ಕಾಂಗ್ರೆಸ್ನ ಮರಿತಿಬ್ಬೇಗೌಡ, ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ, ನಾಗೇಂದ್ರ ಬಾಬು (ಕೆಜೆಪಿ), ಮಾಜಿ ಶಾಸಕ ವಾಟಾಳ್ ನಾಗರಾಜ್ (ಕನ್ನಡ ಚಳವಳಿ ವಾಟಾಳ್ ಪಕ್ಷ), ಅನಿಲ್ ಕುಮಾರ್, ಅಂಬರೀಷ್, ನಿವೃತ್ತ ಡಿಡಿಪಿಯು ನಾಗಮಲ್ಲೇಶ್, ಎಸ್.ನಿಂಗರಾಜು, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ, ಬಿಎಸ್ಪಿ ಬೆಂಬಲಿತ ಅಭ್ಯರ್ಥಿ ಆರ್. ಮಹೇಶ್ ಹಾಗೂ ರಾಜು ಕೆ. (ಎಲ್ಲರೂ ಪಕ್ಷೇತರರು) ಅವರ ರಾಜಕೀಯ ಭವಿಷ್ಯವನ್ನು ಮತದಾರರು ಬರೆದಿದ್ದಾರೆ. ಮತ ಎಣಿಕೆ ಮೈಸೂರಿನಲ್ಲಿ ಜೂನ್ 6ರಂದು ನಡೆಯಲಿದೆ.