<p><strong>ಮೈಸೂರು: ‘</strong>ಪ್ರವಾಸೋದ್ಯಮ ಹಾಗೂ ಕೈಗಾರಿಕೆ ಅಭಿವೃದ್ಧಿ ದೃಷ್ಟಿಯಿಂದಾಗಿ ರಾಜ್ಯದಲ್ಲಿ 100 ಕಿಲೋ ಮೀಟರ್ ವ್ಯಾಪ್ತಿಗೊಂದು ವಿಮಾನನಿಲ್ದಾಣ ನಿರ್ಮಿಸಲಾಗುವುದು’ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.</p>.<p>ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಹಾಸನ ಹಾಗೂ ವಿಜಯಪುರದಲ್ಲಿ ವಿಮಾನ ನಿಲ್ದಾಣ ಕಾರ್ಯ ಪ್ರಗತಿಯಲ್ಲಿದೆ. ದಾವಣಗೆರೆ, ಬಾದಾಮಿ, ಕೊಪ್ಪಳ, ರಾಯಚೂರು ಹಾಗೂ ಚಿಕ್ಕಮಗಳೂರಿನಲ್ಲೂ ಸ್ಥಾಪಿಸಲಾಗುವುದು’ ಎಂದರು.</p>.<p>‘ಕೇಂದ್ರದ ‘ಭಾರತ್ ಮಾಲಾ–2ನೇ ಯೋಜನೆ’ಯಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>‘ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರ ಸಮಾವೇಶ ಯಶಸ್ವಿಯಾಗಿದ್ದು, ರಾಜ್ಯಕ್ಕೆ ₹ 9.89 ಲಕ್ಷ ಕೋಟಿ ಹೂಡಿಕೆಗೆ ಕಂಪನಿಗಳು ಮುಂದಾಗಿವೆ. ಈಗಾಗಲೇ ಒಡಂಬಡಿಕೆಯನ್ನೂ ಮಾಡಿಕೊಳ್ಳಲಾಗಿದೆ. ಇದೆಲ್ಲವೂ ಅನುಷ್ಠಾನಗೊಂಡರೆ 7 ಲಕ್ಷ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ. ಅಂತರರಾಷ್ಟ್ರೀಯ ಕಂಪನಿಗಳು ರಾಜ್ಯದ 2ನೇ ದರ್ಜೆ ನಗರಗಳಲ್ಲಿ ಹೆಚ್ಚು ಬಂಡವಾಳ ಹೂಡಲು ಮುಂದಾಗಿವೆ’ ಎಂದು ತಿಳಿಸಿದರು.</p>.<p>‘ಮೈಸೂರಿನಲ್ಲಿ ₹ 22,500 ಕೋಟಿ ಬಂಡವಾಳದಲ್ಲಿ ಸೆಮಿ–ಕಂಡಕ್ಟರ್ ಯೋಜನೆ ಆರಂಭಗೊಳ್ಳಲಿದೆ’ ಎಂದರು.</p>.<p>‘ಇತರ ರಾಜ್ಯಗಳಿಗಿಂತ ಕರ್ನಾಟಕಕ್ಕೆ ಹೆಚ್ಚು ವಿದೇಶಿ ಬಂಡವಾಳ ಹೂಡಿಕೆದಾರರು ಬರುತ್ತಿದ್ದಾರೆ. ಆಯಾಯ ಜಿಲ್ಲೆಗಳಲ್ಲಿ ಸಿಗುವ ಕಚ್ಚಾ ಪದಾರ್ಥಗಳ ಅನುಗುಣವಾಗಿ ಅಲ್ಲಿ ಕಾರ್ಖಾನೆಗಳನ್ನು ತೆರೆಯಲಾಗುವುದು’ ಎಂದು ತಿಳಿಸಿದರು.</p>.<p><strong>ಮನಸ್ತಾಪವಿಲ್ಲ</strong>: ‘ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹಾಗೂ ವಸತಿ ಸಚಿವ ವಿ.ಸೋಮಣ್ಣ ನಡುವೆ ಯಾವುದೇ ಮನಸ್ತಾಪವಿಲ್ಲ’ ಎಂದು ನಿರಾಣಿ ಹೇಳಿದರು.</p>.<p>‘ಸೋಮಣ್ಣ ಹಲವು ಬಾರಿ ದೆಹಲಿಗೆ ಹೋಗಿದ್ದಾರೆ. ನಾನೂ ಹೋಗುತ್ತೇನೆ, ಅದರಲ್ಲಿ ವಿಶೇಷವೇನಿದೆ? ಸಣ್ಣಪುಟ್ಟ ಸಮಸ್ಯೆ ಇದ್ದರೆ ನಮ್ಮ ನಾಯಕರು ನಿಮಿಷದಲ್ಲಿ ಬಗೆಹರಿಸುತ್ತಾರೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: ‘</strong>ಪ್ರವಾಸೋದ್ಯಮ ಹಾಗೂ ಕೈಗಾರಿಕೆ ಅಭಿವೃದ್ಧಿ ದೃಷ್ಟಿಯಿಂದಾಗಿ ರಾಜ್ಯದಲ್ಲಿ 100 ಕಿಲೋ ಮೀಟರ್ ವ್ಯಾಪ್ತಿಗೊಂದು ವಿಮಾನನಿಲ್ದಾಣ ನಿರ್ಮಿಸಲಾಗುವುದು’ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.</p>.<p>ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಹಾಸನ ಹಾಗೂ ವಿಜಯಪುರದಲ್ಲಿ ವಿಮಾನ ನಿಲ್ದಾಣ ಕಾರ್ಯ ಪ್ರಗತಿಯಲ್ಲಿದೆ. ದಾವಣಗೆರೆ, ಬಾದಾಮಿ, ಕೊಪ್ಪಳ, ರಾಯಚೂರು ಹಾಗೂ ಚಿಕ್ಕಮಗಳೂರಿನಲ್ಲೂ ಸ್ಥಾಪಿಸಲಾಗುವುದು’ ಎಂದರು.</p>.<p>‘ಕೇಂದ್ರದ ‘ಭಾರತ್ ಮಾಲಾ–2ನೇ ಯೋಜನೆ’ಯಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>‘ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರ ಸಮಾವೇಶ ಯಶಸ್ವಿಯಾಗಿದ್ದು, ರಾಜ್ಯಕ್ಕೆ ₹ 9.89 ಲಕ್ಷ ಕೋಟಿ ಹೂಡಿಕೆಗೆ ಕಂಪನಿಗಳು ಮುಂದಾಗಿವೆ. ಈಗಾಗಲೇ ಒಡಂಬಡಿಕೆಯನ್ನೂ ಮಾಡಿಕೊಳ್ಳಲಾಗಿದೆ. ಇದೆಲ್ಲವೂ ಅನುಷ್ಠಾನಗೊಂಡರೆ 7 ಲಕ್ಷ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ. ಅಂತರರಾಷ್ಟ್ರೀಯ ಕಂಪನಿಗಳು ರಾಜ್ಯದ 2ನೇ ದರ್ಜೆ ನಗರಗಳಲ್ಲಿ ಹೆಚ್ಚು ಬಂಡವಾಳ ಹೂಡಲು ಮುಂದಾಗಿವೆ’ ಎಂದು ತಿಳಿಸಿದರು.</p>.<p>‘ಮೈಸೂರಿನಲ್ಲಿ ₹ 22,500 ಕೋಟಿ ಬಂಡವಾಳದಲ್ಲಿ ಸೆಮಿ–ಕಂಡಕ್ಟರ್ ಯೋಜನೆ ಆರಂಭಗೊಳ್ಳಲಿದೆ’ ಎಂದರು.</p>.<p>‘ಇತರ ರಾಜ್ಯಗಳಿಗಿಂತ ಕರ್ನಾಟಕಕ್ಕೆ ಹೆಚ್ಚು ವಿದೇಶಿ ಬಂಡವಾಳ ಹೂಡಿಕೆದಾರರು ಬರುತ್ತಿದ್ದಾರೆ. ಆಯಾಯ ಜಿಲ್ಲೆಗಳಲ್ಲಿ ಸಿಗುವ ಕಚ್ಚಾ ಪದಾರ್ಥಗಳ ಅನುಗುಣವಾಗಿ ಅಲ್ಲಿ ಕಾರ್ಖಾನೆಗಳನ್ನು ತೆರೆಯಲಾಗುವುದು’ ಎಂದು ತಿಳಿಸಿದರು.</p>.<p><strong>ಮನಸ್ತಾಪವಿಲ್ಲ</strong>: ‘ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹಾಗೂ ವಸತಿ ಸಚಿವ ವಿ.ಸೋಮಣ್ಣ ನಡುವೆ ಯಾವುದೇ ಮನಸ್ತಾಪವಿಲ್ಲ’ ಎಂದು ನಿರಾಣಿ ಹೇಳಿದರು.</p>.<p>‘ಸೋಮಣ್ಣ ಹಲವು ಬಾರಿ ದೆಹಲಿಗೆ ಹೋಗಿದ್ದಾರೆ. ನಾನೂ ಹೋಗುತ್ತೇನೆ, ಅದರಲ್ಲಿ ವಿಶೇಷವೇನಿದೆ? ಸಣ್ಣಪುಟ್ಟ ಸಮಸ್ಯೆ ಇದ್ದರೆ ನಮ್ಮ ನಾಯಕರು ನಿಮಿಷದಲ್ಲಿ ಬಗೆಹರಿಸುತ್ತಾರೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>