<p><strong>ಮೈಸೂರು</strong>: ಇಲ್ಲಿನ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಿಂದ 2024–25ನೇ ಸಾಲಿನಲ್ಲಿ ನಡೆಸಲಾಗುವ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪಠ್ಯಕ್ರಮವನ್ನು ಪರಿಷ್ಕರಿಸಲಾಗಿದೆ.</p>.<p>ವಿದ್ಯಾರ್ಥಿಗಳು ಹಾಗೂ ಪೋಷಕರ ಕೋರಿಕೆಯ ಮೇರೆಗೆ, ವಿಶ್ವವಿದ್ಯಾಲಯದ ಅಧ್ಯಯನ ಮಂಡಳಿ (ಬಿಒಎಸ್) ಶಿಫಾರಸಿನಂತೆ ಕ್ರಮ ಕೈಗೊಳ್ಳಲಾಗಿದೆ.</p>.<p>ಸಂಗೀತ, ನೃತ್ಯ ಹಾಗೂ ತಾಳವಾದ್ಯ ಹಿರಿಯ ದರ್ಜೆಗೆ (ಸೀನಿಯರ್) ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕಿರಿಯ ದರ್ಜೆಯಲ್ಲಿ ಉತ್ತೀರ್ಣರಾಗಿ 2 ವರ್ಷಗಳಾಗಿರಬೇಕು ಅಥವಾ ಅಭ್ಯರ್ಥಿಗೆ 17 ವರ್ಷ ತುಂಬಿರಬೇಕು ಅಥವಾ ಸಂಗೀತ/ ನೃತ್ಯ/ ತಾಳವಾದ್ಯ ವಿಷಯಗಳನ್ನು ಐಚ್ಛಿಕವಾಗಿ ವ್ಯಾಸಂಗ ಮಾಡಿ ಪದವಿಪೂರ್ವ (ಪಿಯುಸಿ) ಶಿಕ್ಷಣ ಇಲಾಖೆ ನಡೆಸುವ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಅಂಥವರು ನೇರವಾಗಿ ಹಿರಿಯ ದರ್ಜೆ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. </p>.<p>ಜೂನಿಯರ್, ಸೀನಿಯರ್, ವಿದ್ವತ್ಪೂರ್ವ ಹಾಗೂ ವಿದ್ವತ್ ಅಂತಿಮ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು ಮರು ಪರೀಕ್ಷೆಗೆ ಮಾರ್ಚ್ 17ರಿಂದ ಅರ್ಜಿ ಸಲ್ಲಿಸಬಹುದು.</p>.<p>ಈ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಇಲ್ಲಿನ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಿಂದ 2024–25ನೇ ಸಾಲಿನಲ್ಲಿ ನಡೆಸಲಾಗುವ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪಠ್ಯಕ್ರಮವನ್ನು ಪರಿಷ್ಕರಿಸಲಾಗಿದೆ.</p>.<p>ವಿದ್ಯಾರ್ಥಿಗಳು ಹಾಗೂ ಪೋಷಕರ ಕೋರಿಕೆಯ ಮೇರೆಗೆ, ವಿಶ್ವವಿದ್ಯಾಲಯದ ಅಧ್ಯಯನ ಮಂಡಳಿ (ಬಿಒಎಸ್) ಶಿಫಾರಸಿನಂತೆ ಕ್ರಮ ಕೈಗೊಳ್ಳಲಾಗಿದೆ.</p>.<p>ಸಂಗೀತ, ನೃತ್ಯ ಹಾಗೂ ತಾಳವಾದ್ಯ ಹಿರಿಯ ದರ್ಜೆಗೆ (ಸೀನಿಯರ್) ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕಿರಿಯ ದರ್ಜೆಯಲ್ಲಿ ಉತ್ತೀರ್ಣರಾಗಿ 2 ವರ್ಷಗಳಾಗಿರಬೇಕು ಅಥವಾ ಅಭ್ಯರ್ಥಿಗೆ 17 ವರ್ಷ ತುಂಬಿರಬೇಕು ಅಥವಾ ಸಂಗೀತ/ ನೃತ್ಯ/ ತಾಳವಾದ್ಯ ವಿಷಯಗಳನ್ನು ಐಚ್ಛಿಕವಾಗಿ ವ್ಯಾಸಂಗ ಮಾಡಿ ಪದವಿಪೂರ್ವ (ಪಿಯುಸಿ) ಶಿಕ್ಷಣ ಇಲಾಖೆ ನಡೆಸುವ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಅಂಥವರು ನೇರವಾಗಿ ಹಿರಿಯ ದರ್ಜೆ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. </p>.<p>ಜೂನಿಯರ್, ಸೀನಿಯರ್, ವಿದ್ವತ್ಪೂರ್ವ ಹಾಗೂ ವಿದ್ವತ್ ಅಂತಿಮ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು ಮರು ಪರೀಕ್ಷೆಗೆ ಮಾರ್ಚ್ 17ರಿಂದ ಅರ್ಜಿ ಸಲ್ಲಿಸಬಹುದು.</p>.<p>ಈ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>