ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕಾಶ್ನ ಮಿದುಳು ಫೆ.28ರಂದು ನಿಷ್ಕ್ರಿಯಗೊಂಡಿತ್ತು. ದೇಹ ಹಾಗೂ ಅಂಗಾಂಗ ದಾನ ಮಾಡಲು ಆತನ ಕುಟುಂಬದ ಸದಸ್ಯರು ಸಮ್ಮತಿಸಿದ್ದರು. ‘ಸೊಟ್ಟೊ’ ಅಧಿಕಾರಿಗಳ ಸಮ್ಮುಖದಲ್ಲಿ ಎರಡು ಮೂತ್ರಪಿಂಡ, ಒಂದು ಯಕೃತ್, ಹೃದಯ ಕವಾಟಗಳು ಮತ್ತು ಕಣ್ಣಿನ ಕಾರ್ನಿಯಾಗಳನ್ನು ದಾನ ಮಾಡಲಾಗಿದೆ. ಅರ್ಹರಿಗೆ ಕಸಿ ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಆಸ್ಪತ್ರೆಯ ಉಪಾಧ್ಯಕ್ಷ ಎನ್.ಜಿ.ಭಾರತೀಶ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.