<p><strong>ಮೈಸೂರು</strong>: ಭಾರತೀಯ ಮಾನವಶಾಸ್ತ್ರ ಸಮೀಕ್ಷೆ (ಎಎಸ್ಐ) ಹಾಗೂ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಇಲ್ಲಿನ ಎಎಸ್ಐ ಕಚೇರಿಯಲ್ಲಿ ಭಾನುವಾರ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ನಡೆಯಿತು.</p>.<p>‘ವೇಗವಾಗಿ ಬದಲಾಗುತ್ತಿರುವ ಸಮುದಾಯಗಳಲ್ಲಿ ವಸ್ತು ಸಂಗ್ರಹಾಲಯಗಳ ಭವಿಷ್ಯ’ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಬುಡಕಟ್ಟು ಸಮುದಾಯಗಳ ಸಾಧಕರ ಯಶಸ್ಸಿನ ಚಿತ್ರಣ ಹಾಗೂ ಸಾಂಸ್ಕೃತಿಕ ಪ್ರದರ್ಶನಗಳು ನಡೆದವು.</p>.<p>ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಪ್ರಭಾರ ನಿರ್ದೇಶಕ ಟಿ.ಯೋಗೇಶ್ ಮಾತನಾಡಿ, ‘ಎಎಸ್ಐ ಮತ್ತು ಬುಡಕಟ್ಟು ಸಂಶೋಧನಾ ಸಂಸ್ಥೆಯು ರಾಜ್ಯದ ಬುಡಕಟ್ಟುಗಳು, ಆದಿವಾಸಿಗಳು ಹಾಗೂ ಇತರೆ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>ಎಎಸ್ಐ ಉಪನಿರ್ದೇಶಕ ಹರ್ಷವರ್ಧನ್, ಮೂಲ ಆದಿವಾಸಿಗಳ ಅಧ್ಯಯನ ಕೇಂದ್ರ ಸಂಶೋಧನಾಧಿಕಾರಿ ಕೆ.ವಿ.ಕೃಷ್ಣಮೂರ್ತಿ, ಎಎಸ್ಐ ಚೀಫ್ ಮ್ಯೂಸಿಯಂ ಕ್ಯುರೇಟರ್ ಬನಿತಾ ಬಿಹಾರ, ಅರಣ್ಯಾಧಾರಿತ ಬುಡಕಟ್ಟು ಸಮುದಾಯಗಳ ಮುಖಂಡರಾದ ಚಿಕ್ಕಬೊಮ್ಮ, ಕಾಳ ಕಲ್ಕರ್ ವಿಠ್ಠಲ್ ನಾಡಚ್ಚಿ, ಬಸವರಾಜು, ಸೋಲಿಗ ಸಿದ್ದಮ್ಮ, ಬಸಮ್ಮ, ದಿನೇಶ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಭಾರತೀಯ ಮಾನವಶಾಸ್ತ್ರ ಸಮೀಕ್ಷೆ (ಎಎಸ್ಐ) ಹಾಗೂ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಇಲ್ಲಿನ ಎಎಸ್ಐ ಕಚೇರಿಯಲ್ಲಿ ಭಾನುವಾರ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ನಡೆಯಿತು.</p>.<p>‘ವೇಗವಾಗಿ ಬದಲಾಗುತ್ತಿರುವ ಸಮುದಾಯಗಳಲ್ಲಿ ವಸ್ತು ಸಂಗ್ರಹಾಲಯಗಳ ಭವಿಷ್ಯ’ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಬುಡಕಟ್ಟು ಸಮುದಾಯಗಳ ಸಾಧಕರ ಯಶಸ್ಸಿನ ಚಿತ್ರಣ ಹಾಗೂ ಸಾಂಸ್ಕೃತಿಕ ಪ್ರದರ್ಶನಗಳು ನಡೆದವು.</p>.<p>ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಪ್ರಭಾರ ನಿರ್ದೇಶಕ ಟಿ.ಯೋಗೇಶ್ ಮಾತನಾಡಿ, ‘ಎಎಸ್ಐ ಮತ್ತು ಬುಡಕಟ್ಟು ಸಂಶೋಧನಾ ಸಂಸ್ಥೆಯು ರಾಜ್ಯದ ಬುಡಕಟ್ಟುಗಳು, ಆದಿವಾಸಿಗಳು ಹಾಗೂ ಇತರೆ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>ಎಎಸ್ಐ ಉಪನಿರ್ದೇಶಕ ಹರ್ಷವರ್ಧನ್, ಮೂಲ ಆದಿವಾಸಿಗಳ ಅಧ್ಯಯನ ಕೇಂದ್ರ ಸಂಶೋಧನಾಧಿಕಾರಿ ಕೆ.ವಿ.ಕೃಷ್ಣಮೂರ್ತಿ, ಎಎಸ್ಐ ಚೀಫ್ ಮ್ಯೂಸಿಯಂ ಕ್ಯುರೇಟರ್ ಬನಿತಾ ಬಿಹಾರ, ಅರಣ್ಯಾಧಾರಿತ ಬುಡಕಟ್ಟು ಸಮುದಾಯಗಳ ಮುಖಂಡರಾದ ಚಿಕ್ಕಬೊಮ್ಮ, ಕಾಳ ಕಲ್ಕರ್ ವಿಠ್ಠಲ್ ನಾಡಚ್ಚಿ, ಬಸವರಾಜು, ಸೋಲಿಗ ಸಿದ್ದಮ್ಮ, ಬಸಮ್ಮ, ದಿನೇಶ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>