‘ಸರ್ಕಾರದ ಈ ನಿರ್ಧಾರದಿಂದ ಬಡಾವಣೆಗಳ ಅಭಿವೃದ್ಧಿಗೆ ಬಲವರ್ಧನೆ ದೊರೆತಂತಾಗಿದೆ. ಹಾಲಿ ಇರುವ ಹೊರವರ್ತುಲ ರಸ್ತೆಗೆ ಸಂಪರ್ಕ ರಸ್ತೆ ಕಲ್ಪಿಸುವುದು, ಮಹಾ ಯೋಜನೆಯ ರಸ್ತೆಗಳಿಗೆ ಸಂಪರ್ಕ ರಸ್ತೆ ನಿರ್ಮಿಸುವುದು, ಕೆಲವು ಬಡಾವಣೆಗಳಲ್ಲಿ ಒಳಚರಂಡಿ ವ್ಯವಸ್ಥೆಗೆ ಸಂಬಂಧಪಟ್ಟಂತೆ ಮ್ಯಾನ್ಹೋಲ್ ನಿರ್ಮಾಣ, ಯುಜಿಡಿ ಪೈಪ್ಲೈನ್ ಮತ್ತು ಟ್ರಂಕ್ ಲೈನ್ಗಳನ್ನು ಜೋಡಿಸಲಾಗುವುದು’ ಎಂದು ಸೋಮಶೇಖರ್ ತಿಳಿಸಿದ್ದಾರೆ.