<p><strong>ಹುಣಸೂರು</strong>: ‘ಮಹನೀಯರ ಜೀವನವೇ ನಮ್ಮ ಭವಿಷ್ಯದ ಬದುಕಿಗೆ ಮಾರ್ಗಸೂಚಿಯಾಗಿದೆ’ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.</p>.<p>ತಾಲ್ಲೂಕಿನ ಗಾವಡಗೆರೆ ಹೋಬಳಿ ಶಿರೇನಹಳ್ಳಿಯಲ್ಲಿ ಭಾನುವಾರ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.</p>.<p>‘ಸಮಾಜದ ಒಳಿತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಹನೀಯರ ಜೀವನಾದರ್ಶವನ್ನು ಅಳವಡಿಸಿಕೊಂಡು ಪಾಲಿಸುವುದರಿಂದ ಯುವ ಸಮುದಾಯಕ್ಕೆ ಆದರ್ಶ ಮಾರ್ಗ ತೋರಿಸಲು ಸಾಧ್ಯ’ ಎಂದರು.</p>.<p>ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಮಾತನಾಡಿದರು.</p>.<p>‘ಗ್ರಾಮಗಳಲ್ಲಿ ಯುವಸಮುದಾಯದ ಒಗ್ಗಟ್ಟು, ಪ್ರೀತಿ ವಿಶ್ವಾಸದಿಂದ ಗ್ರಾಮದ ಪ್ರತಿಯೊಂದು ಅಭಿವೃದ್ಧಿಗೆ ಸ್ಪಂದಿಸುವ ದಿಕ್ಕಿನಲ್ಲಿ ಸೌಹಾರ್ದ, ಬಾಂಧವ್ಯ ಕಟ್ಟಿಕೊಳ್ಳುವುದರಿಂದ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರವಾಗಲಿದೆ’ ಎಂದರು.</p>.<p>ಕಾವೇರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಂಸ್ಥಾಪಕ ಡಾ. ಲೋಹಿತ್ ಮಾತನಾಡಿದರು.</p>.<p>ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜ ಸ್ವಾಮೀಜಿ, ಉಕ್ಕಿನಕಂತೆ ಮಠದ ಸಾಂಬಸದಾಶಿವ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ವೇದಿಕೆಯಲ್ಲಿ ಸಂಗೊಳ್ಳಿ ರಾಯಣ್ಣ ಯುವ ಗರ್ಜನೆ ಅಧ್ಯಕ್ಷ ರಾಜಶೇಖರ್, ದೊಡ್ಡಣ್ಣ ಮೌರ್ಯ, ಅಮಿತ್ ದೇವರಹಟ್ಟಿ, ಸುರೇಂದ್ರ, ಹರವೆ ಶ್ರೀಧರ್, ಶಿವಶೇಖರ್, ಜಿಲ್ಲಾ ಕುರುಬ ಸಂಘದ ಉಪಾಧ್ಯಕ್ಷ ಬಸವರಾಜೇಗೌಡ, ಎ.ಪಿ.ಸ್ವಾಮಿ, ಸಣ್ಣೇಗೌಡ, ಮಹೇಶ್ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ‘ಮಹನೀಯರ ಜೀವನವೇ ನಮ್ಮ ಭವಿಷ್ಯದ ಬದುಕಿಗೆ ಮಾರ್ಗಸೂಚಿಯಾಗಿದೆ’ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.</p>.<p>ತಾಲ್ಲೂಕಿನ ಗಾವಡಗೆರೆ ಹೋಬಳಿ ಶಿರೇನಹಳ್ಳಿಯಲ್ಲಿ ಭಾನುವಾರ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.</p>.<p>‘ಸಮಾಜದ ಒಳಿತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಹನೀಯರ ಜೀವನಾದರ್ಶವನ್ನು ಅಳವಡಿಸಿಕೊಂಡು ಪಾಲಿಸುವುದರಿಂದ ಯುವ ಸಮುದಾಯಕ್ಕೆ ಆದರ್ಶ ಮಾರ್ಗ ತೋರಿಸಲು ಸಾಧ್ಯ’ ಎಂದರು.</p>.<p>ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಮಾತನಾಡಿದರು.</p>.<p>‘ಗ್ರಾಮಗಳಲ್ಲಿ ಯುವಸಮುದಾಯದ ಒಗ್ಗಟ್ಟು, ಪ್ರೀತಿ ವಿಶ್ವಾಸದಿಂದ ಗ್ರಾಮದ ಪ್ರತಿಯೊಂದು ಅಭಿವೃದ್ಧಿಗೆ ಸ್ಪಂದಿಸುವ ದಿಕ್ಕಿನಲ್ಲಿ ಸೌಹಾರ್ದ, ಬಾಂಧವ್ಯ ಕಟ್ಟಿಕೊಳ್ಳುವುದರಿಂದ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರವಾಗಲಿದೆ’ ಎಂದರು.</p>.<p>ಕಾವೇರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಂಸ್ಥಾಪಕ ಡಾ. ಲೋಹಿತ್ ಮಾತನಾಡಿದರು.</p>.<p>ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜ ಸ್ವಾಮೀಜಿ, ಉಕ್ಕಿನಕಂತೆ ಮಠದ ಸಾಂಬಸದಾಶಿವ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ವೇದಿಕೆಯಲ್ಲಿ ಸಂಗೊಳ್ಳಿ ರಾಯಣ್ಣ ಯುವ ಗರ್ಜನೆ ಅಧ್ಯಕ್ಷ ರಾಜಶೇಖರ್, ದೊಡ್ಡಣ್ಣ ಮೌರ್ಯ, ಅಮಿತ್ ದೇವರಹಟ್ಟಿ, ಸುರೇಂದ್ರ, ಹರವೆ ಶ್ರೀಧರ್, ಶಿವಶೇಖರ್, ಜಿಲ್ಲಾ ಕುರುಬ ಸಂಘದ ಉಪಾಧ್ಯಕ್ಷ ಬಸವರಾಜೇಗೌಡ, ಎ.ಪಿ.ಸ್ವಾಮಿ, ಸಣ್ಣೇಗೌಡ, ಮಹೇಶ್ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>