<p><strong>ಮೈಸೂರು</strong>: ‘ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಕೊಡಿಸದೇ ಎಚ್.ಡಿ. ಕುಮಾರಸ್ವಾಮಿ ವಚನ ಭ್ರಷ್ಟರಾಗಿದ್ದಾರೆ’ ಎಂದು ದೂರಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಪಂಚಾಯಿತಿ ಭವನದ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು.</p>.<p>‘ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮಂಡ್ಯ ಜನತೆ ಗೆಲ್ಲಿಸಿದ ಮಾರನೇ ದಿನವೇ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆಂದು ಒಪ್ಪಿಸಿ, ಮತ ಪಡೆದು ಗೆದ್ದ ನಂತರ ಯೋಜನೆಗೆ ಅನುಮತಿ ಕೊಡಿಸುವಲ್ಲಿ ಕುಮಾರಸ್ವಾಮಿ ವಿಫಲರಾಗಿದ್ದಾರೆ’ ಎಂದು ದೂರಿದರು.</p>.<p>‘ಈ ಯೋಜನೆಗಾಗಿ ರಾಜ್ಯ ಸರ್ಕಾರವು ಭೂಮಿ ಸರ್ವೆ, ಮರಗಳ ಎಣಿಕೆಗೆ ಚಾಲನೆ ನೀಡಿ, ಡಿಪಿಆರ್ ಸಿದ್ಧಪಡಿಸಿದೆ. ಕೂಡಲೇ ಅನುಮತಿ ಕೊಡಿಸಿ’ ಎಂದು ಆಗ್ರಹಿಸಿದರು.</p>.<p>ಕಾಂಗ್ರೆಸ್ ನಗರ ಘಟಕದ ವಕ್ತಾರ ಎಸ್. ರಾಜೇಶ್ ನೇತೃತ್ವ ವಹಿಸಿದ್ದರು. ಮುಖಂಡರಾದ ಮರಿದೇವಯ್ಯ, ನಾಗೇಶ್, ನಟರಾಜ್, ಸೈಯದ್ ಫಾರೂಕ್, ಶಿವಶಂಕರಮೂರ್ತಿ, ಸುನಿಲ್ ನಾರಾಯಣ್, ರಾಜಶೇಖರ್, ಎಸ್.ಎ. ರಹೀಂ, ಲೋಕೇಶ್ ಕುಮಾರ್, ಮೋಹನ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಕೊಡಿಸದೇ ಎಚ್.ಡಿ. ಕುಮಾರಸ್ವಾಮಿ ವಚನ ಭ್ರಷ್ಟರಾಗಿದ್ದಾರೆ’ ಎಂದು ದೂರಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಪಂಚಾಯಿತಿ ಭವನದ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು.</p>.<p>‘ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮಂಡ್ಯ ಜನತೆ ಗೆಲ್ಲಿಸಿದ ಮಾರನೇ ದಿನವೇ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆಂದು ಒಪ್ಪಿಸಿ, ಮತ ಪಡೆದು ಗೆದ್ದ ನಂತರ ಯೋಜನೆಗೆ ಅನುಮತಿ ಕೊಡಿಸುವಲ್ಲಿ ಕುಮಾರಸ್ವಾಮಿ ವಿಫಲರಾಗಿದ್ದಾರೆ’ ಎಂದು ದೂರಿದರು.</p>.<p>‘ಈ ಯೋಜನೆಗಾಗಿ ರಾಜ್ಯ ಸರ್ಕಾರವು ಭೂಮಿ ಸರ್ವೆ, ಮರಗಳ ಎಣಿಕೆಗೆ ಚಾಲನೆ ನೀಡಿ, ಡಿಪಿಆರ್ ಸಿದ್ಧಪಡಿಸಿದೆ. ಕೂಡಲೇ ಅನುಮತಿ ಕೊಡಿಸಿ’ ಎಂದು ಆಗ್ರಹಿಸಿದರು.</p>.<p>ಕಾಂಗ್ರೆಸ್ ನಗರ ಘಟಕದ ವಕ್ತಾರ ಎಸ್. ರಾಜೇಶ್ ನೇತೃತ್ವ ವಹಿಸಿದ್ದರು. ಮುಖಂಡರಾದ ಮರಿದೇವಯ್ಯ, ನಾಗೇಶ್, ನಟರಾಜ್, ಸೈಯದ್ ಫಾರೂಕ್, ಶಿವಶಂಕರಮೂರ್ತಿ, ಸುನಿಲ್ ನಾರಾಯಣ್, ರಾಜಶೇಖರ್, ಎಸ್.ಎ. ರಹೀಂ, ಲೋಕೇಶ್ ಕುಮಾರ್, ಮೋಹನ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>