<p><strong>ಮೈಸೂರು:</strong> ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ನಿಶ್ಚಿತ. ಕ್ಷೇತ್ರ ಯಾವುದು ಎನ್ನುವುದನ್ನು ತಿಂಗಳಾಂತ್ಯದಲ್ಲಿ ಪ್ರಕಟಿಸುತ್ತೇನೆ’ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದರು.</p>.<p>ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಜಮಖಂಡಿ, ಬಾಗಲಕೋಟೆ, ಧಾರವಾಡ ನಗರ, ಶೃಂಗೇರಿ, ಕಾರ್ಕಳ ಈ ಕ್ಷೇತ್ರಗಳಲ್ಲಿ ಒಂದು ಆಯ್ಕೆ ಮಾಡಲಿದ್ದೇನೆ. ಬಿಜೆಪಿಗೆ ಟಿಕೆಟ್ ಕೇಳಿದ್ದೇನೆ. ಕೊಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ. ಹಿಂದುತ್ವದ ಕಾರ್ಯಸೂಚಿಯ ಮೇಲೆ ಗೆಲ್ಲುವ ವಿಶ್ವಾಸವಿದೆ’ ಎಂದರು.</p>.<p>‘ಸಮಾನ ಮನಸ್ಕರು ಬಿಜೆಪಿಯಿಂದ 25 ಟಿಕೆಟ್ ಕೋರಿದ್ದೇವೆ. ಈ ಪೈಕಿ ಐವರು ಸ್ವಾಮೀಜಿಗಳಿಗೂ ಕೇಳಿದ್ದೇವೆ. ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಲಿದ್ದೇವೆ’ ಎಂದು ಹೇಳಿದರು. ಪರಿಶಿಷ್ಟರಿಗೆ, ಮಹಿಳೆಯರಿಗೆ ಮೀಸಲು ಇರುವಂತೆ ಬಿಜೆಪಿಯಲ್ಲಿ ಹಿಂದೂಗಳಿಗೂ ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ವಿಧಾನಸೌಧದಲ್ಲಿ ಸಾವರ್ಕರ್ ಫೋಟೊ ಅನಾವರಣಕ್ಕೆ ಕಾಂಗ್ರೆಸ್ ಆಕ್ಷೇಪದ ಬಗ್ಗೆ ಪ್ರತಿಕ್ರಿಯಿಸಿದ ಮುತಾಲಿಕ್, ‘ಕಾಂಗ್ರೆಸ್ನ ಸಿದ್ದರಾಮಯ್ಯ ಒಂದೇ ಒಂದು ದಿನ ಅಂಡಮಾನ್ ಜೈಲಿನಲ್ಲಿದ್ದ ಬರಲಿ. ಆಗ, ಸಾವರ್ಕರ್ ಅನುಭವಿಸಿದ ಕಷ್ಟ ಏನೆಂದು ಗೊತ್ತಾಗುತ್ತದೆ’ ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ನಿಶ್ಚಿತ. ಕ್ಷೇತ್ರ ಯಾವುದು ಎನ್ನುವುದನ್ನು ತಿಂಗಳಾಂತ್ಯದಲ್ಲಿ ಪ್ರಕಟಿಸುತ್ತೇನೆ’ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದರು.</p>.<p>ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಜಮಖಂಡಿ, ಬಾಗಲಕೋಟೆ, ಧಾರವಾಡ ನಗರ, ಶೃಂಗೇರಿ, ಕಾರ್ಕಳ ಈ ಕ್ಷೇತ್ರಗಳಲ್ಲಿ ಒಂದು ಆಯ್ಕೆ ಮಾಡಲಿದ್ದೇನೆ. ಬಿಜೆಪಿಗೆ ಟಿಕೆಟ್ ಕೇಳಿದ್ದೇನೆ. ಕೊಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ. ಹಿಂದುತ್ವದ ಕಾರ್ಯಸೂಚಿಯ ಮೇಲೆ ಗೆಲ್ಲುವ ವಿಶ್ವಾಸವಿದೆ’ ಎಂದರು.</p>.<p>‘ಸಮಾನ ಮನಸ್ಕರು ಬಿಜೆಪಿಯಿಂದ 25 ಟಿಕೆಟ್ ಕೋರಿದ್ದೇವೆ. ಈ ಪೈಕಿ ಐವರು ಸ್ವಾಮೀಜಿಗಳಿಗೂ ಕೇಳಿದ್ದೇವೆ. ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಲಿದ್ದೇವೆ’ ಎಂದು ಹೇಳಿದರು. ಪರಿಶಿಷ್ಟರಿಗೆ, ಮಹಿಳೆಯರಿಗೆ ಮೀಸಲು ಇರುವಂತೆ ಬಿಜೆಪಿಯಲ್ಲಿ ಹಿಂದೂಗಳಿಗೂ ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ವಿಧಾನಸೌಧದಲ್ಲಿ ಸಾವರ್ಕರ್ ಫೋಟೊ ಅನಾವರಣಕ್ಕೆ ಕಾಂಗ್ರೆಸ್ ಆಕ್ಷೇಪದ ಬಗ್ಗೆ ಪ್ರತಿಕ್ರಿಯಿಸಿದ ಮುತಾಲಿಕ್, ‘ಕಾಂಗ್ರೆಸ್ನ ಸಿದ್ದರಾಮಯ್ಯ ಒಂದೇ ಒಂದು ದಿನ ಅಂಡಮಾನ್ ಜೈಲಿನಲ್ಲಿದ್ದ ಬರಲಿ. ಆಗ, ಸಾವರ್ಕರ್ ಅನುಭವಿಸಿದ ಕಷ್ಟ ಏನೆಂದು ಗೊತ್ತಾಗುತ್ತದೆ’ ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>