<p><strong>ತಿ.ನರಸೀಪುರ:</strong> ತಾಲ್ಲೂಕಿನ ಬನ್ನೂರು ಹೋಬಳಿಯ ಮೆಣಸಿನಕ್ಯಾತನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ₹3.29 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಕಾರ್ಯನಿರ್ವಾಹಣಾಧಿಕಾರಿ ಎಂ. ಎಸ್.ರವಿ ತಿಳಿಸಿದರು.</p>.<p>ಸಂಘದ ಆವರಣದಲ್ಲಿ ಅಧ್ಯಕ್ಷ ತಿಮ್ಮೇಗೌಡ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ವರದಿ ಮಂಡಿಸಿದ ಅವರು, ‘ಸದಸ್ಯರಿಂದ ₹1.16ಕೋಟಿ ಮೌಲ್ಯದ ಹಾಲು ಖರೀದಿಸಲಾಗಿದೆ. ಲಾಭದಲ್ಲಿ ₹1.36 ಲಕ್ಷವನ್ನು ಸದಸ್ಯರಿಗೆ ಬೋನಸ್ ರೂಪದಲ್ಲಿ ವಿತರಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವೇಳೆ ವೈಜ್ಞಾನಿಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದ, ಪ್ರಸ್ತುತ ಹುಣಸೂರು ತಾಲ್ಲೂಕಿನಲ್ಲಿ ಸೇವೆಯಲ್ಲಿರುವ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ವಿಜೇತ ಎಚ್.ಎನ್.ಗಿರೀಶ್ ಅವರನ್ನು ಸಂಘ ಹಾಗೂ ಹಳೆಯ ವಿದ್ಯಾರ್ಥಿಗಳು ಸೇರಿ ಅಭಿನಂದಿಸಿದರು.</p>.<p>ಒಕ್ಕೂಟದ ಮಾರ್ಗ ವಿಸ್ತರಣಾಧಿಕಾರಿ ದಿವ್ಯಶ್ರೀ, ಮೈಮುಲ್ ನಿರ್ದೇಶಕ ಓಂ ಪ್ರಕಾಶ್, ಮಹದೇವ, ಮಹೇಶ ಸುರೇಶ, ಕೃಷ್ಣೆಗೌಡ, ಮಂಜುಗೌಡ, ಚಿಕ್ಕರಾಜು, ಮಹೇಶ್ ಎಂ.ಎಸ್.ಬೋರಯ್ಯ, ಪಶುವೈದ್ಯ ಕಾರ್ತಿಕ್ , ಸಂಘದ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿ.ನರಸೀಪುರ:</strong> ತಾಲ್ಲೂಕಿನ ಬನ್ನೂರು ಹೋಬಳಿಯ ಮೆಣಸಿನಕ್ಯಾತನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ₹3.29 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಕಾರ್ಯನಿರ್ವಾಹಣಾಧಿಕಾರಿ ಎಂ. ಎಸ್.ರವಿ ತಿಳಿಸಿದರು.</p>.<p>ಸಂಘದ ಆವರಣದಲ್ಲಿ ಅಧ್ಯಕ್ಷ ತಿಮ್ಮೇಗೌಡ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ವರದಿ ಮಂಡಿಸಿದ ಅವರು, ‘ಸದಸ್ಯರಿಂದ ₹1.16ಕೋಟಿ ಮೌಲ್ಯದ ಹಾಲು ಖರೀದಿಸಲಾಗಿದೆ. ಲಾಭದಲ್ಲಿ ₹1.36 ಲಕ್ಷವನ್ನು ಸದಸ್ಯರಿಗೆ ಬೋನಸ್ ರೂಪದಲ್ಲಿ ವಿತರಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವೇಳೆ ವೈಜ್ಞಾನಿಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದ, ಪ್ರಸ್ತುತ ಹುಣಸೂರು ತಾಲ್ಲೂಕಿನಲ್ಲಿ ಸೇವೆಯಲ್ಲಿರುವ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ವಿಜೇತ ಎಚ್.ಎನ್.ಗಿರೀಶ್ ಅವರನ್ನು ಸಂಘ ಹಾಗೂ ಹಳೆಯ ವಿದ್ಯಾರ್ಥಿಗಳು ಸೇರಿ ಅಭಿನಂದಿಸಿದರು.</p>.<p>ಒಕ್ಕೂಟದ ಮಾರ್ಗ ವಿಸ್ತರಣಾಧಿಕಾರಿ ದಿವ್ಯಶ್ರೀ, ಮೈಮುಲ್ ನಿರ್ದೇಶಕ ಓಂ ಪ್ರಕಾಶ್, ಮಹದೇವ, ಮಹೇಶ ಸುರೇಶ, ಕೃಷ್ಣೆಗೌಡ, ಮಂಜುಗೌಡ, ಚಿಕ್ಕರಾಜು, ಮಹೇಶ್ ಎಂ.ಎಸ್.ಬೋರಯ್ಯ, ಪಶುವೈದ್ಯ ಕಾರ್ತಿಕ್ , ಸಂಘದ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>