<p><strong>ಮೈಸೂರು</strong>: ‘ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರಿಂದ ನೆರವೇರಿಸಲು ನಿರ್ಧಾರ ಕೈಗೊಳ್ಳಬೇಕು’ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ದಸರಾ ಉನ್ನತ ಸಮಿತಿ ಸಭೆಯಲ್ಲಿ ಈ ವಿಷಯ ಮಂಡಿಸಿದ್ದೇನೆ. ಕಾಡಾ ಕಚೇರಿ ಆವರಣದಲ್ಲಿ ಸರ್ಕಾರಿ ಸ್ವಾಮ್ಯದ ಮಳಿಗೆಗಳನ್ನು ತೆರೆಯಬೇಕು. ಅಲ್ಲಿ ಮೈಸೂರು ರೇಷ್ಮೆ ಸೀರೆ, ಶ್ರೀಗಂಧದ ಉತ್ಪನ್ನ, ನಂಜನಗೂಡು ರಸಬಾಳೆ, ವೀಳ್ಯದೆಲೆ ಮೊದಲಾದವು ದೊರೆಯುವಂತೆ ಮಾಡಬೇಕು ಎಂದು ಕೋರಿದ್ದೇನೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಯೋಗ ದಸರಾ ಕಾರ್ಯಕ್ರಮವನ್ನು ದಾಖಲೆ ಆಗುವಂತೆ ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕು. ದಸರಾ ದಿನಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಬರುವ ಪ್ರವಾಸಿಗರ ಹಾಗೂ ಸಾರ್ವಜನಿಕರಿಗೆ ಪಾರ್ಕಿಂಗ್ ಮತ್ತು ಚಪ್ಪಲಿ ಸ್ಟಾಂಡ್ನಲ್ಲಿ ಶುಲ್ಕದಿಂದ ವಿನಾಯಿತಿ ಕೊಡಬೇಕು ಎಂದು ಮನವಿ ಮಾಡಿದ್ದೇನೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರಿಂದ ನೆರವೇರಿಸಲು ನಿರ್ಧಾರ ಕೈಗೊಳ್ಳಬೇಕು’ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ದಸರಾ ಉನ್ನತ ಸಮಿತಿ ಸಭೆಯಲ್ಲಿ ಈ ವಿಷಯ ಮಂಡಿಸಿದ್ದೇನೆ. ಕಾಡಾ ಕಚೇರಿ ಆವರಣದಲ್ಲಿ ಸರ್ಕಾರಿ ಸ್ವಾಮ್ಯದ ಮಳಿಗೆಗಳನ್ನು ತೆರೆಯಬೇಕು. ಅಲ್ಲಿ ಮೈಸೂರು ರೇಷ್ಮೆ ಸೀರೆ, ಶ್ರೀಗಂಧದ ಉತ್ಪನ್ನ, ನಂಜನಗೂಡು ರಸಬಾಳೆ, ವೀಳ್ಯದೆಲೆ ಮೊದಲಾದವು ದೊರೆಯುವಂತೆ ಮಾಡಬೇಕು ಎಂದು ಕೋರಿದ್ದೇನೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಯೋಗ ದಸರಾ ಕಾರ್ಯಕ್ರಮವನ್ನು ದಾಖಲೆ ಆಗುವಂತೆ ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕು. ದಸರಾ ದಿನಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಬರುವ ಪ್ರವಾಸಿಗರ ಹಾಗೂ ಸಾರ್ವಜನಿಕರಿಗೆ ಪಾರ್ಕಿಂಗ್ ಮತ್ತು ಚಪ್ಪಲಿ ಸ್ಟಾಂಡ್ನಲ್ಲಿ ಶುಲ್ಕದಿಂದ ವಿನಾಯಿತಿ ಕೊಡಬೇಕು ಎಂದು ಮನವಿ ಮಾಡಿದ್ದೇನೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>