<p>ಮೈಸೂರು: ರಂಗಾಯಣವು ಡಿ.8 ರಿಂದ 15ರ ವರೆಗೆ ‘ಬಹುರೂಪಿ ರಾಷ್ಟ್ರೀಯ ರಂಗೋತ್ಸವ’ ಆಯೋಜಿಸಿದ್ದು, ವಿವಿಧ ಭಾಷೆಗಳ ನಾಟಕ ಪ್ರದರ್ಶನ ನಡೆಯಲಿದೆ.</p>.<p>‘ಡಿ.10ರಂದು ಸಂಜೆ 5.30ಕ್ಕೆ ಉತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಭಾರತೀಯ ರಾಷ್ಟ್ರೀಯ ನಾಟಕ ಶಾಲೆ (ಎನ್ಎಸ್ಡಿ) ಅಧ್ಯಕ್ಷ ಪರೇಶ್ ರಾವಲ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಈ ಬಾರಿ ‘ಭಾರತೀಯತೆ’ ಎಂಬ ಪರಿಕಲ್ಪನೆಯಲ್ಲಿ ಉತ್ಸವ ನಡೆಯಲಿದೆ. 7 ರಾಜ್ಯಗಳ 7 ವಿವಿಧ ಭಾಷೆಗಳ ನಾಟಕ, 12 ಕನ್ನಡ ನಾಟಕ ಹಾಗೂ ಒಂದು ತುಳು ನಾಟಕ ಸೇರಿದಂತೆ ಒಟ್ಟು 20 ನಾಟಕಗಳು ಭೂಮಿಗೀತ, ಕಿರುರಂಗಮಂದಿರ ಹಾಗೂ ಕಲಾಮಂದಿರದಲ್ಲಿ ಪ್ರದರ್ಶನಗೊಳ್ಳಲಿವೆ’ ಎಂದರು.</p>.<p>‘ಡಿ.8ರಿಂದ ವನರಂಗದಲ್ಲಿ ಜಾನಪದೋತ್ಸವ, 9ರಿಂದ ರಾಷ್ಟ್ರೀಯ ಚಲನಚಿತ್ರೋತ್ಸವವು ರಂಗಾಯಣದ ಡಾ.ಪುನೀತ್ ರಾಜ್ಕುಮಾರ್ ಚಿತ್ರಮಂದಿರದಲ್ಲಿ ನಡೆಯಲಿದೆ. 10ರಿಂದ ರಾಷ್ಟ್ರೀಯ ವಿಚಾರ ಸಂಕಿರಣ ಆರಂಭವಾಗಲಿದ್ದು, ಕರಕುಶಲ ವಸ್ತುಪ್ರದರ್ಶನವೂ ಇರಲಿದೆ. ಸರ್ಕಾರ ₹ 25 ಲಕ್ಷ ಅನುದಾನ ನೀಡಿದೆ. ನಾಟಕ ಪ್ರದರ್ಶನದ ಟಿಕೆಟ್ ಬೆಲೆ ₹ 100 ಆಗಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ರಂಗಾಯಣವು ಡಿ.8 ರಿಂದ 15ರ ವರೆಗೆ ‘ಬಹುರೂಪಿ ರಾಷ್ಟ್ರೀಯ ರಂಗೋತ್ಸವ’ ಆಯೋಜಿಸಿದ್ದು, ವಿವಿಧ ಭಾಷೆಗಳ ನಾಟಕ ಪ್ರದರ್ಶನ ನಡೆಯಲಿದೆ.</p>.<p>‘ಡಿ.10ರಂದು ಸಂಜೆ 5.30ಕ್ಕೆ ಉತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಭಾರತೀಯ ರಾಷ್ಟ್ರೀಯ ನಾಟಕ ಶಾಲೆ (ಎನ್ಎಸ್ಡಿ) ಅಧ್ಯಕ್ಷ ಪರೇಶ್ ರಾವಲ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಈ ಬಾರಿ ‘ಭಾರತೀಯತೆ’ ಎಂಬ ಪರಿಕಲ್ಪನೆಯಲ್ಲಿ ಉತ್ಸವ ನಡೆಯಲಿದೆ. 7 ರಾಜ್ಯಗಳ 7 ವಿವಿಧ ಭಾಷೆಗಳ ನಾಟಕ, 12 ಕನ್ನಡ ನಾಟಕ ಹಾಗೂ ಒಂದು ತುಳು ನಾಟಕ ಸೇರಿದಂತೆ ಒಟ್ಟು 20 ನಾಟಕಗಳು ಭೂಮಿಗೀತ, ಕಿರುರಂಗಮಂದಿರ ಹಾಗೂ ಕಲಾಮಂದಿರದಲ್ಲಿ ಪ್ರದರ್ಶನಗೊಳ್ಳಲಿವೆ’ ಎಂದರು.</p>.<p>‘ಡಿ.8ರಿಂದ ವನರಂಗದಲ್ಲಿ ಜಾನಪದೋತ್ಸವ, 9ರಿಂದ ರಾಷ್ಟ್ರೀಯ ಚಲನಚಿತ್ರೋತ್ಸವವು ರಂಗಾಯಣದ ಡಾ.ಪುನೀತ್ ರಾಜ್ಕುಮಾರ್ ಚಿತ್ರಮಂದಿರದಲ್ಲಿ ನಡೆಯಲಿದೆ. 10ರಿಂದ ರಾಷ್ಟ್ರೀಯ ವಿಚಾರ ಸಂಕಿರಣ ಆರಂಭವಾಗಲಿದ್ದು, ಕರಕುಶಲ ವಸ್ತುಪ್ರದರ್ಶನವೂ ಇರಲಿದೆ. ಸರ್ಕಾರ ₹ 25 ಲಕ್ಷ ಅನುದಾನ ನೀಡಿದೆ. ನಾಟಕ ಪ್ರದರ್ಶನದ ಟಿಕೆಟ್ ಬೆಲೆ ₹ 100 ಆಗಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>