<p><strong>ಮೈಸೂರು</strong>: ‘ಸಮರ್ಪಕವಾಗಿ ಕಾರ್ಯನಿರ್ವಹಿಸದ, ಭ್ರಷ್ಟಾಚಾರದಲ್ಲಿ ಮುಳುಗಿದ ಚುನಾಯಿತ ಪ್ರತಿನಿಧಿಗಳನ್ನು ವಾಪಸ್ ಕರೆಸಿಕೊಳ್ಳುವ ಅಧಿಕಾರ ಮತದಾರರಿಗೆ ಇರಬೇಕು’ ಎಂದು ಚಲನಚಿತ್ರ ನಟ ‘ಮುಖ್ಯಮಂತ್ರಿ’ ಚಂದ್ರು ಹೇಳಿದರು.</p><p>ಇಲ್ಲಿನ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ದಾರಿ ಫೌಂಡೇಷನ್ ಗುರುವಾರ ಏರ್ಪಡಿಸಿದ್ದ ‘ಭವಿಷ್ಯದಲ್ಲಿ ಪ್ರಜಾಪ್ರಭುತ್ವದ ರಕ್ಷಣೆಯ ಜವಾಬ್ದಾರಿ ಯುವಶಕ್ತಿಯ ಕೈಯಲ್ಲಿ’ ಕುರಿತ ಮುಕ್ತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಈಗ, ಚುನಾಯಿತ ಪ್ರತಿನಿಧಿಗಳು ಐದು ವರ್ಷಗಳವರೆಗೆ ಏನು ಮಾಡಿದರೂ ಕೇಳುವಂತಿಲ್ಲ ಎಂಬಂತಿದೆ. ಈ ವ್ಯವಸ್ಥೆ ಹೋಗಬೇಕು. ಅವರು ಮತದಾರರಿಗೆ ಉತ್ತರದಾಯಿಗಳಾಗಿರಬೇಕು. ಜನರು ಪ್ರಶ್ನಿಸುತ್ತಾರೆಂಬ ಭಯವಿರಬೇಕು’ ಎಂದರು.</p><p>‘ಗೆಲುವಿಗೆ ಚಲಾಯಿತ ಮತಗಳ ಪೈಕಿ ಶೇ.50ರಷ್ಟನ್ನು ಪಡೆದಿರಬೇಕು ಎಂಬ ಮಾನದಂಡವನ್ನು ಮಾಡಬೇಕು’ ಎಂದು ಒತ್ತಾಯಿಸಿದರು.</p><p><strong>ಬದಲಿಸಲಾಗದು: </strong></p><p>‘ಕೆಲವರು ಸಂವಿಧಾನವನ್ನು ಬದಲಿಸುವ ಮಾತನಾಡುತ್ತಾರೆ. ಖಂಡಿತ ಅದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲತತ್ವಗಳನ್ನು ಬದಲಿಸಲು ಅವಕಾಶವೇ ಇಲ್ಲ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು’ ಎಂದರು.</p><p>‘ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗದ ಜೊತೆಗೆ ಅನಧಿಕೃತವಾಗಿ ಮಾಧ್ಯಮ ರಂಗವೂ ಇದೆ. ಇತ್ತೀಚೆಗೆ ಧರ್ಮ ಎಂಬ ಮತ್ತೊಂದು ಅಂಗವೂ ಕಾಣಿಸುತ್ತಿದೆ. ಧರ್ಮ ಇತಿಮಿತಿಯಲ್ಲಿರಬೇಕೇ ಹೊರತು ಅದೇ ಮುಖ್ಯ ಆಗಬಾರದು’ ಎಂದು ಹೇಳಿದರು.</p><p>‘ಸರ್ಕಾರಗಳು ಎಲ್ಲರಿಗೂ ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯವನ್ನು ಉಚಿತವಾಗಿ ಕಲ್ಪಿಸಬೇಕು. ಸರ್ಕಾರಿ ಶಾಲೆಗಳು, ಕಾಲೇಜುಗಳು ಹಾಗೂ ಆಸ್ಪತ್ರೆಗಳನ್ನು ಬಲಪಡಿಸಬೇಕು. ರೈತರಿಗೆ ಬೆಂಬಲ ಬೆಲೆ ಬದಲು ಸಮರ್ಪಕವಾಗಿ ನೀರು ಹಾಗೂ ವಿದ್ಯುತ್ ಪೂರೈಸಬೇಕು’ ಎಂದು ಒತ್ತಾಯಿಸಿದರು.</p><p><strong>ಕನ್ನಡಕ್ಕೆ ಆದ್ಯತೆ ಇರಲಿ: </strong></p><p>‘ಹಿಂದಿ ರಾಷ್ಟ್ರ ಭಾಷೆಯಲ್ಲ. ಸಂವಿಧಾನದ 9ನೇ ಶೆಡ್ಯೂಲ್ನಲ್ಲಿ ಹೇಳಿರುವಂತೆ ಅದೂ ಒಂದು ಭಾಷೆಯಷ್ಟೆ. ಕರ್ನಾಟಕದಲ್ಲಿ ಎಲ್ಲಾ ಹಂತಗಳಲ್ಲೂ ಕನ್ನಡಕ್ಕೆ ಆದ್ಯತೆ ಸಿಗಬೇಕು. ಇಂಗ್ಲಿಷ್ ಕೂಡ ಚೆನ್ನಾಗಿ ಕಲಿಯಬೇಕು. ದೇಶಪ್ರೇಮ, ನಾಡಪ್ರೇಮ, ಮಾತೃಭಾಷಾ ಪ್ರೇಮ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p><p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಸಿ. ನಟರಾಜ್, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಮೂರೂ ಮಹಾರಾಣಿ ಕಾಲೇಜುಗಳ ಹಾಸ್ಟೆಲ್ ನಿರ್ಮಾಣಕ್ಕೆ ₹ 291 ಕೋಟಿ ನೀಡಿದ್ದು, ನಮ್ಮ ಕಾಲೇಜಿಗೆ 50 ಕೋಟಿ ದೊರೆತಿದೆ. ಈ ಮೂಲಕ ಸರ್ಕಾರವು ಗ್ರಾಮೀಣ, ಬಡ ಹಾಗೂ ಮಧ್ಯಮವರ್ಗದ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿದೆ’ ಎಂದು ಹೇಳಿದರು.</p><p>ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ದಾರಿ ಫೌಂಡೇಷನ್ ಅಧ್ಯಕ್ಷ ಎಲ್. ರಂಗಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಕಾರ್ಯದರ್ಶಿ ತಗಡೂರು ವೀರೇಶ್ಕುಮಾರ್ ಮಹಾಮನೆ ಪ್ರಾಸ್ತಾವಿಕ ಭಾಷಣ ಮಾಡಿದರು. ಸಂಚಾಲಕ ಪ್ರಭಾಕರ್, ಐಕ್ಯೂಎಸಿ ಸಂಚಾಲಕ ಎಸ್. ಮುತ್ತುರಾಜ, ಖಜಾಂಚಿ ರಾಘವೇಂದ್ರ, ಮಲ್ಲಣ್ಣ, ತೋಂಟೇಶ್ ಇದ್ದರು.</p><p>ಮೈಸೂರು ಎಂ. ಮಹಾಲಿಂಗ ನಾಡಗೀತೆ ಹಾಗೂ ಸಂವಿಧಾನಗೀತೆ ಹಾಡಿದರು. ವಿದ್ಯಾರ್ಥಿನಿ ಅಧ್ಯಕ್ಷೆ ಎಸ್.ಜೆ. ಸಿಂಚನಾ ಸ್ವಾಗತಿಸಿದರು. ಕಾರ್ಯದರ್ಶಿ ಸೈಯದಾ ನೂರೈನ್ ನಿರೂಪಿಸಿದರು. ಪಲ್ಲವಿ ಪರಿಚಯಿಸಿದರು. ತನುಶ್ರೀ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸಮರ್ಪಕವಾಗಿ ಕಾರ್ಯನಿರ್ವಹಿಸದ, ಭ್ರಷ್ಟಾಚಾರದಲ್ಲಿ ಮುಳುಗಿದ ಚುನಾಯಿತ ಪ್ರತಿನಿಧಿಗಳನ್ನು ವಾಪಸ್ ಕರೆಸಿಕೊಳ್ಳುವ ಅಧಿಕಾರ ಮತದಾರರಿಗೆ ಇರಬೇಕು’ ಎಂದು ಚಲನಚಿತ್ರ ನಟ ‘ಮುಖ್ಯಮಂತ್ರಿ’ ಚಂದ್ರು ಹೇಳಿದರು.</p><p>ಇಲ್ಲಿನ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ದಾರಿ ಫೌಂಡೇಷನ್ ಗುರುವಾರ ಏರ್ಪಡಿಸಿದ್ದ ‘ಭವಿಷ್ಯದಲ್ಲಿ ಪ್ರಜಾಪ್ರಭುತ್ವದ ರಕ್ಷಣೆಯ ಜವಾಬ್ದಾರಿ ಯುವಶಕ್ತಿಯ ಕೈಯಲ್ಲಿ’ ಕುರಿತ ಮುಕ್ತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಈಗ, ಚುನಾಯಿತ ಪ್ರತಿನಿಧಿಗಳು ಐದು ವರ್ಷಗಳವರೆಗೆ ಏನು ಮಾಡಿದರೂ ಕೇಳುವಂತಿಲ್ಲ ಎಂಬಂತಿದೆ. ಈ ವ್ಯವಸ್ಥೆ ಹೋಗಬೇಕು. ಅವರು ಮತದಾರರಿಗೆ ಉತ್ತರದಾಯಿಗಳಾಗಿರಬೇಕು. ಜನರು ಪ್ರಶ್ನಿಸುತ್ತಾರೆಂಬ ಭಯವಿರಬೇಕು’ ಎಂದರು.</p><p>‘ಗೆಲುವಿಗೆ ಚಲಾಯಿತ ಮತಗಳ ಪೈಕಿ ಶೇ.50ರಷ್ಟನ್ನು ಪಡೆದಿರಬೇಕು ಎಂಬ ಮಾನದಂಡವನ್ನು ಮಾಡಬೇಕು’ ಎಂದು ಒತ್ತಾಯಿಸಿದರು.</p><p><strong>ಬದಲಿಸಲಾಗದು: </strong></p><p>‘ಕೆಲವರು ಸಂವಿಧಾನವನ್ನು ಬದಲಿಸುವ ಮಾತನಾಡುತ್ತಾರೆ. ಖಂಡಿತ ಅದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲತತ್ವಗಳನ್ನು ಬದಲಿಸಲು ಅವಕಾಶವೇ ಇಲ್ಲ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು’ ಎಂದರು.</p><p>‘ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗದ ಜೊತೆಗೆ ಅನಧಿಕೃತವಾಗಿ ಮಾಧ್ಯಮ ರಂಗವೂ ಇದೆ. ಇತ್ತೀಚೆಗೆ ಧರ್ಮ ಎಂಬ ಮತ್ತೊಂದು ಅಂಗವೂ ಕಾಣಿಸುತ್ತಿದೆ. ಧರ್ಮ ಇತಿಮಿತಿಯಲ್ಲಿರಬೇಕೇ ಹೊರತು ಅದೇ ಮುಖ್ಯ ಆಗಬಾರದು’ ಎಂದು ಹೇಳಿದರು.</p><p>‘ಸರ್ಕಾರಗಳು ಎಲ್ಲರಿಗೂ ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯವನ್ನು ಉಚಿತವಾಗಿ ಕಲ್ಪಿಸಬೇಕು. ಸರ್ಕಾರಿ ಶಾಲೆಗಳು, ಕಾಲೇಜುಗಳು ಹಾಗೂ ಆಸ್ಪತ್ರೆಗಳನ್ನು ಬಲಪಡಿಸಬೇಕು. ರೈತರಿಗೆ ಬೆಂಬಲ ಬೆಲೆ ಬದಲು ಸಮರ್ಪಕವಾಗಿ ನೀರು ಹಾಗೂ ವಿದ್ಯುತ್ ಪೂರೈಸಬೇಕು’ ಎಂದು ಒತ್ತಾಯಿಸಿದರು.</p><p><strong>ಕನ್ನಡಕ್ಕೆ ಆದ್ಯತೆ ಇರಲಿ: </strong></p><p>‘ಹಿಂದಿ ರಾಷ್ಟ್ರ ಭಾಷೆಯಲ್ಲ. ಸಂವಿಧಾನದ 9ನೇ ಶೆಡ್ಯೂಲ್ನಲ್ಲಿ ಹೇಳಿರುವಂತೆ ಅದೂ ಒಂದು ಭಾಷೆಯಷ್ಟೆ. ಕರ್ನಾಟಕದಲ್ಲಿ ಎಲ್ಲಾ ಹಂತಗಳಲ್ಲೂ ಕನ್ನಡಕ್ಕೆ ಆದ್ಯತೆ ಸಿಗಬೇಕು. ಇಂಗ್ಲಿಷ್ ಕೂಡ ಚೆನ್ನಾಗಿ ಕಲಿಯಬೇಕು. ದೇಶಪ್ರೇಮ, ನಾಡಪ್ರೇಮ, ಮಾತೃಭಾಷಾ ಪ್ರೇಮ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p><p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಸಿ. ನಟರಾಜ್, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಮೂರೂ ಮಹಾರಾಣಿ ಕಾಲೇಜುಗಳ ಹಾಸ್ಟೆಲ್ ನಿರ್ಮಾಣಕ್ಕೆ ₹ 291 ಕೋಟಿ ನೀಡಿದ್ದು, ನಮ್ಮ ಕಾಲೇಜಿಗೆ 50 ಕೋಟಿ ದೊರೆತಿದೆ. ಈ ಮೂಲಕ ಸರ್ಕಾರವು ಗ್ರಾಮೀಣ, ಬಡ ಹಾಗೂ ಮಧ್ಯಮವರ್ಗದ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿದೆ’ ಎಂದು ಹೇಳಿದರು.</p><p>ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ದಾರಿ ಫೌಂಡೇಷನ್ ಅಧ್ಯಕ್ಷ ಎಲ್. ರಂಗಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಕಾರ್ಯದರ್ಶಿ ತಗಡೂರು ವೀರೇಶ್ಕುಮಾರ್ ಮಹಾಮನೆ ಪ್ರಾಸ್ತಾವಿಕ ಭಾಷಣ ಮಾಡಿದರು. ಸಂಚಾಲಕ ಪ್ರಭಾಕರ್, ಐಕ್ಯೂಎಸಿ ಸಂಚಾಲಕ ಎಸ್. ಮುತ್ತುರಾಜ, ಖಜಾಂಚಿ ರಾಘವೇಂದ್ರ, ಮಲ್ಲಣ್ಣ, ತೋಂಟೇಶ್ ಇದ್ದರು.</p><p>ಮೈಸೂರು ಎಂ. ಮಹಾಲಿಂಗ ನಾಡಗೀತೆ ಹಾಗೂ ಸಂವಿಧಾನಗೀತೆ ಹಾಡಿದರು. ವಿದ್ಯಾರ್ಥಿನಿ ಅಧ್ಯಕ್ಷೆ ಎಸ್.ಜೆ. ಸಿಂಚನಾ ಸ್ವಾಗತಿಸಿದರು. ಕಾರ್ಯದರ್ಶಿ ಸೈಯದಾ ನೂರೈನ್ ನಿರೂಪಿಸಿದರು. ಪಲ್ಲವಿ ಪರಿಚಯಿಸಿದರು. ತನುಶ್ರೀ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>