನ್ ಲಿಂಕ್ ಮೆಸ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ’ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.</p>.<p>ತಾಲ್ಲೂಕಿನ ಹೆಡಿಯಾಲ ಸಮೀಪದ ಕಾಡಂಚಿನ ಕಾಳನಹುಂಡಿ ಗ್ರಾಮದಲ್ಲಿ ಮಂಗಳವಾರ ಚೈನ್ ಲಿಂಕ್ ಮೆಸ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿ, ‘ಮೆಸ್ ಅಳವಡಿಸುವುದರಿಂದ ಜಿಂಕೆ, ಕಾಡುಹಂದಿಗಳು ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸುವುದನ್ನು ತಡೆಯಬಹುದಾಗಿದೆ’ ಎಂದು ಹೇಳಿದರು.</p>.<p>‘ಹೆಡಿಯಾಲ ಭಾಗದ ಕಾಡಂಚಿನ ಗ್ರಾಮಗಳಲ್ಲಿ ಮಾನವ -ಪ್ರಾಣಿ ಸಂಘರ್ಷ ತಪ್ಪಿಸುವ ಸಲುವಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ರೈತರು ಅನುಭವಿಸುತ್ತಿರುವ ಕಷ್ಟಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರಿಂದ ಕಾಡಂಚಿನ ಭಾಗದ 8 ಕಿ.ಮೀವರೆಗೆ ರೈಲ್ವೆ ಕಂಬಿ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಬಾಕಿ ಉಳಿದಿದ್ದ 3 ಕಿ.ಮೀ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ಗೆ ಚೈನ್ ಲಿಂಕ್ ಮೆಸ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದರಿಂದ ಹೆಡಿಯಾಲ ಕಾಡಂಚಿನ ಭಾಗದ ಗ್ರಾಮಗಳ ರೈತರ ಜಮೀನುಗಳಿಗೆ ಕಾಡು ಪ್ರಾಣಿಗಳು ದಾಳಿ ಮಾಡುವುದು ತಪ್ಪುತ್ತದೆ’ ಎಂದು ಹೇಳಿದರು.</p>.<p>‘ಓಂಕಾರ ಅರಣ್ಯ ಪ್ರದೇಶದ 8 ಕಿ.ಮೀ ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಟ್ ಮತ್ತು ಮೆಸ್ ಅಳವಡಿಕೆ ಕಾಮಗಾರಿ ಟೆಂಡರ್ ಪ್ರಕ್ರಿಯೆ ಹಂತದಲ್ಲಿದ್ದು, ಪೂರ್ಣಗೊಂಡಲ್ಲಿ ನಮ್ಮ ತಾಲ್ಲೂಕಿನಲ್ಲಿ ಮಾನವ -ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ದೊರೆಯಲಿದೆ, ರೈತರು ಕಾಡು ಪ್ರಾಣಿಗಳ ದಾಳಿಯ ಭಯವಿಲ್ಲದೆ ಕೃಷಿ ಚಟುವಟಿಕೆಗಳಲ್ಲಿ ತೊಡಗಬಹುದಾಗಿದೆ’ ಎಂದರು.</p>.<p>‘ದೇವೇಗೌಡನಪುರ ಗ್ರಾಮದಲ್ಲಿ ₹14.5 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿ, ಕಸುವಿನಹಳ್ಳಿಯಲ್ಲಿ ₹13 ಲಕ್ಷ ವೆಚ್ಚದಲ್ಲಿ ಬಸ್ ನಿಲ್ದಾಣ, ಮಸಗೆ ಗ್ರಾಮದಲ್ಲಿ ₹20 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನ, ಎಚಗುಂಡ್ಲ, ಮಸಗೆ, ದೇವಿರಮ್ಮನಹಳ್ಳಿ ಪಾಳ್ಯ, ಹೆಗ್ಗಡಹಳ್ಳಿ ಗ್ರಾಮಗಳಲ್ಲಿ ₹1.20 ಕೋಟಿ ವೆಚ್ಚದಲ್ಲಿ ಅಚ್ಚುಕಟ್ಟು ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಒಟ್ಟು ₹2.95 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ’</p>.<p>ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕಾಡಾ ಅಧ್ಯಕ್ಷ ಮರಿಸ್ವಾಮಿ, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಕೆ. ಮಾರುತಿ, ನಾಗೇಶ್ ರಾಜ್, ಗೋವಿಂದರಾಜು, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕರಳಾಪುರ ನಾಗರಾಜು, ಕಳಲೆ ಮಹೇಶ್, ಕಳಲೆ ರಾಜೇಶ್, ಹಲ್ಲರೆ ಮಹದೇವು, ಲಕ್ಷ್ಮಣ, ಚಿನ್ನಸ್ವಾಮಿ, ಪಾಪಣ್ಣ,ಅಶ್ರಫ್ ಅಲಿ, ನೇಮತ್ ಉಲ್ಲಾ ಖಾನ್, ಹಾಡ್ಯ ಜಯರಾಮು, ಜಿಲ್ಲಾ ಪಂಚಾಯತ್ ಎಇಇ ರಾಜು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್, ವಲಯ ಅರಣ್ಯಾಧಿಕಾರಿ ಎಸ್.ಕೆ.ಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>