‘ಪ್ರಾಧಿಕಾರದಲ್ಲಿ ಕಾನೂನು ಬಾಹಿರವಾಗಿ ಆಸ್ತಿಗಳನ್ನು ಹಂಚಿಕೆ ಮಾಡುತ್ತಿರುವ ಬಗ್ಗೆ ಆಯುಕ್ತರನ್ನು (ಆಗ ಜಿ.ಟಿ.ದಿನೇಶ್ಕುಮಾರ್ ಇದ್ದರು) ವಿಚಾರಣೆ ನಡೆಸಬೇಕು. ಅವರ ವಿರುದ್ಧ ಕೇಳಿಬಂದಿರುವ ಪ್ರತಿ ಆರೋಪವನ್ನೂ ಪರಾಮರ್ಶಿಸಲು ಮತ್ತು ಉಂಟಾಗಿರುವ ನಷ್ಟದ ಸಂಬಂಧ ಕ್ರಮ ಕೈಗೊಳ್ಳಲು ಸರ್ಕಾರದ ಹಂತದಲ್ಲಿ ಉನ್ನತ ಮಟ್ಟದ ತನಿಖಾ ತಂಡವನ್ನು ರಚಿಸಬೇಕು. ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು 2023ರ ನ.27ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಸರ್ಕಾರಕ್ಕೆ ಹಲವು ಬಾರಿ ಪತ್ರ ಬರೆದು ಕ್ರಮಕ್ಕೆ ಶಿಫಾರಸು ಮಾಡಿದ್ದರು. ಅದಕ್ಕೂ ಮುನ್ನ ಆಯುಕ್ತರಿಗೆ ಎರಡು ಬಾರಿ ಕಾರಣ ಕೇಳುವ ನೋಟಿಸ್ ಜಾರಿಗೊಳಿಸಿದ್ದರು.
‘ಮುಡಾದಲ್ಲಿ ನಡೆದಿರುವುದು ಹಗರಣ ಎಂದು ಸಾಬೀತಾಗಿಲ್ಲ. ತನಿಖೆಗೆ ನಾಲ್ಕು ವಾರಗಳ ಗಡುವು ನೀಡಲಾಗಿದೆ. ತನಿಖೆ ಮುಗಿದ ಬಳಿಕ ಸತ್ಯಾಂಶ ಹೊರಬರಲಿದೆ.
–ಬಿ.ಎಸ್.ಸುರೇಶ್, ಸಚಿವ, ನಗರಾಭಿವೃದ್ಧಿ ಮತ್ತು ನಗರ ಯೋಜನೆ