<p><strong>ಮೈಸೂರು</strong>: ಕಲುಷಿತ ನೀರು ಸೇವಿಸಿ ಮೃತಪಟ್ಟ ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು ಮನೆಗೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬುಧವಾರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಆರೋಗ್ಯ ಇಲಾಖೆಯು ನಿರ್ಮಿಸಿರುವ ತಾತ್ಕಾಲಿಕ ಕ್ಲಿನಿಕ್ಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಸೂಚನೆಯಂತೆ ಮೃತಪಟ್ಟ ಕನಕರಾಜು ಕುಟುಂಬಕ್ಕೆ ₹2 ಲಕ್ಷ ಪರಿಹಾರ ನೀಡುತ್ತೇವೆ. ಕಲುಷಿತ ನೀರಿನಿಂದ 98 ಜನ ಸೋಂಕಿಗೆ ಒಳಗಾಗಿದ್ದಾರೆ. ಈ ಬಗ್ಗೆ ಮಾದರಿ ಪರಿಶೀಲಿಸಿದಾಗ ವಿಪ್ರಿಯೋ ಕಾಲರಾ ಕಂಡುಬಂದಿದ್ದು, ಜಿಲ್ಲಾಡಳಿತ, ಆರೋಗ್ಯ ಇಲಾಖೆಯು ರೋಗ ತಡೆಗಟ್ಟಲು ಕ್ರಮವಹಿಸಿದೆ’ ಎಂದರು.</p>.<p>‘34 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಐವಿ ಫ್ಲುವಿಡ್, ಆ್ಯಂಟಿ ಬಯಾಟಿಕ್ ನೀಡಿ ಜನ ಆರೋಗ್ಯವಾಗಿರುವಂತೆ ನೋಡಿಕೊಳ್ಳಲಾಗಿದೆ. ಟ್ಯಾಂಕರ್ ಮೂಲಕ ಶುದ್ಧ ನೀರು ಒದಗಿಸುತ್ತಿದ್ದು, ಒಆರ್ಎಸ್ ಪ್ಯಾಕೆಟ್ ನೀಡಿದ್ದಾರೆ. ಮುಡಾದಿಂದ 3 ಹೊಸ ಕೊಳವೆಬಾವಿ ಕೊರೆಸುವ ಚಿಂತನೆ ನಡೆದಿದೆ. ನೀತಿ ಸಂಹಿತೆ ಇರುವುದರಿಂದ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸೂಚನೆ ನೀಡಿದ್ದೇನೆ’ ಎಂದು ಹೇಳಿದರು.</p>.<p>‘ಜನ ಯಾವುದಕ್ಕೂ ಭಯಪಡದೇ, ಸ್ವಚ್ಛತೆಯಿಂದ ಇರಬೇಕು. ಆರೋಗ್ಯ ಇಲಾಖೆ ಗ್ರಾಮಸ್ಥರಿಗೆ ಕುಡಿಯುವ ನೀರಿನೊಂದಿಗೆ ಎಲೋಜಿನ್ ಮಾತ್ರೆ ನೀಡಬೇಕಿದೆ. ಪ್ರಕರಣಕ್ಕೆ ಕಾರಣರಾದವರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಕಲುಷಿತ ನೀರು ಸೇವಿಸಿ ಮೃತಪಟ್ಟ ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು ಮನೆಗೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬುಧವಾರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಆರೋಗ್ಯ ಇಲಾಖೆಯು ನಿರ್ಮಿಸಿರುವ ತಾತ್ಕಾಲಿಕ ಕ್ಲಿನಿಕ್ಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಸೂಚನೆಯಂತೆ ಮೃತಪಟ್ಟ ಕನಕರಾಜು ಕುಟುಂಬಕ್ಕೆ ₹2 ಲಕ್ಷ ಪರಿಹಾರ ನೀಡುತ್ತೇವೆ. ಕಲುಷಿತ ನೀರಿನಿಂದ 98 ಜನ ಸೋಂಕಿಗೆ ಒಳಗಾಗಿದ್ದಾರೆ. ಈ ಬಗ್ಗೆ ಮಾದರಿ ಪರಿಶೀಲಿಸಿದಾಗ ವಿಪ್ರಿಯೋ ಕಾಲರಾ ಕಂಡುಬಂದಿದ್ದು, ಜಿಲ್ಲಾಡಳಿತ, ಆರೋಗ್ಯ ಇಲಾಖೆಯು ರೋಗ ತಡೆಗಟ್ಟಲು ಕ್ರಮವಹಿಸಿದೆ’ ಎಂದರು.</p>.<p>‘34 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಐವಿ ಫ್ಲುವಿಡ್, ಆ್ಯಂಟಿ ಬಯಾಟಿಕ್ ನೀಡಿ ಜನ ಆರೋಗ್ಯವಾಗಿರುವಂತೆ ನೋಡಿಕೊಳ್ಳಲಾಗಿದೆ. ಟ್ಯಾಂಕರ್ ಮೂಲಕ ಶುದ್ಧ ನೀರು ಒದಗಿಸುತ್ತಿದ್ದು, ಒಆರ್ಎಸ್ ಪ್ಯಾಕೆಟ್ ನೀಡಿದ್ದಾರೆ. ಮುಡಾದಿಂದ 3 ಹೊಸ ಕೊಳವೆಬಾವಿ ಕೊರೆಸುವ ಚಿಂತನೆ ನಡೆದಿದೆ. ನೀತಿ ಸಂಹಿತೆ ಇರುವುದರಿಂದ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸೂಚನೆ ನೀಡಿದ್ದೇನೆ’ ಎಂದು ಹೇಳಿದರು.</p>.<p>‘ಜನ ಯಾವುದಕ್ಕೂ ಭಯಪಡದೇ, ಸ್ವಚ್ಛತೆಯಿಂದ ಇರಬೇಕು. ಆರೋಗ್ಯ ಇಲಾಖೆ ಗ್ರಾಮಸ್ಥರಿಗೆ ಕುಡಿಯುವ ನೀರಿನೊಂದಿಗೆ ಎಲೋಜಿನ್ ಮಾತ್ರೆ ನೀಡಬೇಕಿದೆ. ಪ್ರಕರಣಕ್ಕೆ ಕಾರಣರಾದವರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>