<p><strong>ಮೈಸೂರು:</strong> ಷೇರು ಮಾರುಕಟ್ಟೆಗೆ ಸಂಬಂಧಿಸಿದ ನಕಲಿ ಕಂಪನಿಯೊಂದರಲ್ಲಿ ಹಣ ಹೂಡಿದ್ದ ನಗರದ ಉದ್ಯಮಿಯೊಬ್ಬರು ₹ 2.96 ಕೋಟಿ ವಂಚನೆಗೊಳಗಾಗಿದ್ದು, ಸೆನ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.</p>.<p>ನಗರದ ಸರಸ್ವತಿಪುರಂ ನಿವಾಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಗೆ ಆಸಕ್ತಿ ವಹಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಿಕ್ಕ ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಅಲ್ಲಿ ನೀಡಿದ ಮಾಹಿತಿಯಂತೆ ಏಪ್ರಿಲ್ನಿಂದ ಹಂತ ಹಂತವಾಗಿ ಒಟ್ಟು ₹2.96 ಕೋಟಿ ಹೂಡಿಕೆ ಮಾಡಿದ್ದರು. ಲಾಭ ಗಳಿಕೆಯ ನಿರೀಕ್ಷೆಯಲ್ಲಿದ್ದ ಅವರಿಗೆ ಕಂಪನಿ ಕಡೆಯಿಂದ ಯಾವುದೇ ಹಣ ಬಾರದಿದ್ದಾಗ, ವಂಚನೆ ಆಗಿರುವ ಅರಿವಾಗಿದೆ.</p>.<p>ನಗರದಲ್ಲಿ ದಾಖಲಾದ ಇದೇ ಮಾದರಿ ಐದು ಪ್ರತ್ಯೇಕ ಪ್ರಕರಣದಲ್ಲಿ ಐವರು ₹20 ಲಕ್ಷ ಕಳೆದುಕೊಂಡಿದ್ದಾರೆ.</p>.<p>‘ಈಚೆಗೆ ಷೇರು ಮಾರುಕಟ್ಟೆ ಹಾಗೂ ಕ್ರಿಫ್ಟೊ ಕರೆನ್ಸಿ ಬಗ್ಗೆ ವಂಚನೆ ಪ್ರಕರಣಗಳೇ ಹೆಚ್ಚುತ್ತಿವೆ. ಅವೆಲ್ಲ ವ್ಯವಹಾರಗಳು ಸಾಮಾಜಿಕ ಜಾಲತಾಣಗಳಿಂದಲೇ ಆರಂಭವಾಗಿದೆ. ಎರಡು, ಮೂರು ಲಕ್ಷದಿಂದ ತೊಡಗಿ ಕೋಟಿಯವರೆಗೂ ವಂಚನೆಯಾಗುತ್ತಿದೆ. ಈ ಬಗ್ಗೆ ಜನರಲ್ಲೇ ಅರಿವು ಬರಬೇಕು’ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಷೇರು ಮಾರುಕಟ್ಟೆಗೆ ಸಂಬಂಧಿಸಿದ ನಕಲಿ ಕಂಪನಿಯೊಂದರಲ್ಲಿ ಹಣ ಹೂಡಿದ್ದ ನಗರದ ಉದ್ಯಮಿಯೊಬ್ಬರು ₹ 2.96 ಕೋಟಿ ವಂಚನೆಗೊಳಗಾಗಿದ್ದು, ಸೆನ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.</p>.<p>ನಗರದ ಸರಸ್ವತಿಪುರಂ ನಿವಾಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಗೆ ಆಸಕ್ತಿ ವಹಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಿಕ್ಕ ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಅಲ್ಲಿ ನೀಡಿದ ಮಾಹಿತಿಯಂತೆ ಏಪ್ರಿಲ್ನಿಂದ ಹಂತ ಹಂತವಾಗಿ ಒಟ್ಟು ₹2.96 ಕೋಟಿ ಹೂಡಿಕೆ ಮಾಡಿದ್ದರು. ಲಾಭ ಗಳಿಕೆಯ ನಿರೀಕ್ಷೆಯಲ್ಲಿದ್ದ ಅವರಿಗೆ ಕಂಪನಿ ಕಡೆಯಿಂದ ಯಾವುದೇ ಹಣ ಬಾರದಿದ್ದಾಗ, ವಂಚನೆ ಆಗಿರುವ ಅರಿವಾಗಿದೆ.</p>.<p>ನಗರದಲ್ಲಿ ದಾಖಲಾದ ಇದೇ ಮಾದರಿ ಐದು ಪ್ರತ್ಯೇಕ ಪ್ರಕರಣದಲ್ಲಿ ಐವರು ₹20 ಲಕ್ಷ ಕಳೆದುಕೊಂಡಿದ್ದಾರೆ.</p>.<p>‘ಈಚೆಗೆ ಷೇರು ಮಾರುಕಟ್ಟೆ ಹಾಗೂ ಕ್ರಿಫ್ಟೊ ಕರೆನ್ಸಿ ಬಗ್ಗೆ ವಂಚನೆ ಪ್ರಕರಣಗಳೇ ಹೆಚ್ಚುತ್ತಿವೆ. ಅವೆಲ್ಲ ವ್ಯವಹಾರಗಳು ಸಾಮಾಜಿಕ ಜಾಲತಾಣಗಳಿಂದಲೇ ಆರಂಭವಾಗಿದೆ. ಎರಡು, ಮೂರು ಲಕ್ಷದಿಂದ ತೊಡಗಿ ಕೋಟಿಯವರೆಗೂ ವಂಚನೆಯಾಗುತ್ತಿದೆ. ಈ ಬಗ್ಗೆ ಜನರಲ್ಲೇ ಅರಿವು ಬರಬೇಕು’ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>