<p><strong>ಮೈಸೂರು</strong>: ‘ಸರ್ಕಾರಿ ಕಾಮಗಾರಿಗಳಲ್ಲಿ ಧರ್ಮಾಧಾರಿತವಾಗಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ’ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸಿದರು.</p>.<p>‘ಸರ್ವರಿಗೂ ಸಮ ಬಾಳು ಸರ್ವರಿಗೂ ಸಮಪಾಲು ಎಂದು ಹೇಳುವ ಸರ್ಕಾರ ಮತ ಬ್ಯಾಂಕ್ಗಾಗಿ ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ. ಬಹುತೇಕ ಉನ್ನತ ಹುದ್ದೆಗಳನ್ನೂ ಅವರಿಗೆ ನೀಡಿ ಈ ಬಾರಿಯ ಬಜೆಟ್ನಲ್ಲೂ ಓಲೈಸಲು ಹೆಚ್ಚಿನ ಹಣ ಘೋಷಿಸಿದೆ. ಅದೂ ಸಾಲದೆಂಬಂತೆ ಸರ್ಕಾರಿ ಗುತ್ತಿಗೆಯ ಕಾಮಗಾರಿಗಳಲ್ಲಿ ಧರ್ಮಾಧಾರಿತವಾಗಿ ಶೇ 4ರಷ್ಟು ಮೀಸಲಾತಿ ನೀಡಲು ಮುಂದಾಗಿದೆ’ ಎಂದು ಕಿಡಿಕಾರಿದರು.</p>.<p>‘ಸರ್ಕಾರ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಬೆಲೆ ನೀಡುತ್ತಿಲ್ಲ. ಅರ್ಹರಿಗೆ ಸೌಲಭ್ಯ ಕೊಡಲು ಹಿಂದೇಟು ಹಾಕುತ್ತಿದೆ. ಸರ್ಕಾರ ಕೂಡಲೇ ಈ ಅವೈಜ್ಞಾನಿಕ ಹಾಗೂ ಸಂವಿಧಾನ ವಿರೋಧಿ ಮೀಸಲಾತಿ ರದ್ದು ಮಾಡಿ ಎಲ್ಲರನ್ನೂ ಸಮನಾಗಿ ಕಾಣಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಮಹೇಶ್ ಕಾಮತ್, ಮಧು ಶಂಕರ್, ವಿ.ಎನ್.ದಾಸ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸರ್ಕಾರಿ ಕಾಮಗಾರಿಗಳಲ್ಲಿ ಧರ್ಮಾಧಾರಿತವಾಗಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ’ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸಿದರು.</p>.<p>‘ಸರ್ವರಿಗೂ ಸಮ ಬಾಳು ಸರ್ವರಿಗೂ ಸಮಪಾಲು ಎಂದು ಹೇಳುವ ಸರ್ಕಾರ ಮತ ಬ್ಯಾಂಕ್ಗಾಗಿ ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ. ಬಹುತೇಕ ಉನ್ನತ ಹುದ್ದೆಗಳನ್ನೂ ಅವರಿಗೆ ನೀಡಿ ಈ ಬಾರಿಯ ಬಜೆಟ್ನಲ್ಲೂ ಓಲೈಸಲು ಹೆಚ್ಚಿನ ಹಣ ಘೋಷಿಸಿದೆ. ಅದೂ ಸಾಲದೆಂಬಂತೆ ಸರ್ಕಾರಿ ಗುತ್ತಿಗೆಯ ಕಾಮಗಾರಿಗಳಲ್ಲಿ ಧರ್ಮಾಧಾರಿತವಾಗಿ ಶೇ 4ರಷ್ಟು ಮೀಸಲಾತಿ ನೀಡಲು ಮುಂದಾಗಿದೆ’ ಎಂದು ಕಿಡಿಕಾರಿದರು.</p>.<p>‘ಸರ್ಕಾರ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಬೆಲೆ ನೀಡುತ್ತಿಲ್ಲ. ಅರ್ಹರಿಗೆ ಸೌಲಭ್ಯ ಕೊಡಲು ಹಿಂದೇಟು ಹಾಕುತ್ತಿದೆ. ಸರ್ಕಾರ ಕೂಡಲೇ ಈ ಅವೈಜ್ಞಾನಿಕ ಹಾಗೂ ಸಂವಿಧಾನ ವಿರೋಧಿ ಮೀಸಲಾತಿ ರದ್ದು ಮಾಡಿ ಎಲ್ಲರನ್ನೂ ಸಮನಾಗಿ ಕಾಣಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಮಹೇಶ್ ಕಾಮತ್, ಮಧು ಶಂಕರ್, ವಿ.ಎನ್.ದಾಸ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>