<p><strong>ಮೈಸೂರು:</strong> ಕೆಡಿಪಿ ಸಭೆಗೆ ತಪ್ಪು ಮಾಹಿತಿ ನೀಡಿದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ ಅಂಗಡಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು.</p><p>‘ಸರಿಯಾದ ಹೋಂವರ್ಕ್ ಮಾಡಿಕೊಂಡು ಬಂದಿಲ್ಲವೇಕೆ? ತಪ್ಪು ಮಾಹಿತಿ ಕೊಟ್ಟರೆ ಹೇಗೆ?’ ಎಂದು ಸಿದ್ದರಾಮಯ್ಯ ಮತ್ತು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಖಾರವಾಗಿ ಕೇಳಿದರು. ಆಗ ಆ ಅಧಿಕಾರಿ ಕ್ಷಮೆ ಕೋರಿದರು. ‘ಮುಂದೆ ಯಡವಟ್ಟುಗಳು ಆಗದಂತೆ ಎಚ್ಚರಿಕೆ ವಹಿಸುತ್ತೇನೆ’ ಎಂದು ತಿಳಿಸಿದರು.</p><p>‘ಹಿಂದೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಿದ್ದರು. ಈಗ ನಮ್ಮ ಸಿದ್ದರಾಮನಹುಂಡಿಯಲ್ಲಿ ಯಾರೂ ರೇಷ್ಮೆ ಬೆಳೆಯುತ್ತಿಲ್ಲವೇಕೆ?’ ಎಂದು ಸಿಎಂ ಕೇಳಿದರು.</p><p>ಉತ್ತರಿಸಿದ ಅಧಿಕಾರಿ, ‘ಸಿದ್ದರಾಮನಹುಂಡಿಯಲ್ಲಿ ಇಬ್ಬರು ಮಾತ್ರ ರೇಷ್ಮೆ ಬೆಳೆಯುತ್ತಿದ್ದಾರೆ’ ಎಂದು ತಿಳಿಸಿದರು.</p><p>‘ರೇಷ್ಮೆ ಬೆಳೆ ಪ್ರದೇಶ ವಿಸ್ತರಿಸಲು ಏನು ಕ್ರಮ ಕೈಗೊಂಡಿದ್ದೀರಿ’ ಎಂಬ ಮುಖ್ಯಮಂತ್ರಿ ಪ್ರಶ್ನೆಗೆ, ‘ಲಭ್ಯ ಸಿಬ್ಬಂದಿಯಲ್ಲೇ 10 ಹಳ್ಳಿ ಆಯ್ಕೆ ಮಾಡಿಕೊಂಡು ವಿಸ್ತರಣೆಗೆ ಕೆಲಸ ಮಾಡುತ್ತಿದ್ದೇವೆ. ನಾವೇ ಗೂಡುಗಳನ್ನು ನಿರ್ಮಿಸಿ ಕೊಟ್ಟು, ಪ್ರೋತ್ಸಾಹ ನೀಡುತ್ತಿದ್ದೇವೆ’ ಎಂದು ಅಧಿಕಾರಿ ವಿವರಿಸಿದರು.</p><p>ಮಧ್ಯಪ್ರವೇಶಿಸಿದ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ‘ಸಿಬ್ಬಂದಿ ಕೊರತೆ ಇದೆ’ ಎಂದು ಹೇಳಿದರು.</p><p>ಆ ಮಾತನ್ನು ಒಪ್ಪದ ಸಿಎಂ, ‘ರೇಷ್ಮೆ ಕೃಷಿ ಕಡಿಮೆಯಾಗಲು ಇದೊಂದೇ ಕಾರಣ ಅಲ್ಲ. ಬೇರೆ ಬೇರೆ ಕಾರಣಗಳಿವೆ. ಅಧಿಕಾರಿಗಳು ಅವನ್ನೆಲ್ಲಾ ಗುರುತಿಸಿ ಪರಿಹಾರ ರೂಪಿಸಬೇಕು’ ಎಂದು ಸೂಚಿಸಿದರು.</p><p>ಸಂಸತ್ತಿನಲ್ಲಿ ನಡೆದಿದ್ದ ಚರ್ಚೆಯೊಂದನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, ‘ಹಳ್ಳಿ ಜನರು ಉತ್ಪಾದಿಸುವ ಹಾಲು ಪಟ್ಟಣಗಳಿಗೆ ಬರುತ್ತಿದೆ. ಪಟ್ಟಣದಲ್ಲಿ ತಯಾರಾಗುವ ಮದ್ಯ ಹಳ್ಳಿಗಳಿಗೆ ಬಂದಿದೆ ಎಂದರು.</p><p>‘ಹಸು ಸಾಕಾಣೆಕಾರರು ಮೊದಲು ಹಾಲನ್ನು ತಾವು ಕುಡಿದು, ಮಕ್ಕಳಿಗೂ ಕೊಟ್ಟು ಹೆಚ್ಚುವರಿಯಾದುದನ್ನು ಮಾತ್ರವೇ ಮಾರಬೇಕು. ಆಗ ಅವರಿಗೂ ಆರೋಗ್ಯಕರ ಹಾಲು ಸಿಗುತ್ತದೆ. ಅಧಿಕಾರಿಗಳು ಈ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಸೂಚಿಸಿದರು.</p><p>‘ಹಾಲು ಒಕ್ಕೂಟಗಳಲ್ಲಿರುವ ಅನಗತ್ಯ ಹೆಚ್ಚುವರಿ ಸಿಬ್ಬಂದಿಯನ್ನು ತೆಗೆದು ಹಾಕಬೇಕು. ಹಾಲು ಮತ್ತು ಉಪ ಉತ್ಪನ್ನಗಳ ಮಾರುಕಟ್ಟೆಯನ್ನು ಹೆಚ್ಚೆಚ್ಚು ವಿಸ್ತರಿಸಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.</p><p>‘ಪ್ರೊಟೀನ್ ಪೌಡರ್ಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಇದರ ಉತ್ಪಾದನೆ ಮತ್ತು ಮಾರಾಟದ ಕಡೆಗೆ ಗಮನ ಕೊಡಿ’ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸಲಹೆ ನೀಡಿದರು. ‘ಕುರಿ ಮತ್ತು ಕೋಳಿ ಸಾಕಣೆಗೆ ಸಹಾಯಧನ ಸೌಲಭ್ಯವನ್ನು ಹೆಚ್ಚೆಚ್ಚು ಮಂದಿಗೆ ವಿಸ್ತರಿಸಬೇಕು’ ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಕೆಡಿಪಿ ಸಭೆಗೆ ತಪ್ಪು ಮಾಹಿತಿ ನೀಡಿದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ ಅಂಗಡಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು.</p><p>‘ಸರಿಯಾದ ಹೋಂವರ್ಕ್ ಮಾಡಿಕೊಂಡು ಬಂದಿಲ್ಲವೇಕೆ? ತಪ್ಪು ಮಾಹಿತಿ ಕೊಟ್ಟರೆ ಹೇಗೆ?’ ಎಂದು ಸಿದ್ದರಾಮಯ್ಯ ಮತ್ತು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಖಾರವಾಗಿ ಕೇಳಿದರು. ಆಗ ಆ ಅಧಿಕಾರಿ ಕ್ಷಮೆ ಕೋರಿದರು. ‘ಮುಂದೆ ಯಡವಟ್ಟುಗಳು ಆಗದಂತೆ ಎಚ್ಚರಿಕೆ ವಹಿಸುತ್ತೇನೆ’ ಎಂದು ತಿಳಿಸಿದರು.</p><p>‘ಹಿಂದೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಿದ್ದರು. ಈಗ ನಮ್ಮ ಸಿದ್ದರಾಮನಹುಂಡಿಯಲ್ಲಿ ಯಾರೂ ರೇಷ್ಮೆ ಬೆಳೆಯುತ್ತಿಲ್ಲವೇಕೆ?’ ಎಂದು ಸಿಎಂ ಕೇಳಿದರು.</p><p>ಉತ್ತರಿಸಿದ ಅಧಿಕಾರಿ, ‘ಸಿದ್ದರಾಮನಹುಂಡಿಯಲ್ಲಿ ಇಬ್ಬರು ಮಾತ್ರ ರೇಷ್ಮೆ ಬೆಳೆಯುತ್ತಿದ್ದಾರೆ’ ಎಂದು ತಿಳಿಸಿದರು.</p><p>‘ರೇಷ್ಮೆ ಬೆಳೆ ಪ್ರದೇಶ ವಿಸ್ತರಿಸಲು ಏನು ಕ್ರಮ ಕೈಗೊಂಡಿದ್ದೀರಿ’ ಎಂಬ ಮುಖ್ಯಮಂತ್ರಿ ಪ್ರಶ್ನೆಗೆ, ‘ಲಭ್ಯ ಸಿಬ್ಬಂದಿಯಲ್ಲೇ 10 ಹಳ್ಳಿ ಆಯ್ಕೆ ಮಾಡಿಕೊಂಡು ವಿಸ್ತರಣೆಗೆ ಕೆಲಸ ಮಾಡುತ್ತಿದ್ದೇವೆ. ನಾವೇ ಗೂಡುಗಳನ್ನು ನಿರ್ಮಿಸಿ ಕೊಟ್ಟು, ಪ್ರೋತ್ಸಾಹ ನೀಡುತ್ತಿದ್ದೇವೆ’ ಎಂದು ಅಧಿಕಾರಿ ವಿವರಿಸಿದರು.</p><p>ಮಧ್ಯಪ್ರವೇಶಿಸಿದ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ‘ಸಿಬ್ಬಂದಿ ಕೊರತೆ ಇದೆ’ ಎಂದು ಹೇಳಿದರು.</p><p>ಆ ಮಾತನ್ನು ಒಪ್ಪದ ಸಿಎಂ, ‘ರೇಷ್ಮೆ ಕೃಷಿ ಕಡಿಮೆಯಾಗಲು ಇದೊಂದೇ ಕಾರಣ ಅಲ್ಲ. ಬೇರೆ ಬೇರೆ ಕಾರಣಗಳಿವೆ. ಅಧಿಕಾರಿಗಳು ಅವನ್ನೆಲ್ಲಾ ಗುರುತಿಸಿ ಪರಿಹಾರ ರೂಪಿಸಬೇಕು’ ಎಂದು ಸೂಚಿಸಿದರು.</p><p>ಸಂಸತ್ತಿನಲ್ಲಿ ನಡೆದಿದ್ದ ಚರ್ಚೆಯೊಂದನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, ‘ಹಳ್ಳಿ ಜನರು ಉತ್ಪಾದಿಸುವ ಹಾಲು ಪಟ್ಟಣಗಳಿಗೆ ಬರುತ್ತಿದೆ. ಪಟ್ಟಣದಲ್ಲಿ ತಯಾರಾಗುವ ಮದ್ಯ ಹಳ್ಳಿಗಳಿಗೆ ಬಂದಿದೆ ಎಂದರು.</p><p>‘ಹಸು ಸಾಕಾಣೆಕಾರರು ಮೊದಲು ಹಾಲನ್ನು ತಾವು ಕುಡಿದು, ಮಕ್ಕಳಿಗೂ ಕೊಟ್ಟು ಹೆಚ್ಚುವರಿಯಾದುದನ್ನು ಮಾತ್ರವೇ ಮಾರಬೇಕು. ಆಗ ಅವರಿಗೂ ಆರೋಗ್ಯಕರ ಹಾಲು ಸಿಗುತ್ತದೆ. ಅಧಿಕಾರಿಗಳು ಈ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಸೂಚಿಸಿದರು.</p><p>‘ಹಾಲು ಒಕ್ಕೂಟಗಳಲ್ಲಿರುವ ಅನಗತ್ಯ ಹೆಚ್ಚುವರಿ ಸಿಬ್ಬಂದಿಯನ್ನು ತೆಗೆದು ಹಾಕಬೇಕು. ಹಾಲು ಮತ್ತು ಉಪ ಉತ್ಪನ್ನಗಳ ಮಾರುಕಟ್ಟೆಯನ್ನು ಹೆಚ್ಚೆಚ್ಚು ವಿಸ್ತರಿಸಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.</p><p>‘ಪ್ರೊಟೀನ್ ಪೌಡರ್ಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಇದರ ಉತ್ಪಾದನೆ ಮತ್ತು ಮಾರಾಟದ ಕಡೆಗೆ ಗಮನ ಕೊಡಿ’ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸಲಹೆ ನೀಡಿದರು. ‘ಕುರಿ ಮತ್ತು ಕೋಳಿ ಸಾಕಣೆಗೆ ಸಹಾಯಧನ ಸೌಲಭ್ಯವನ್ನು ಹೆಚ್ಚೆಚ್ಚು ಮಂದಿಗೆ ವಿಸ್ತರಿಸಬೇಕು’ ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>