<p><strong>ಮೈಸೂರು:</strong> ‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ– ಜೆಡಿಎಸ್ ಹುನ್ನಾರ ನಡೆಸಿವೆ’ ಎಂದು ಆರೋಪಿಸಿ, ಅಹಿಂದ ಸಂಘಟನೆಗಳ ಮುಖಂಡರು ಶನಿವಾರ ಇಲ್ಲಿನ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ನಡೆಸಿದ ಯತ್ನವನ್ನು ಪೊಲೀಸರು ದೂರದಲ್ಲೇ ತಡೆದರು.</p><p>ಜಿಲ್ಲಾ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಬಿಜೆಪಿ ಕಚೇರಿಯತ್ತ ಮುನ್ನುಗ್ಗಿದ ಮುಖಂಡರನ್ನು ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ತಡೆದರು. ಆ ವೇಳೆ ಮಾತಿನ ಚಕಮಕಿಯೂ ನಡೆಯಿತು. ಬಿಜೆಪಿ ಕಾರ್ಯಕರ್ತರು ಕೂಡ, ಕಚೇರಿಯತ್ತ ಪ್ರತಿಭಟನಕಾರರು ಬರದಂತೆ ಪಕ್ಷದ ಬಾವುಟಗಳನ್ನು ಹಿಡಿದು ಪ್ರತಿಭಟಿಸಿದರು.</p><p>ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್, ‘ಸಿದ್ದರಾಮಯ್ಯ ಅವರ ಅಹಿಂದ ಧ್ವನಿಯನ್ನು ಅಡಗಿಸಲು ಬಿಜೆಪಿ ಮುಂದಾಗಿದೆ. ದಕ್ಷಿಣ ಭಾರತದಲ್ಲಿ ಪಕ್ಷ ವಿಸ್ತರಣೆಗೆ ಸಿದ್ದರಾಮಯ್ಯ ತಡೆಗೋಡೆಯಾಗಿದ್ದು, ಅವರನ್ನು ರಾಜಕೀಯವಾಗಿ ಮುಗಿಸಲು ಸಂಚು ನಡೆದಿದೆ’ ಎಂದರು.</p><p>‘ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣಗಳಲ್ಲಿ ತಮ್ಮ ಪಾತ್ರವಿಲ್ಲವೆಂದು ಸಿದ್ದರಾಮಯ್ಯ ದಾಖಲೆ ಸಮೇತ ತಿಳಿಸಿದ್ದರೂ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ– ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ವಿರೋಧಿಸಿ ಅಹಿಂದ ಸಮುದಾಯಗಳು ಒಗ್ಗಟ್ಟಾಗಿ ಹೋರಾಡಲಿವೆ’ ಎಂದರು.</p><p>ವಿವಿಧ ಸಮುದಾಯ ಮುಖಂಡರಾದ ಸುಬ್ರಹ್ಮಣ್ಯ, ಎನ್.ಆರ್.ನಾಗೇಶ್, ರವಿನಂದನ್, ಶಿವಣ್ಣ, ಯೋಗೇಶ್ ಉಪ್ಪಾರ್, ರಾಜಶೇಖರ್, ಲೋಕೇಶ್ಕುಮಾರ್ ಮಾದಾಪುರ, ಎಚ್.ಎಸ್.ಪ್ರಕಾಶ್, ಸಿದ್ದು, ದಸಂಸ ಸಂಚಾಲಕ ದೇವಗಳ್ಳಿ ಸೋಮಶೇಖರ್, ಮಲ್ಲೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ– ಜೆಡಿಎಸ್ ಹುನ್ನಾರ ನಡೆಸಿವೆ’ ಎಂದು ಆರೋಪಿಸಿ, ಅಹಿಂದ ಸಂಘಟನೆಗಳ ಮುಖಂಡರು ಶನಿವಾರ ಇಲ್ಲಿನ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ನಡೆಸಿದ ಯತ್ನವನ್ನು ಪೊಲೀಸರು ದೂರದಲ್ಲೇ ತಡೆದರು.</p><p>ಜಿಲ್ಲಾ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಬಿಜೆಪಿ ಕಚೇರಿಯತ್ತ ಮುನ್ನುಗ್ಗಿದ ಮುಖಂಡರನ್ನು ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ತಡೆದರು. ಆ ವೇಳೆ ಮಾತಿನ ಚಕಮಕಿಯೂ ನಡೆಯಿತು. ಬಿಜೆಪಿ ಕಾರ್ಯಕರ್ತರು ಕೂಡ, ಕಚೇರಿಯತ್ತ ಪ್ರತಿಭಟನಕಾರರು ಬರದಂತೆ ಪಕ್ಷದ ಬಾವುಟಗಳನ್ನು ಹಿಡಿದು ಪ್ರತಿಭಟಿಸಿದರು.</p><p>ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್, ‘ಸಿದ್ದರಾಮಯ್ಯ ಅವರ ಅಹಿಂದ ಧ್ವನಿಯನ್ನು ಅಡಗಿಸಲು ಬಿಜೆಪಿ ಮುಂದಾಗಿದೆ. ದಕ್ಷಿಣ ಭಾರತದಲ್ಲಿ ಪಕ್ಷ ವಿಸ್ತರಣೆಗೆ ಸಿದ್ದರಾಮಯ್ಯ ತಡೆಗೋಡೆಯಾಗಿದ್ದು, ಅವರನ್ನು ರಾಜಕೀಯವಾಗಿ ಮುಗಿಸಲು ಸಂಚು ನಡೆದಿದೆ’ ಎಂದರು.</p><p>‘ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣಗಳಲ್ಲಿ ತಮ್ಮ ಪಾತ್ರವಿಲ್ಲವೆಂದು ಸಿದ್ದರಾಮಯ್ಯ ದಾಖಲೆ ಸಮೇತ ತಿಳಿಸಿದ್ದರೂ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ– ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ವಿರೋಧಿಸಿ ಅಹಿಂದ ಸಮುದಾಯಗಳು ಒಗ್ಗಟ್ಟಾಗಿ ಹೋರಾಡಲಿವೆ’ ಎಂದರು.</p><p>ವಿವಿಧ ಸಮುದಾಯ ಮುಖಂಡರಾದ ಸುಬ್ರಹ್ಮಣ್ಯ, ಎನ್.ಆರ್.ನಾಗೇಶ್, ರವಿನಂದನ್, ಶಿವಣ್ಣ, ಯೋಗೇಶ್ ಉಪ್ಪಾರ್, ರಾಜಶೇಖರ್, ಲೋಕೇಶ್ಕುಮಾರ್ ಮಾದಾಪುರ, ಎಚ್.ಎಸ್.ಪ್ರಕಾಶ್, ಸಿದ್ದು, ದಸಂಸ ಸಂಚಾಲಕ ದೇವಗಳ್ಳಿ ಸೋಮಶೇಖರ್, ಮಲ್ಲೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>