ಈ ಸಂಬಂಧ ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿ ನೋಡಲ್ ಅಧಿಕಾರಿ ಅಶ್ವಿನಿ ಮಾತನಾಡಿ, ಗ್ರಾಮಸ್ಥರು ಸಭೆಯಲ್ಲಿ ಮಾಡುತ್ತಿರುವ ದೂರುಗಳನ್ನು ಉನ್ನತಾಧಿಕಾರಿಗಳ ಗಮನಕ್ಕೆ ತರಲಾಗುವುದು. ಇದಲ್ಲದೆ ಸಭೆಯಲ್ಲಿ ಸಾರ್ವಜನಿಕರು ಮಾಡಿದ ಆರೋಪಗಳನ್ನು ನಡವಳಿಕೆ ಪುಸ್ತಕದಲ್ಲಿ ದಾಖಲಿಸಲಾಗುವುದು ಎಂದರು. ಇದಲ್ಲದೆ ತಾ.ಪಂ. ಕಾರ್ಯನಿರ್ವಾಹಣಾಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮಕ್ಕೆ ಶಿಫಾರಸು ಮಾಡುತ್ತೇನೆ ಎಂದು ತಿಳಿಸಿ ಸಭೆ ಮುಂದೂಡಿದರು.