<p><strong>ಮೈಸೂರು:</strong> ‘ಜಿಲ್ಲಾ ಯೋಜನಾ ವರದಿಗಳನ್ನು ಬಜೆಟ್ ಸಿದ್ಧಪಡಿಸುವ ಮೊದಲು ಸಮಿತಿಗೆ ಸಲ್ಲಿಸಬೇಕು. ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳು ವರದಿಯನ್ನು ಡಿ.15ರೊಳಗೆ ಕೊಡಬೇಕು’ ಎಂದು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಮೈಸೂರು ವಿಭಾಗದ 8 ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ವಿಕೇಂದ್ರೀಕರಣ ವ್ಯವಸ್ಥೆಯನ್ನು ಸೈದ್ಧಾಂತಿಕವಾಗಿ ನಾವು ಒಪ್ಪಿಕೊಂಡಿದ್ದರೂ ಜಿಲ್ಲಾ ಯೋಜನಾ ವರದಿ ತಯಾರಿಕೆ ಸಮಿತಿ ಸಭೆಗಳು ನಿಗದಿತವಾಗಿ ನಡೆಯಬೇಕು. ಆ ವರದಿಯಲ್ಲಿ ಸುಸ್ಥಿರ ಅಭಿವೃದ್ಧಿ, ಜಿಡಿಪಿ, ಮಾನವ ಅಭಿವೃದ್ಧಿ ಸೂಚ್ಯಂಕಕ್ಕೆ ಆದ್ಯತೆ ನೀಡಬೇಕು’ ಎಂದು ತಿಳಿಸಿದರು. </p>.<p>‘ಜಿಲ್ಲಾ ಮಟ್ಟದಲ್ಲಿ ಯೋಜನೆ ತಯಾರಿಸುವಾಗ ಸಮರ್ಪಕವಾಗಿ ಪರಿಶೀಲಿಸಬೇಕು. ಆಯಾ ಜಿಲ್ಲೆಯಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಹೇಳಿದರು.</p>.<p class="Subhead">ಅರ್ಥ ಮಾಡಿಕೊಂಡು ಕ್ರಮ ವಹಿಸಿ: </p>.<p>‘ಮಾನವ ಅಭಿವೃದ್ಧಿ ಸೂಚ್ಯಂಕ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಬೇಕು. ಲಭ್ಯವಿರುವ ಅನುದಾನದ ಆಧಾರದ ಮೇಲೆ ಯೋಜನೆ ರೂಪಿಸಿ ಅನುಷ್ಠಾನದ ನಂತರ ಉಂಟಾಗುವ ಉತ್ತಮ ಬೆಳವಣಿಗೆಯ ಬಗ್ಗೆ ಅರ್ಥ ಮಾಡಿಕೊಂಡು ಕ್ರಮ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್ ಮಾತನಾಡಿ, ‘ಜಿಲ್ಲೆಯ 9 ತಾಲ್ಲೂಕುಗಳಲ್ಲಿ ಆಯಾ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಯೋಜನಾ ಸಮಿತಿ ಸಭೆಯನ್ನು ನ.4ರಿಂದ 15ರವರೆಗೆ ನಡೆಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಿ ವರದಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.</p>.<p class="Subhead">ಯೋಜನೆ ಸಿದ್ಧಪಡಿಸಲಾಗುತ್ತಿದೆ: </p>.<p>‘ಸುಸ್ಥಿರ ಅಭಿವೃದ್ಧಿಯಲ್ಲಿ ಮುಖ್ಯವಾಗಿ ಶಿಕ್ಷಣ, ಕೃಷಿ, ಪೌಷ್ಟಿಕ ಆಹಾರ ಸೇರಿದಂತೆ ಹಲವು ವಿಷಯವನ್ನು ಮುಖ್ಯವಾಗಿಟ್ಟುಕೊಂಡು ಯೋಜನೆ ಸಿದ್ಧಪಡಿಸಲಾಗುತ್ತಿದೆ’ ಎಂದು ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ ಮಾಹಿತಿ ನೀಡಿದರು.</p>.<p>ಮಾನವ ಯೋಜನೆ ಸಂಯೋಜನೆಯ ಹಿರಿಯ ನಿರ್ದೇಶಕ ಬಸವರಾಜು ಎಸ್. ಅವರು ಮಾನವ ಅಭಿವೃದ್ಧಿ, ಸುಸ್ಥಿರ ಅಭಿವೃದ್ಧಿ ಸಾಧಿಸುವುದು ಹೇಗೆ? ಯಾವ ಯಾವ ಜಿಲ್ಲೆಗಳು ಹೆಚ್ಚು ಪ್ರಗತಿ ಸಾಧಿಸಿದೆ, ಯಾವ ಕ್ಷೇತ್ರ ಹಿಂದುಳಿದಿದೆ ಎಂಬಿತ್ಯಾದಿ ವಿಷಯ ಮಂಡಿಸಿದರು.</p>.<p>ಸರ್ಕಾರದ ಕಾರ್ಯದರ್ಶಿ ರಮಣ್ದೀಪ್ ಚೌದರಿ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮಂಗಳೂರು ಜಿಲ್ಲೆಯ ಸಿಇಒಗಳು, ತಾಲ್ಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಜಿಲ್ಲಾ ಯೋಜನಾ ವರದಿಗಳನ್ನು ಬಜೆಟ್ ಸಿದ್ಧಪಡಿಸುವ ಮೊದಲು ಸಮಿತಿಗೆ ಸಲ್ಲಿಸಬೇಕು. ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳು ವರದಿಯನ್ನು ಡಿ.15ರೊಳಗೆ ಕೊಡಬೇಕು’ ಎಂದು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಮೈಸೂರು ವಿಭಾಗದ 8 ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ವಿಕೇಂದ್ರೀಕರಣ ವ್ಯವಸ್ಥೆಯನ್ನು ಸೈದ್ಧಾಂತಿಕವಾಗಿ ನಾವು ಒಪ್ಪಿಕೊಂಡಿದ್ದರೂ ಜಿಲ್ಲಾ ಯೋಜನಾ ವರದಿ ತಯಾರಿಕೆ ಸಮಿತಿ ಸಭೆಗಳು ನಿಗದಿತವಾಗಿ ನಡೆಯಬೇಕು. ಆ ವರದಿಯಲ್ಲಿ ಸುಸ್ಥಿರ ಅಭಿವೃದ್ಧಿ, ಜಿಡಿಪಿ, ಮಾನವ ಅಭಿವೃದ್ಧಿ ಸೂಚ್ಯಂಕಕ್ಕೆ ಆದ್ಯತೆ ನೀಡಬೇಕು’ ಎಂದು ತಿಳಿಸಿದರು. </p>.<p>‘ಜಿಲ್ಲಾ ಮಟ್ಟದಲ್ಲಿ ಯೋಜನೆ ತಯಾರಿಸುವಾಗ ಸಮರ್ಪಕವಾಗಿ ಪರಿಶೀಲಿಸಬೇಕು. ಆಯಾ ಜಿಲ್ಲೆಯಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಹೇಳಿದರು.</p>.<p class="Subhead">ಅರ್ಥ ಮಾಡಿಕೊಂಡು ಕ್ರಮ ವಹಿಸಿ: </p>.<p>‘ಮಾನವ ಅಭಿವೃದ್ಧಿ ಸೂಚ್ಯಂಕ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಬೇಕು. ಲಭ್ಯವಿರುವ ಅನುದಾನದ ಆಧಾರದ ಮೇಲೆ ಯೋಜನೆ ರೂಪಿಸಿ ಅನುಷ್ಠಾನದ ನಂತರ ಉಂಟಾಗುವ ಉತ್ತಮ ಬೆಳವಣಿಗೆಯ ಬಗ್ಗೆ ಅರ್ಥ ಮಾಡಿಕೊಂಡು ಕ್ರಮ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್ ಮಾತನಾಡಿ, ‘ಜಿಲ್ಲೆಯ 9 ತಾಲ್ಲೂಕುಗಳಲ್ಲಿ ಆಯಾ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಯೋಜನಾ ಸಮಿತಿ ಸಭೆಯನ್ನು ನ.4ರಿಂದ 15ರವರೆಗೆ ನಡೆಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಿ ವರದಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.</p>.<p class="Subhead">ಯೋಜನೆ ಸಿದ್ಧಪಡಿಸಲಾಗುತ್ತಿದೆ: </p>.<p>‘ಸುಸ್ಥಿರ ಅಭಿವೃದ್ಧಿಯಲ್ಲಿ ಮುಖ್ಯವಾಗಿ ಶಿಕ್ಷಣ, ಕೃಷಿ, ಪೌಷ್ಟಿಕ ಆಹಾರ ಸೇರಿದಂತೆ ಹಲವು ವಿಷಯವನ್ನು ಮುಖ್ಯವಾಗಿಟ್ಟುಕೊಂಡು ಯೋಜನೆ ಸಿದ್ಧಪಡಿಸಲಾಗುತ್ತಿದೆ’ ಎಂದು ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ ಮಾಹಿತಿ ನೀಡಿದರು.</p>.<p>ಮಾನವ ಯೋಜನೆ ಸಂಯೋಜನೆಯ ಹಿರಿಯ ನಿರ್ದೇಶಕ ಬಸವರಾಜು ಎಸ್. ಅವರು ಮಾನವ ಅಭಿವೃದ್ಧಿ, ಸುಸ್ಥಿರ ಅಭಿವೃದ್ಧಿ ಸಾಧಿಸುವುದು ಹೇಗೆ? ಯಾವ ಯಾವ ಜಿಲ್ಲೆಗಳು ಹೆಚ್ಚು ಪ್ರಗತಿ ಸಾಧಿಸಿದೆ, ಯಾವ ಕ್ಷೇತ್ರ ಹಿಂದುಳಿದಿದೆ ಎಂಬಿತ್ಯಾದಿ ವಿಷಯ ಮಂಡಿಸಿದರು.</p>.<p>ಸರ್ಕಾರದ ಕಾರ್ಯದರ್ಶಿ ರಮಣ್ದೀಪ್ ಚೌದರಿ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮಂಗಳೂರು ಜಿಲ್ಲೆಯ ಸಿಇಒಗಳು, ತಾಲ್ಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>