‘ಜಗದೀಶ ಶೆಟ್ಟರ್ ಮತ್ತೆ ಬಿಜೆಪಿ ಸೇರಿದ್ದು ಅವರ ವೈಯಕ್ತಿಕ ನಿರ್ಧಾರ. ಇದು ಪಕ್ಷಾಂತರ ಅಲ್ಲ. ಮಾಜಿ ಮುಖ್ಯಮಂತ್ರಿಯಾದ ಅವರು ಎಲ್ಲವನ್ನೂ ಯೋಚಿಸಬೇಕಿತ್ತು. ಪಕ್ಷದಲ್ಲಿ ಎಲ್ಲವನ್ನೂ ಅನುಭವಿಸಿ ಟಿಕೆಟ್ ಕೊಡಲಿಲ್ಲ ಎಂಬ ಕಾರಣದಿಂದ ಕಾಂಗ್ರೆಸ್ ಸೇರಿದ್ದರು. ಆ ಪಕ್ಷದವರು ಸ್ವಾಗತಿಸಿ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿದ್ದರು. ಸೋತರೂ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದರು. ಯಾರೂ ತೊಂದರೆ ಕೊಡಲಿಲ್ಲ, ರಾಷ್ಟ್ರ ನಿಷ್ಠೆಯಿಂದ ಮರಳಿದೆ ಎಂದು ಅವರೇ ಹೇಳಿದ್ದಾರೆ. ನಾನೇನೂ ಹೇಳಲಾಗುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.