<p><strong>ಮೈಸೂರು:</strong> ‘ವೃತ್ತಿನಿರತ ಸಂಗೀತ ಕಲಾವಿದರನ್ನು ಶಾಲಾ ಕಾಲೇಜುಗಳಲ್ಲಿ ಸಂಗೀತ ಶಿಕ್ಷಕರಾಗಿ ನೇಮಿಸಬೇಕು’ ಎಂದು ಸಂಗೀತ ವಿದ್ವಾಂಸ ಪ್ರೊ.ಸಿ.ಎ.ಶ್ರೀಧರ ಒತ್ತಾಯಿಸಿದರು.</p>.<p>ಕರ್ನಾಟಕ ಗಾನಕಲಾ ಪರಿಷತ್ತು ನಗರದಲ್ಲಿ ಬುಧವಾರದಿಂದ ಆಯೋಜಿಸಿರುವ ರಾಜ್ಯ ಸಂಗೀತ ಸಮ್ಮೇಳನದ ಅಧ್ಯಕ್ಷೀಯ ಭಾಷಣ ಮಾಡಿದ ಅವರು, ‘ಕರ್ನಾಟಕ ಶಾಸ್ತ್ರೀಯ ಸಂಗೀತ ಬೆಳವಣಿಗೆಗೆ ಸರ್ಕಾರ ಪ್ರಾಧಿಕಾರ ರಚಿಸಬೇಕು’ ಎಂದು ಪ್ರತಿಪಾದಿಸಿದರು.</p>.<p>‘ಮುಜರಾಯಿ ಇಲಾಖೆಯ ದೇಗುಲಗಳು ಹಾಗೂ ಪ್ರವಾಸಿ ತಾಣಗಳಲ್ಲಿ ಸಂಗೀತ ಕಛೇರಿ ಆಯೋಜಿಸಬೇಕು. ಕಲಾವಿದರ ಗೌರವಧನ ಹೆಚ್ಚಿಸಬೇಕು. ಆಕಾಶವಾಣಿಯಲ್ಲಿ ನಿಲಯ ಕಲಾವಿದರ ನೇಮಕ ಮಾಡಬೇಕು. ಸಾಂಪ್ರದಾಯಿಕ ಮೈಸೂರು ವೀಣೆ, ತಂಬೂರಿ ತಯಾರಕರನ್ನು ಪ್ರೋತ್ಸಾಹಿಸಬೇಕು’ ಎಂದು ಅವರು ಒತ್ತಾಯಿಸಿದರು. </p>.<p>‘ಸರ್ಕಾರದ ಸಾಂಸ್ಕೃತಿಕ ಉತ್ಸವಗಳಲ್ಲಿ ಹೊರರಾಜ್ಯ ಹಾಗೂ ನಾಡಿನ ಸಂಗೀತಗಾರರ ನಡುವೆ ತಾರತಮ್ಯ ಮಾಡದೇ ಸಮಾನ ವೇದಿಕೆ ನೀಡಬೇಕು’ ಎಂದರು.</p>.<p> <strong>‘ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಿಲ್ಲ’</strong></p><p> ಪರಿಷತ್ತಿನ ಕಾರ್ಯಕಾರಿ ಸಮಿತಿ ಅಧ್ಯಕ್ಷ ಆರ್.ಕೆ.ಪದ್ಮನಾಭ ‘ಶಾಸ್ತ್ರೀಯ ಸಂಗೀತ ಕ್ಷೇತ್ರದ ಒಬ್ಬರನ್ನು ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು. ‘ಕನ್ನಡ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರವೊಂದು ಇದೆಯೊ ಇಲ್ಲವೊ ಎಂಬುದೇ ಆಯ್ಕೆ ಸಮಿತಿಗೆ ಗೊತ್ತಿಲ್ಲ’ ಎಂದರು. ‘ಪರಿಷತ್ತಿನ ಸಮ್ಮೇಳನಕ್ಕೆ ಅನುದಾನ ನೀಡಬೇಕು’ ಎಂದೂ ಒತ್ತಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ವೃತ್ತಿನಿರತ ಸಂಗೀತ ಕಲಾವಿದರನ್ನು ಶಾಲಾ ಕಾಲೇಜುಗಳಲ್ಲಿ ಸಂಗೀತ ಶಿಕ್ಷಕರಾಗಿ ನೇಮಿಸಬೇಕು’ ಎಂದು ಸಂಗೀತ ವಿದ್ವಾಂಸ ಪ್ರೊ.ಸಿ.ಎ.ಶ್ರೀಧರ ಒತ್ತಾಯಿಸಿದರು.</p>.<p>ಕರ್ನಾಟಕ ಗಾನಕಲಾ ಪರಿಷತ್ತು ನಗರದಲ್ಲಿ ಬುಧವಾರದಿಂದ ಆಯೋಜಿಸಿರುವ ರಾಜ್ಯ ಸಂಗೀತ ಸಮ್ಮೇಳನದ ಅಧ್ಯಕ್ಷೀಯ ಭಾಷಣ ಮಾಡಿದ ಅವರು, ‘ಕರ್ನಾಟಕ ಶಾಸ್ತ್ರೀಯ ಸಂಗೀತ ಬೆಳವಣಿಗೆಗೆ ಸರ್ಕಾರ ಪ್ರಾಧಿಕಾರ ರಚಿಸಬೇಕು’ ಎಂದು ಪ್ರತಿಪಾದಿಸಿದರು.</p>.<p>‘ಮುಜರಾಯಿ ಇಲಾಖೆಯ ದೇಗುಲಗಳು ಹಾಗೂ ಪ್ರವಾಸಿ ತಾಣಗಳಲ್ಲಿ ಸಂಗೀತ ಕಛೇರಿ ಆಯೋಜಿಸಬೇಕು. ಕಲಾವಿದರ ಗೌರವಧನ ಹೆಚ್ಚಿಸಬೇಕು. ಆಕಾಶವಾಣಿಯಲ್ಲಿ ನಿಲಯ ಕಲಾವಿದರ ನೇಮಕ ಮಾಡಬೇಕು. ಸಾಂಪ್ರದಾಯಿಕ ಮೈಸೂರು ವೀಣೆ, ತಂಬೂರಿ ತಯಾರಕರನ್ನು ಪ್ರೋತ್ಸಾಹಿಸಬೇಕು’ ಎಂದು ಅವರು ಒತ್ತಾಯಿಸಿದರು. </p>.<p>‘ಸರ್ಕಾರದ ಸಾಂಸ್ಕೃತಿಕ ಉತ್ಸವಗಳಲ್ಲಿ ಹೊರರಾಜ್ಯ ಹಾಗೂ ನಾಡಿನ ಸಂಗೀತಗಾರರ ನಡುವೆ ತಾರತಮ್ಯ ಮಾಡದೇ ಸಮಾನ ವೇದಿಕೆ ನೀಡಬೇಕು’ ಎಂದರು.</p>.<p> <strong>‘ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಿಲ್ಲ’</strong></p><p> ಪರಿಷತ್ತಿನ ಕಾರ್ಯಕಾರಿ ಸಮಿತಿ ಅಧ್ಯಕ್ಷ ಆರ್.ಕೆ.ಪದ್ಮನಾಭ ‘ಶಾಸ್ತ್ರೀಯ ಸಂಗೀತ ಕ್ಷೇತ್ರದ ಒಬ್ಬರನ್ನು ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು. ‘ಕನ್ನಡ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರವೊಂದು ಇದೆಯೊ ಇಲ್ಲವೊ ಎಂಬುದೇ ಆಯ್ಕೆ ಸಮಿತಿಗೆ ಗೊತ್ತಿಲ್ಲ’ ಎಂದರು. ‘ಪರಿಷತ್ತಿನ ಸಮ್ಮೇಳನಕ್ಕೆ ಅನುದಾನ ನೀಡಬೇಕು’ ಎಂದೂ ಒತ್ತಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>