<p><strong>ಮೈಸೂರು</strong>: ಇಲ್ಲಿನ ಅವಧೂತ ದತ್ತಪೀಠದಿಂದ ಭಾರತೀಯ ಸೇನೆಗೆ ₹ 25 ಲಕ್ಷ ಕಾಣಿಕೆ ಅರ್ಪಿಸಲಾಯಿತು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಚೆಕ್ ಹಸ್ತಾಂತರಿಸಲಾಯಿತು.</p>.<p>ದತ್ತ ವೆಂಕಟೇಶ್ವರ ಕ್ಷೇತ್ರದ 26ನೇ ಬ್ರಹ್ಮೋತ್ಸವ ಭಾನುವಾರ ಸಂಜೆ ವೇದ ಪಾರಾಯಣಗಳ ಮೂಲಕ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ಕಿರಿಯ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಸಮ್ಮುಖದಲ್ಲಿ ಉದ್ಘಾಟನೆಗೊಂಡಿತು.</p>.<p>ಯದುವೀರ್ ಮಾತನಾಡಿ, ‘ಮೈಸೂರು ನಗರ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಇದಕ್ಕೆ ಪೂರಕವಾಗಿ ಸಂಸ್ಕೃತಿ ಮತ್ತು ಪರಂಪರೆ, ಗುರು ಪರಂಪರೆಯನ್ನು ಅವಧೂತ ದತ್ತಪೀಠ ಉಳಿಸಿಕೊಂಡು ಬಂದಿದೆ. ಅತ್ಯುತ್ತಮ ವಾತಾವರಣ, ಸಂಗೀತದ ವಾತಾವರಣ ಇಲ್ಲಿ ನೆಲಸಿದೆ’ ಎಂದು ಹೇಳಿದರು.</p>.<p>‘ಆಶ್ರಮದಿಂದ ನೀಡಿರುವ ಕಾಣಿಕೆಯನ್ನು ಸರ್ಕಾರಕ್ಕೆ ತಲುಪಿಸುತ್ತೇನೆ’ ಎಂದರು.</p>.<p>ನಿವೃತ್ತ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್, ಶಾಸಕ ಟಿ.ಎಸ್.ಶ್ರೀವತ್ಸ, ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಇಲ್ಲಿನ ಅವಧೂತ ದತ್ತಪೀಠದಿಂದ ಭಾರತೀಯ ಸೇನೆಗೆ ₹ 25 ಲಕ್ಷ ಕಾಣಿಕೆ ಅರ್ಪಿಸಲಾಯಿತು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಚೆಕ್ ಹಸ್ತಾಂತರಿಸಲಾಯಿತು.</p>.<p>ದತ್ತ ವೆಂಕಟೇಶ್ವರ ಕ್ಷೇತ್ರದ 26ನೇ ಬ್ರಹ್ಮೋತ್ಸವ ಭಾನುವಾರ ಸಂಜೆ ವೇದ ಪಾರಾಯಣಗಳ ಮೂಲಕ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ಕಿರಿಯ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಸಮ್ಮುಖದಲ್ಲಿ ಉದ್ಘಾಟನೆಗೊಂಡಿತು.</p>.<p>ಯದುವೀರ್ ಮಾತನಾಡಿ, ‘ಮೈಸೂರು ನಗರ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಇದಕ್ಕೆ ಪೂರಕವಾಗಿ ಸಂಸ್ಕೃತಿ ಮತ್ತು ಪರಂಪರೆ, ಗುರು ಪರಂಪರೆಯನ್ನು ಅವಧೂತ ದತ್ತಪೀಠ ಉಳಿಸಿಕೊಂಡು ಬಂದಿದೆ. ಅತ್ಯುತ್ತಮ ವಾತಾವರಣ, ಸಂಗೀತದ ವಾತಾವರಣ ಇಲ್ಲಿ ನೆಲಸಿದೆ’ ಎಂದು ಹೇಳಿದರು.</p>.<p>‘ಆಶ್ರಮದಿಂದ ನೀಡಿರುವ ಕಾಣಿಕೆಯನ್ನು ಸರ್ಕಾರಕ್ಕೆ ತಲುಪಿಸುತ್ತೇನೆ’ ಎಂದರು.</p>.<p>ನಿವೃತ್ತ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್, ಶಾಸಕ ಟಿ.ಎಸ್.ಶ್ರೀವತ್ಸ, ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>