<p><strong>ಮೈಸೂರು</strong>: ಇಂಧನ ದರ ಏರಿಕೆ ಖಂಡಿಸಿ ಸೌದೆ ಹೊತ್ತ ಕೆಪಿಸಿಸಿ ಮಹಿಳಾ ಘಟಕದ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಸೌದೆ ಒಲೆಯಲ್ಲಿ ಚಹ ತಯಾರಿಸಿ ಮಾರಾಟ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜತೆಗೆ, ತಲೆ ಮೇಲೆ ಸೌದೆ ಹೊತ್ತು ಘೋಷಣೆಗಳನ್ನು ಕೂಗಿದರು.</p>.<p>ನಿತ್ಯ ಬಳಕೆಯ ವಸ್ತುಗಳ ಬೆಲೆಗಳನ್ನು ನಿರಂತರವಾಗಿ ಏರಿಕೆ ಮಾಡುವ ಮೂಲಕ ಸರ್ಕಾರ ಸಾಮಾನ್ಯ ಜನರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಬೆಲೆ ಏರಿಕೆಯಿಂದ ಬಡವರ ಬದುಕು ಅಸಹನೀಯವಾಗಿದೆ ಎಂದು ಕಿಡಿಕಾರಿದರು.</p>.<p>ಕೆಪಿಸಿಸಿ ಮಹಿಳಾ ಘಟಕದ ನಗರ ಘಟಕದ ಅಧ್ಯಕ್ಷೆ ಪುಷ್ಪಲತಾ ಮಾತನಾಡಿ, ‘ಕೋವಿಡ್ನಿಂದ ಜನರು ಕಷ್ಟಪಡುತ್ತಿರುವಾಗಲೇ ಸರ್ಕಾರ ಬೆಲೆ ಏರಿಕೆ ಮಾಡುವ ಮೂಲಕ ನಿರ್ದಯವಾಗಿ ವರ್ತಿಸಿದೆ. ನಿತ್ಯ ಬಳಕೆಯ ವಸ್ತುಗಳ ಬೆಲೆಗಳನ್ನು ಏರಿಕೆಯಾಗುತ್ತಿರುವುದರಿಂದ ಬಡ ಕುಟುಂಬಗಳ ಜೀವನ ನಿರ್ವಹಣೆ ಕಷ್ಟಕರವಾಗಿದೆ’ ಎಂದು ಹೇಳಿದರು.</p>.<p>ಕೂಡಲೇ ರಾಷ್ಟ್ರಪತಿ ಮತ್ತು ರಾಜ್ಯಪಾಲರು ಮಧ್ಯಪ್ರವೇಶಿಸಿ, ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ ತರಬೇಕು ಎಂದು ಆಗ್ರಹಿಸಿದರು.</p>.<p>ಕೆಪಿಸಿಸಿ ವಕ್ತಾರರಾದ ಮಂಜುಳಾ ಮಾನಸ ಮಾತನಾಡಿ, ‘ಅಡುಗೆ ಅನಿಲದ ದರ ಏರಿಕೆ ಸ್ಥಿತಿ ನೋಡಿದರೆ ಇದು ಕೆಲವೇ ದಿನಗಳಲ್ಲಿ ₹ 1 ಸಾವಿರ ದಾಟುವ ನಿರೀಕ್ಷೆ ಇದೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆಗಳು ಶತಕ ದಾಟಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಗರ ಕಾಂಗ್ರೆಸ್ ಮಹಿಳಾ ಉಪಾಧ್ಯಕ್ಷೆ ಪುಷ್ಪವಲ್ಲಿ, ಪಾಲಿಕೆ ಸದಸ್ಯೆರಾದ ಪುಷ್ಪಲತಾ ಜಗನ್ನಾಥ್, ರಜನಿ ಅಣ್ಣಯ್ಯ, ಬ್ಲಾಕ್ ಅಧ್ಯಕ್ಷರಾದ ಲೀಲಾ ಪಂಪಾವತಿ, ಚಂದ್ರಕಲಾ, ಕಮಲಾ, ದಿವ್ಯಾ, ನಾಗರತ್ನಮ್ಮ, ರಾಧಾಮಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಇಂಧನ ದರ ಏರಿಕೆ ಖಂಡಿಸಿ ಸೌದೆ ಹೊತ್ತ ಕೆಪಿಸಿಸಿ ಮಹಿಳಾ ಘಟಕದ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಸೌದೆ ಒಲೆಯಲ್ಲಿ ಚಹ ತಯಾರಿಸಿ ಮಾರಾಟ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜತೆಗೆ, ತಲೆ ಮೇಲೆ ಸೌದೆ ಹೊತ್ತು ಘೋಷಣೆಗಳನ್ನು ಕೂಗಿದರು.</p>.<p>ನಿತ್ಯ ಬಳಕೆಯ ವಸ್ತುಗಳ ಬೆಲೆಗಳನ್ನು ನಿರಂತರವಾಗಿ ಏರಿಕೆ ಮಾಡುವ ಮೂಲಕ ಸರ್ಕಾರ ಸಾಮಾನ್ಯ ಜನರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಬೆಲೆ ಏರಿಕೆಯಿಂದ ಬಡವರ ಬದುಕು ಅಸಹನೀಯವಾಗಿದೆ ಎಂದು ಕಿಡಿಕಾರಿದರು.</p>.<p>ಕೆಪಿಸಿಸಿ ಮಹಿಳಾ ಘಟಕದ ನಗರ ಘಟಕದ ಅಧ್ಯಕ್ಷೆ ಪುಷ್ಪಲತಾ ಮಾತನಾಡಿ, ‘ಕೋವಿಡ್ನಿಂದ ಜನರು ಕಷ್ಟಪಡುತ್ತಿರುವಾಗಲೇ ಸರ್ಕಾರ ಬೆಲೆ ಏರಿಕೆ ಮಾಡುವ ಮೂಲಕ ನಿರ್ದಯವಾಗಿ ವರ್ತಿಸಿದೆ. ನಿತ್ಯ ಬಳಕೆಯ ವಸ್ತುಗಳ ಬೆಲೆಗಳನ್ನು ಏರಿಕೆಯಾಗುತ್ತಿರುವುದರಿಂದ ಬಡ ಕುಟುಂಬಗಳ ಜೀವನ ನಿರ್ವಹಣೆ ಕಷ್ಟಕರವಾಗಿದೆ’ ಎಂದು ಹೇಳಿದರು.</p>.<p>ಕೂಡಲೇ ರಾಷ್ಟ್ರಪತಿ ಮತ್ತು ರಾಜ್ಯಪಾಲರು ಮಧ್ಯಪ್ರವೇಶಿಸಿ, ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ ತರಬೇಕು ಎಂದು ಆಗ್ರಹಿಸಿದರು.</p>.<p>ಕೆಪಿಸಿಸಿ ವಕ್ತಾರರಾದ ಮಂಜುಳಾ ಮಾನಸ ಮಾತನಾಡಿ, ‘ಅಡುಗೆ ಅನಿಲದ ದರ ಏರಿಕೆ ಸ್ಥಿತಿ ನೋಡಿದರೆ ಇದು ಕೆಲವೇ ದಿನಗಳಲ್ಲಿ ₹ 1 ಸಾವಿರ ದಾಟುವ ನಿರೀಕ್ಷೆ ಇದೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆಗಳು ಶತಕ ದಾಟಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಗರ ಕಾಂಗ್ರೆಸ್ ಮಹಿಳಾ ಉಪಾಧ್ಯಕ್ಷೆ ಪುಷ್ಪವಲ್ಲಿ, ಪಾಲಿಕೆ ಸದಸ್ಯೆರಾದ ಪುಷ್ಪಲತಾ ಜಗನ್ನಾಥ್, ರಜನಿ ಅಣ್ಣಯ್ಯ, ಬ್ಲಾಕ್ ಅಧ್ಯಕ್ಷರಾದ ಲೀಲಾ ಪಂಪಾವತಿ, ಚಂದ್ರಕಲಾ, ಕಮಲಾ, ದಿವ್ಯಾ, ನಾಗರತ್ನಮ್ಮ, ರಾಧಾಮಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>