ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿ.ಟಿ.ದೇವೇಗೌಡ, ‘ಉಪಾಧ್ಯಕ್ಷರ ಪಟ್ಟಿಯಲ್ಲಿ ಹೆಸರು ಇಲ್ಲವಲ್ಲ ಎಂದು ಅವರು ಹೇಳಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಎಲ್ಲ ಸಚಿವರನ್ನು ಸಮಿತಿಗೆ ಉಪಾಧ್ಯಕ್ಷರನ್ನಾಗಿ ನೇಮಿಸುವ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಎನ್.ಮಹೇಶ್, ಸಾ.ರಾ.ಮಹೇಶ್ ಮತ್ತು ಪುಟ್ಟರಂಗಶೆಟ್ಟಿ ಅವರು ಸಮಿತಿಗೆ ಉಪಾಧ್ಯಕ್ಷರಾಗಿದ್ದಾರೆ. ತುರ್ತಾಗಿ ಹುಬ್ಬಳ್ಳಿಗೆ ತೆರಳಬೇಕಿದ್ದ ಕಾರಣ ಅವರು ಸಭೆಯಿಂದ ಅರ್ಧಕ್ಕೇ ತೆರಳಿದ್ದಾರೆ’ ಎಂದರು.