‘ಸದ್ಯ ಜಾರಿಯಲ್ಲಿರುವ ಖಜಾನೆ–2 ತಂತ್ರಾಂಶಕ್ಕೆ ಆಧಾರ್ ಲಿಂಕ್ ಹೊಂದಿರುವ ಬ್ಯಾಂಕ್ ಖಾತೆ ಕಡ್ಡಾಯ. ರೋಗಿಯ ಬ್ಯಾಂಕ್ ಖಾತೆ ಸಂಖ್ಯೆಯಲ್ಲಿ ವ್ಯತ್ಯಾಸ, ಆಧಾರ್ ಲಿಂಕ್ ಆಗದ ಖಾತೆಗಳಿಗೆ ಹಣ ವರ್ಗಾವಣೆಯಾಗಿಲ್ಲ. ಆಧಾರ್ ಸೇವಾ ಸಿಂಧು ಪೋರ್ಟಲ್ ಮೂಲಕ ರಾಜ್ಯದ 30 ಸಾವಿರಕ್ಕೂ ಅಧಿಕ ರೋಗಿಗಳಿಗೆ ₹30 ಕೋಟಿಗೂ ಅಧಿಕ ಹಣ ವರ್ಗಾಯಿಸಲಾಗಿದೆ. ಉಳಿದವರ ಖಾತೆಗಳಿಗೂ ಹಣ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.