ಈ ಹಿಂದೆ ತಂದೆ ಮೊಹಮ್ಮದ್ ರಫಿಕ್ ಅವರೊಂದಿಗೆ ಲಾರಿ ಚಾಲಕನಾಗಿ ಕೆಲಸಕ್ಕೆ ಸೇರಿದ ಅಜರ್, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳನ್ನು ನೋಡಿ ಬೇಸರಗೊಂಡು ಲಾರಿ ಚಾಲಕ ವೃತ್ತಿಗೆ ವಿದಾಯ ಹೇಳಿ ಜನ ಸೇವೆಯಲ್ಲಿ ತೊಡಗಿಸಿಕೊಂಡರು. ಕೋವಿಡ್ ಸಮಯದಲ್ಲಿ ಬೆಂಗಳೂರಿನಲ್ಲಿ ಆಂಬುಲೆನ್ಸ್ ಚಾಲಕರಾಗಿದ್ದ ಅಜರ್, ಕೊರೊನಾ ಸೋಂಕಿಗೆ ಬಲಿಯಾದ ನೂರಕ್ಕೂ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸಿದ್ದರು.