<p><strong>ಮೈಸೂರು</strong>: ಮೈಸೂರು ಅಭಿವೃದ್ಧಿಗೆ ಪ್ರತಾಪಸಿಂಹ ಕೊಡುಗೆ ಕುರಿತು ಸಂಸದರ ಕಚೇರಿಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಹಂದಿ,ಕತ್ತೆಗಳ ಮೆರವಣಿಗೆ ಮೂಲಕ ತೆರಳಿ ಮಂಗಳವಾರ ವಿಭಿನ್ನವಾಗಿ ಪ್ರತಿಭಟಿಸಲು ಮುಂದಾದರು.</p>.<p>ಈ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್, 'ಮೈಸೂರು ಬೆಂಗಳೂರು ದಶಪಥ ಹೆದ್ದಾರಿ, ಜಿಲ್ಲಾಸ್ಪತ್ರೆ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಸಿದ್ದರಾಮಯ್ಯ ಅವಧಿಯಲ್ಲಿ ಜಾರಿಗೊಳಿಸಲಾಗಿದೆ. ಆದರೆ, ಸಂಸದರು ತಾವೇ ಕೆಲಸ ಮಾಡಿದ್ದೆಂದು ಮಾಧ್ಯಮಗಳ ಮುಂದೆ ಬಿಂಬಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದೆವು. ಆದರೆ, ಕತ್ತೆ, ಹಂದಿಗಳ ಜೊತೆಗೆ ಚರ್ಚೆ ನಡೆಸುವುದಿಲ್ಲ ಎಂದು ಪ್ರತಾಪಸಿಂಹ ತಿಳಿಸಿದ್ದರು. ಈ ಕಾರಣದಿಂದ ಕತ್ತೆ, ಹಂದಿ ಮೂಲಕ ಮೆರವಣಿಗೆಯಲ್ಲಿ ಸಾಗಿ ಅವರ ಕಚೇರಿಯಲ್ಲಿ ಸಂವಾದ ನಡೆಸಲಿದ್ದೇವೆ' ಎಂದು ಅವರು ತಿಳಿಸಿದರು.</p>.<p>ಮೆರವಣಿಗೆ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸಿ.ದಾಸಪ್ಪ ವೃತ್ತಕ್ಕೆ ಬರುತ್ತಿದ್ದಂತೆಯೇ, ಪೊಲೀಸರು ತಡೆದರು. ಈ ವೇಳೆ ಪೊಲೀಸರು, ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>ಅಂತಿಮವಾಗಿ ಲಕ್ಷ್ಮಣ್ ಅವರನ್ನು ಕರೆದೊಯ್ಯುವುದಾಗಿ ತಿಳಿಸಿ ಪೊಲೀಸರು ವಶಕ್ಕೆ ಪಡೆದರು.</p>.<p><strong>ಸಮುದಾಯದ ನಿಂದನೆ: </strong>ಹಂದಿ ವಿಜಯನಗರ ಸಾಮ್ರಾಜ್ಯದ ಲಾಂಛನ. ಕತ್ತೆ ಮಡಿವಾಳ ಸಮುದಾಯದವರ ಜೀವನಾಡಿ. ಈ ಪ್ರಾಣಿಗಳ ವಿರುದ್ಧ ಕೇವಲವಾಗಿ ಮಾತನಾಡಿ, ಸಮುದಾಯಗಳಿಗೆ ಸಂಸದರು ಅವಮಾನ ಮಾಡಿದ್ದಾರೆ. ಸಾಂಕೇತಿಕವಾಗಿ ಕತ್ತೆ, ಹಂದಿಗಳ ಮೂಲಕ ಸಂಸದರ ಕಚೇರಿಗೆ ಮೆರವಣಿಗೆ ನಡೆಸಿದ್ದೇವೆ.ರೌಡಿ ಶೀಟರ್ ಗಳ ಮೂಲಕ ಪ್ರತಾಪ ಸಿಂಹ ಅವರು ಬೆಂಬಲಿಗರ ಹೆಸರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎಂದು ಈ ವೇಳೆ ಲಕ್ಷ್ಮಣ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ. ವಿಜಯಕುಮಾರ್, ನಗರ ಘಟಕದ ಅಧ್ಯಕ್ಷ ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮೈಸೂರು ಅಭಿವೃದ್ಧಿಗೆ ಪ್ರತಾಪಸಿಂಹ ಕೊಡುಗೆ ಕುರಿತು ಸಂಸದರ ಕಚೇರಿಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಹಂದಿ,ಕತ್ತೆಗಳ ಮೆರವಣಿಗೆ ಮೂಲಕ ತೆರಳಿ ಮಂಗಳವಾರ ವಿಭಿನ್ನವಾಗಿ ಪ್ರತಿಭಟಿಸಲು ಮುಂದಾದರು.</p>.<p>ಈ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್, 'ಮೈಸೂರು ಬೆಂಗಳೂರು ದಶಪಥ ಹೆದ್ದಾರಿ, ಜಿಲ್ಲಾಸ್ಪತ್ರೆ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಸಿದ್ದರಾಮಯ್ಯ ಅವಧಿಯಲ್ಲಿ ಜಾರಿಗೊಳಿಸಲಾಗಿದೆ. ಆದರೆ, ಸಂಸದರು ತಾವೇ ಕೆಲಸ ಮಾಡಿದ್ದೆಂದು ಮಾಧ್ಯಮಗಳ ಮುಂದೆ ಬಿಂಬಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದೆವು. ಆದರೆ, ಕತ್ತೆ, ಹಂದಿಗಳ ಜೊತೆಗೆ ಚರ್ಚೆ ನಡೆಸುವುದಿಲ್ಲ ಎಂದು ಪ್ರತಾಪಸಿಂಹ ತಿಳಿಸಿದ್ದರು. ಈ ಕಾರಣದಿಂದ ಕತ್ತೆ, ಹಂದಿ ಮೂಲಕ ಮೆರವಣಿಗೆಯಲ್ಲಿ ಸಾಗಿ ಅವರ ಕಚೇರಿಯಲ್ಲಿ ಸಂವಾದ ನಡೆಸಲಿದ್ದೇವೆ' ಎಂದು ಅವರು ತಿಳಿಸಿದರು.</p>.<p>ಮೆರವಣಿಗೆ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸಿ.ದಾಸಪ್ಪ ವೃತ್ತಕ್ಕೆ ಬರುತ್ತಿದ್ದಂತೆಯೇ, ಪೊಲೀಸರು ತಡೆದರು. ಈ ವೇಳೆ ಪೊಲೀಸರು, ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>ಅಂತಿಮವಾಗಿ ಲಕ್ಷ್ಮಣ್ ಅವರನ್ನು ಕರೆದೊಯ್ಯುವುದಾಗಿ ತಿಳಿಸಿ ಪೊಲೀಸರು ವಶಕ್ಕೆ ಪಡೆದರು.</p>.<p><strong>ಸಮುದಾಯದ ನಿಂದನೆ: </strong>ಹಂದಿ ವಿಜಯನಗರ ಸಾಮ್ರಾಜ್ಯದ ಲಾಂಛನ. ಕತ್ತೆ ಮಡಿವಾಳ ಸಮುದಾಯದವರ ಜೀವನಾಡಿ. ಈ ಪ್ರಾಣಿಗಳ ವಿರುದ್ಧ ಕೇವಲವಾಗಿ ಮಾತನಾಡಿ, ಸಮುದಾಯಗಳಿಗೆ ಸಂಸದರು ಅವಮಾನ ಮಾಡಿದ್ದಾರೆ. ಸಾಂಕೇತಿಕವಾಗಿ ಕತ್ತೆ, ಹಂದಿಗಳ ಮೂಲಕ ಸಂಸದರ ಕಚೇರಿಗೆ ಮೆರವಣಿಗೆ ನಡೆಸಿದ್ದೇವೆ.ರೌಡಿ ಶೀಟರ್ ಗಳ ಮೂಲಕ ಪ್ರತಾಪ ಸಿಂಹ ಅವರು ಬೆಂಬಲಿಗರ ಹೆಸರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎಂದು ಈ ವೇಳೆ ಲಕ್ಷ್ಮಣ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ. ವಿಜಯಕುಮಾರ್, ನಗರ ಘಟಕದ ಅಧ್ಯಕ್ಷ ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>