<p><strong>ಮೈಸೂರು:</strong> ಇಲ್ಲಿನ ಚೆಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ತಾಯಿ-ಮಕ್ಕಳ ಆರೈಕೆಗೆ ಹೆಚ್ಚು ಆದ್ಯತೆ ನೀಡಬೇಕು’ ಎಂದು ಸೂಚಿಸಿದರು.</p><p>ಶಿಶುಗಳ ಮರಣ ಪ್ರಮಾಣ ಹೆಚ್ಚಳ, ಇರುವೆ ಕಚ್ಚಿ ನವಜಾತ ಶಿಶು ಸಾವು ಆರೋಪ ಕೇಳಿಬಂದಿದ್ದು ಮೊದಲಾದ ಕಾರಣಗಳಿಂದ ಭೇಟಿ ನೀಡಿದ್ದ ಅವರು, ‘ಮೈಸೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಇಂಥ ಪ್ರಕರಣ ವರದಿಯಾಗಿರುವುದು ವಿಷಾದನೀಯ’ ಎಂದರು.</p><p>ವೈದ್ಯಾಧಿಕಾರಿಗಳು, ರೋಗಿಗಳೊಂದಿಗೆ ಸಮಾಲೋಚನೆ ನಡೆಸಿದರು. ‘ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಯಾವುದೇ ರೀತಿಯ ನಿರ್ಲಕ್ಷ್ಯವನ್ನು ತೋರಬಾರದು. ಇದೇ ರೀತಿಯ ಧೋರಣೆ ಮುಂದುವರಿದರೆ ಕಾನೂನು ಕ್ರಮ ಎದುರಿಸಬೇಕಾದೀತು’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.</p><p>ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಎನ್ಐಸಿಯು ಘಟಕಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಪ್ರತಿ ವಿಭಾಗದಲ್ಲೂ ಎಲ್ಲ ವೈದ್ಯಕೀಯ ಸಾಧನಗಳನ್ನು ಸೂಕ್ತ ಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು’ ಎಂದು ನಿರ್ದೇಶನ ಕೊಟ್ಟರು.</p><p>‘ನಿರ್ವಹಣೆಗಾಗಿ ಮೀಸಲಿರುವ ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು’ ಎಂದು ಡೀನ್ ಡಾ.ದಾಕ್ಷಾಯಿಣಿ ಮತ್ತು ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತ್ ಅವರಿಗೆ ತಾಕೀತು ಮಾಡಿದರು.</p><p><strong>ಬಿಸಿ ನೀರಿನ ಡಿಸ್ಪೆನ್ಸರ್ ಪೂರೈಕೆ: </strong></p><p>ರೋಗಿಗಳೊಂದಿಗೆ ಸಮಾಲೋಚನೆ ನಡೆಸಿದಾಗ, ಬಿಸಿ ನೀರಿನ ವ್ಯವಸ್ಥೆ ಇಲ್ಲದಿರುವ ಬಗ್ಗೆ ದೂರು ಕೇಳಿಬಂದಿತು. ಇದಕ್ಕೆ ಸ್ಪಂದಿಸಿದ ಸಂಸದರು, ವೈಯಕ್ತಿಕ ಹಣದಿಂದ ಬಿಸಿನೀರಿನ ಡಿಸ್ಪೆನ್ಸರ್ ವ್ಯವಸ್ಥೆ ಮಾಡಿಕೊಟ್ಟರು. ಇದಕ್ಕೆ ರೋಗಿಗಳಿಂದ ಮೆಚ್ಚುಗೆ ವ್ಯಕ್ತವಾಯಿತು.</p><p>‘ನಮ್ಮ ಪೂರ್ವಿಕರು ಸ್ಥಾಪಿಸಿರುವ ಈ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗೆ ಆದ್ಯತೆ ನೀಡಲು ಎಲ್ಲರೂ ಬದ್ಧರಾಗಿರಬೇಕು. ರೋಗಿಗಳು ಹಾಗೂ ಪೋಷಕರು ಬಯಸಿದಂತೆ ಪ್ರತಿ ಎರಡು ಅಥವಾ ಮೂರು ತಿಂಗಳಿಗೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ’ ಎಂದು ಯದುವೀರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಚೆಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ತಾಯಿ-ಮಕ್ಕಳ ಆರೈಕೆಗೆ ಹೆಚ್ಚು ಆದ್ಯತೆ ನೀಡಬೇಕು’ ಎಂದು ಸೂಚಿಸಿದರು.</p><p>ಶಿಶುಗಳ ಮರಣ ಪ್ರಮಾಣ ಹೆಚ್ಚಳ, ಇರುವೆ ಕಚ್ಚಿ ನವಜಾತ ಶಿಶು ಸಾವು ಆರೋಪ ಕೇಳಿಬಂದಿದ್ದು ಮೊದಲಾದ ಕಾರಣಗಳಿಂದ ಭೇಟಿ ನೀಡಿದ್ದ ಅವರು, ‘ಮೈಸೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಇಂಥ ಪ್ರಕರಣ ವರದಿಯಾಗಿರುವುದು ವಿಷಾದನೀಯ’ ಎಂದರು.</p><p>ವೈದ್ಯಾಧಿಕಾರಿಗಳು, ರೋಗಿಗಳೊಂದಿಗೆ ಸಮಾಲೋಚನೆ ನಡೆಸಿದರು. ‘ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಯಾವುದೇ ರೀತಿಯ ನಿರ್ಲಕ್ಷ್ಯವನ್ನು ತೋರಬಾರದು. ಇದೇ ರೀತಿಯ ಧೋರಣೆ ಮುಂದುವರಿದರೆ ಕಾನೂನು ಕ್ರಮ ಎದುರಿಸಬೇಕಾದೀತು’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.</p><p>ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಎನ್ಐಸಿಯು ಘಟಕಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಪ್ರತಿ ವಿಭಾಗದಲ್ಲೂ ಎಲ್ಲ ವೈದ್ಯಕೀಯ ಸಾಧನಗಳನ್ನು ಸೂಕ್ತ ಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು’ ಎಂದು ನಿರ್ದೇಶನ ಕೊಟ್ಟರು.</p><p>‘ನಿರ್ವಹಣೆಗಾಗಿ ಮೀಸಲಿರುವ ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು’ ಎಂದು ಡೀನ್ ಡಾ.ದಾಕ್ಷಾಯಿಣಿ ಮತ್ತು ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತ್ ಅವರಿಗೆ ತಾಕೀತು ಮಾಡಿದರು.</p><p><strong>ಬಿಸಿ ನೀರಿನ ಡಿಸ್ಪೆನ್ಸರ್ ಪೂರೈಕೆ: </strong></p><p>ರೋಗಿಗಳೊಂದಿಗೆ ಸಮಾಲೋಚನೆ ನಡೆಸಿದಾಗ, ಬಿಸಿ ನೀರಿನ ವ್ಯವಸ್ಥೆ ಇಲ್ಲದಿರುವ ಬಗ್ಗೆ ದೂರು ಕೇಳಿಬಂದಿತು. ಇದಕ್ಕೆ ಸ್ಪಂದಿಸಿದ ಸಂಸದರು, ವೈಯಕ್ತಿಕ ಹಣದಿಂದ ಬಿಸಿನೀರಿನ ಡಿಸ್ಪೆನ್ಸರ್ ವ್ಯವಸ್ಥೆ ಮಾಡಿಕೊಟ್ಟರು. ಇದಕ್ಕೆ ರೋಗಿಗಳಿಂದ ಮೆಚ್ಚುಗೆ ವ್ಯಕ್ತವಾಯಿತು.</p><p>‘ನಮ್ಮ ಪೂರ್ವಿಕರು ಸ್ಥಾಪಿಸಿರುವ ಈ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗೆ ಆದ್ಯತೆ ನೀಡಲು ಎಲ್ಲರೂ ಬದ್ಧರಾಗಿರಬೇಕು. ರೋಗಿಗಳು ಹಾಗೂ ಪೋಷಕರು ಬಯಸಿದಂತೆ ಪ್ರತಿ ಎರಡು ಅಥವಾ ಮೂರು ತಿಂಗಳಿಗೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ’ ಎಂದು ಯದುವೀರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>