<p><strong>ಮೈಸೂರು:</strong> ದಸರಾ ಮಹೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಮೈಸೂರು ಮಹಾನಗರ ಪಾಲಿಕೆಗೆ ಚಾಕೊಲೇಟ್ ನೀಡಿದೆ ಎಂದು ಮೇಯರ್ ತಸ್ನೀಂ ವ್ಯಂಗ್ಯವಾಡಿದರು.</p>.<p>ನಾಡಹಬ್ಬದ ಸಿದ್ಧತೆಗಾಗಿ ಪಾಲಿಕೆಗೆ ₹ 10 ಕೋಟಿ ಅನುದಾನ ನೀಡುವಂತೆ ಸರ್ಕಾರವನ್ನು ಕೇಳಿದ್ದೆವು. ₹ 5 ಕೋಟಿಯನ್ನಾದರೂ ನಮಗೆ ನೀಡಬೇಕಿತ್ತು. ಆದರೆ, ರಾಜ್ಯ ಸರ್ಕಾರ ಮೈಸೂರು ಜಿಲ್ಲಾಡಳಿತಕ್ಕೆ ಒಟ್ಟು ₹ 10 ಕೋಟಿ ನೀಡಿದೆ. ಈ ಸಮಯದಲ್ಲಿ ಜಿಲ್ಲಾಧಿಕಾರಿಯನ್ನೂ ಬದಲಾಯಿಸಿದೆ. ಈಗ ವರ್ಗಾವಣೆ ನಡೆಯಬಾರದಿತ್ತು ಎಂದರು.</p>.<p>ದಸರಾ ಅನುದಾನವನ್ನುಹೇಗೆ ಹಂಚಿಕೆ ಮಾಡಬೇಕೆಂದು ಸರ್ಕಾರ ಯಾವುದೇ ರೂಪುರೇಷೆ ನೀಡಿಲ್ಲ. ನಾಡಹಬ್ಬದಲ್ಲಿ ಪಾಲಿಕೆಯ ಪಾತ್ರವೇನು ಎಂಬುದರ ಬಗ್ಗೆಯೂ ಸಮರ್ಪಕವಾಗಿ ತಿಳಿಸಿಲ್ಲ. ಹೀಗಾಗಿ, ಸರಳ ದಸರಾದಲ್ಲಿ ಶೇ 90ರಷ್ಟು ಪಾಲಿಕೆಯ ಪಾತ್ರ ವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಪಾಲಿಕೆಯಿಂದಲೇ ಪ್ರತಿ ವಾರ್ಡಿಗೆ ₹ 10 ಲಕ್ಷ ನೀಡುವಂತೆ ಆಯುಕ್ತರಿಗೆ ಮನವಿ ಮಾಡಿದ್ದೇನೆ. ಆ ಮೂಲಕ ವಾರ್ಡ್ ಗಳಲ್ಲಿನ ಸಣ್ಣ ಪುಟ್ಟ ಕಾಮಗಾರಿಗಳನ್ನು ಮಾಡುತ್ತೇವೆ’ ಎಂದು ತಿಳಿಸಿದರು.</p>.<p>ಜಂಬೂಸವಾರಿ ವೇಳೆ ಮೇಯರ್ ಆಗಿ ಕುದುರೆ ಏರುವ ವಿಚಾರದ ಕುರಿತು, ‘ಕುದುರೆ ಸವಾರಿ ಬಗ್ಗೆ ಇದುವರೆಗೆ ಯಾವುದೇ ನಿರ್ದೇಶನ ಬಂದಿಲ್ಲ. ದಸರೆಗೆ ಒಂದು ತಿಂಗಳು ಮುಂಚಿತವಾಗಿಯೇ ತರಬೇತಿ ಪಡೆಯುವಂತೆ ಸೂಚನೆ ನೀಡಬೇಕಿತ್ತು. ಏನೂ ನಡೆದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ದಸರಾ ಮಹೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಮೈಸೂರು ಮಹಾನಗರ ಪಾಲಿಕೆಗೆ ಚಾಕೊಲೇಟ್ ನೀಡಿದೆ ಎಂದು ಮೇಯರ್ ತಸ್ನೀಂ ವ್ಯಂಗ್ಯವಾಡಿದರು.</p>.<p>ನಾಡಹಬ್ಬದ ಸಿದ್ಧತೆಗಾಗಿ ಪಾಲಿಕೆಗೆ ₹ 10 ಕೋಟಿ ಅನುದಾನ ನೀಡುವಂತೆ ಸರ್ಕಾರವನ್ನು ಕೇಳಿದ್ದೆವು. ₹ 5 ಕೋಟಿಯನ್ನಾದರೂ ನಮಗೆ ನೀಡಬೇಕಿತ್ತು. ಆದರೆ, ರಾಜ್ಯ ಸರ್ಕಾರ ಮೈಸೂರು ಜಿಲ್ಲಾಡಳಿತಕ್ಕೆ ಒಟ್ಟು ₹ 10 ಕೋಟಿ ನೀಡಿದೆ. ಈ ಸಮಯದಲ್ಲಿ ಜಿಲ್ಲಾಧಿಕಾರಿಯನ್ನೂ ಬದಲಾಯಿಸಿದೆ. ಈಗ ವರ್ಗಾವಣೆ ನಡೆಯಬಾರದಿತ್ತು ಎಂದರು.</p>.<p>ದಸರಾ ಅನುದಾನವನ್ನುಹೇಗೆ ಹಂಚಿಕೆ ಮಾಡಬೇಕೆಂದು ಸರ್ಕಾರ ಯಾವುದೇ ರೂಪುರೇಷೆ ನೀಡಿಲ್ಲ. ನಾಡಹಬ್ಬದಲ್ಲಿ ಪಾಲಿಕೆಯ ಪಾತ್ರವೇನು ಎಂಬುದರ ಬಗ್ಗೆಯೂ ಸಮರ್ಪಕವಾಗಿ ತಿಳಿಸಿಲ್ಲ. ಹೀಗಾಗಿ, ಸರಳ ದಸರಾದಲ್ಲಿ ಶೇ 90ರಷ್ಟು ಪಾಲಿಕೆಯ ಪಾತ್ರ ವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಪಾಲಿಕೆಯಿಂದಲೇ ಪ್ರತಿ ವಾರ್ಡಿಗೆ ₹ 10 ಲಕ್ಷ ನೀಡುವಂತೆ ಆಯುಕ್ತರಿಗೆ ಮನವಿ ಮಾಡಿದ್ದೇನೆ. ಆ ಮೂಲಕ ವಾರ್ಡ್ ಗಳಲ್ಲಿನ ಸಣ್ಣ ಪುಟ್ಟ ಕಾಮಗಾರಿಗಳನ್ನು ಮಾಡುತ್ತೇವೆ’ ಎಂದು ತಿಳಿಸಿದರು.</p>.<p>ಜಂಬೂಸವಾರಿ ವೇಳೆ ಮೇಯರ್ ಆಗಿ ಕುದುರೆ ಏರುವ ವಿಚಾರದ ಕುರಿತು, ‘ಕುದುರೆ ಸವಾರಿ ಬಗ್ಗೆ ಇದುವರೆಗೆ ಯಾವುದೇ ನಿರ್ದೇಶನ ಬಂದಿಲ್ಲ. ದಸರೆಗೆ ಒಂದು ತಿಂಗಳು ಮುಂಚಿತವಾಗಿಯೇ ತರಬೇತಿ ಪಡೆಯುವಂತೆ ಸೂಚನೆ ನೀಡಬೇಕಿತ್ತು. ಏನೂ ನಡೆದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>