<p><strong>ಮೈಸೂರು:</strong> ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರವೂ ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದು, ರಾತ್ರಿ 9ರ ನಂತರವೂ ಮಾಹಿತಿಯನ್ನು ದಾಖಲಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದರು. </p><p>ಬುಧವಾರ ಮುಡಾ ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಮತ್ತೆ ಗುರುವಾರ ಬೆಳಿಗ್ಗೆ ಕಚೇರಿಗೆ ಭೇಟಿ ಕೊಟ್ಟರು.</p><p>ಮುಖ್ಯಮಂತ್ರಿ ಸಿದ್ದರಾಮಯ್ಯರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಬದಲಿ ನಿವೇಶನ ಕೊಡಲು 2020ರ ನವೆಂಬರ್ 20ರಂದು ನಡೆದ ಮುಡಾ ಸಾಮಾನ್ಯಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು, ಆ ಸಭೆಯ ಧ್ವನಿಮುದ್ರಿಕೆ ದಾಖಲೆಗಳನ್ನು ಪಡೆದು, ಸಭೆಯಲ್ಲಿ ಪಾಲ್ಗೊಂಡಿದ್ದ 19 ಸದಸ್ಯರ ಮಾತುಗಳನ್ನೂ ಲಿಖಿತ ರೂಪದಲ್ಲಿ ದಾಖಲಿಸಿಕೊಂಡರು. </p><p>ರಾತ್ರಿ ಕಚೇರಿಗೇ ಊಟ ತರಿಸಿಕೊಂಡ 8 ಅಧಿಕಾರಿ–ಸಿಬ್ಬಂದಿಯ ತಂಡವು ಊಟದ ತರುವಾಯವೂ ಹೇಳಿಕೆ ದಾಖಲಿಸಿಕೊಳ್ಳುವ ಕಾರ್ಯ ಮುಂದುವರಿಸಿತ್ತು. ಈ ಸಂದರ್ಭ ಮುಡಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯೂ ಜೊತೆಗಿದ್ದರು.</p>.ಮುಡಾ ಕುರಿತು ಇ.ಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ.ಮುಡಾ ಪ್ರಕರಣ | ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ: ಡಿ.ಕೆ.ಶಿವಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರವೂ ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದು, ರಾತ್ರಿ 9ರ ನಂತರವೂ ಮಾಹಿತಿಯನ್ನು ದಾಖಲಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದರು. </p><p>ಬುಧವಾರ ಮುಡಾ ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಮತ್ತೆ ಗುರುವಾರ ಬೆಳಿಗ್ಗೆ ಕಚೇರಿಗೆ ಭೇಟಿ ಕೊಟ್ಟರು.</p><p>ಮುಖ್ಯಮಂತ್ರಿ ಸಿದ್ದರಾಮಯ್ಯರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಬದಲಿ ನಿವೇಶನ ಕೊಡಲು 2020ರ ನವೆಂಬರ್ 20ರಂದು ನಡೆದ ಮುಡಾ ಸಾಮಾನ್ಯಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು, ಆ ಸಭೆಯ ಧ್ವನಿಮುದ್ರಿಕೆ ದಾಖಲೆಗಳನ್ನು ಪಡೆದು, ಸಭೆಯಲ್ಲಿ ಪಾಲ್ಗೊಂಡಿದ್ದ 19 ಸದಸ್ಯರ ಮಾತುಗಳನ್ನೂ ಲಿಖಿತ ರೂಪದಲ್ಲಿ ದಾಖಲಿಸಿಕೊಂಡರು. </p><p>ರಾತ್ರಿ ಕಚೇರಿಗೇ ಊಟ ತರಿಸಿಕೊಂಡ 8 ಅಧಿಕಾರಿ–ಸಿಬ್ಬಂದಿಯ ತಂಡವು ಊಟದ ತರುವಾಯವೂ ಹೇಳಿಕೆ ದಾಖಲಿಸಿಕೊಳ್ಳುವ ಕಾರ್ಯ ಮುಂದುವರಿಸಿತ್ತು. ಈ ಸಂದರ್ಭ ಮುಡಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯೂ ಜೊತೆಗಿದ್ದರು.</p>.ಮುಡಾ ಕುರಿತು ಇ.ಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ.ಮುಡಾ ಪ್ರಕರಣ | ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ: ಡಿ.ಕೆ.ಶಿವಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>