ಈ ಕಾಯ್ದೆಗೆ ತಿದ್ದುಪಡಿ ತಂದು ಬಲ್ಲಹಳ್ಳಿ ಹಾಗೂ ಸುತ್ತಮುತ್ತ ಇರುವ ಗ್ರಾಮಗಳಾದ ರಾಮನಹುಂಡಿ, ಬೀರಿಹುಂಡಿ, ಕೆ.ಸಾಲುಂಡಿ, ಗೋವಳ್ಳಿ, ಕುಮಾರಬೀಡು, ಬಡಗಲಹುಂಡಿ, ಮರಟಿಕ್ಯಾತನಹಳ್ಳಿಯ ರೈತರ ಫಲವತ್ತಾದ ಭೂಮಿಗೆ ಕನಿಷ್ಠ ಬೆಲೆ ನೀಡಿ ಭೂಸ್ವಾಧೀನಪಡಿಸಿಕೊಳ್ಳುವ ಹುನ್ನಾರ ನಡೆದಿದೆ. ಇದರ ಹಿಂದಿರುವ ಮುಡಾ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.