<p><strong>ಮೈಸೂರು:</strong> ‘ನಗರದಲ್ಲಿ ಮೂಲಸೌಕರ್ಯ ಉಪಕರ (ಮೋಟಾರ್ ವಾಹನ ಸೆಸ್) ವಿಧಿಸುವ ಪ್ರಕ್ರಿಯೆಯನ್ನು ಕೈಬಿಡಲಾಗಿದೆ’ ಎಂದು ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ತಿಳಿಸಿದ್ದಾರೆ.</p><p>ಈ ಉಪಕರ ವಿಧಿಸುವುದಾಗಿ ಪ್ರಕಟಿಸಿದ್ದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ, ಆಕ್ಷೇಪ ಹಾಗೂ ಖಂಡನೆ ವ್ಯಕ್ತವಾಗಿತ್ತು. ಹೀಗಾಗಿ, ಪಾಲಿಕೆಯು ನಿರ್ಧಾರದಿಂದ ಹಿಂದೆ ಸರಿದಿದೆ.</p><p>ನಗರದ ರಸ್ತೆ ಸಂಚಾರ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಕರ್ನಾಟಕ ಮಹಾನಗರಪಾಲಿಕೆಗಳ ಅಧಿನಿಯಮ 1976ರ ಅಡಿ ಪ್ರತಿ ವಾಹನದ ಮೇಲೆ ವಾರ್ಷಿಕ ನಿರ್ದಿಷ್ಟ ಮೊತ್ತದ ಉಪಕರ ವಿಧಿಸಲು ಪಾಲಿಕೆಯ ಸಾಮಾನ್ಯ ಕೌನ್ಸಿಲ್ ಸಭೆಯಲ್ಲಿ ಈ ಹಿಂದೆ ತೀರ್ಮಾನಿಸಲಾಗಿತ್ತು. ಇದರ ಅನ್ವಯ ದ್ವಿಚಕ್ರ ವಾಹನಗಳಿಗೆ ₹100, ತ್ರಿಚಕ್ರ ವಾಹನಗಳಿಗೆ ₹200 ಹಾಗೂ ನಾಲ್ಕುಚಕ್ರದ ವಾಹನಗಳಿಗೆ ₹500 ವಿಧಿಸಲು ನಿರ್ಧರಿಸಲಾಗಿತ್ತು. ಈ ಮೊತ್ತವನ್ನು 2026-27ನೇ ಸಾಲಿನ ಆಸ್ತಿ ತೆರಿಗೆಯೊಂದಿಗೆ ವಸೂಲಿ ಮಾಡಲು ನಿರ್ಧರಿಸಿ, ಮಾರ್ಚ್ 23ರಂದು ಸಾರ್ವಜನಿಕ ಪ್ರಕಟಣೆಯನ್ನೂ ಹೊರಡಿಸಲಾಗಿತ್ತು.</p><p>ಈ ಹೊಸ ತೆರಿಗೆ ಪದ್ಧತಿಯ ಕುರಿತು ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆಸ್ತಿ ತೆರಿಗೆಯೊಂದಿಗೆ ವಾಹನ ತೆರಿಗೆಯನ್ನು ಸೇರಿಸುವುದು ಅವೈಜ್ಞಾನಿಕ ಎಂಬ ದೂರುಗಳು ಕೇಳಿಬಂದಿದ್ದವು.</p><p>ಈ ಕಾರಣದಿಂದಾಗಿ, ಪ್ರಕ್ರಿಯೆಯ ಸಾಧಕ-ಬಾಧಕಗಳನ್ನು ಇನ್ನಷ್ಟು ಪರಿಶೀಲಿಸಿ ಜಾರಿಗೊಳಿಸಬೇಕಾಗಿದೆ. ಅಲ್ಲಿಯವರೆಗೆ ವಸೂಲಾತಿ ಪ್ರಕ್ರಿಕೆಯನ್ನು ಕೈಬಿಡಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಅವರ ಆಕ್ಷೇಪಣೆಗಳನ್ನು ಗೌರವಿಸಿ, ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಗರದಲ್ಲಿ ಮೂಲಸೌಕರ್ಯ ಉಪಕರ (ಮೋಟಾರ್ ವಾಹನ ಸೆಸ್) ವಿಧಿಸುವ ಪ್ರಕ್ರಿಯೆಯನ್ನು ಕೈಬಿಡಲಾಗಿದೆ’ ಎಂದು ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ತಿಳಿಸಿದ್ದಾರೆ.</p><p>ಈ ಉಪಕರ ವಿಧಿಸುವುದಾಗಿ ಪ್ರಕಟಿಸಿದ್ದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ, ಆಕ್ಷೇಪ ಹಾಗೂ ಖಂಡನೆ ವ್ಯಕ್ತವಾಗಿತ್ತು. ಹೀಗಾಗಿ, ಪಾಲಿಕೆಯು ನಿರ್ಧಾರದಿಂದ ಹಿಂದೆ ಸರಿದಿದೆ.</p><p>ನಗರದ ರಸ್ತೆ ಸಂಚಾರ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಕರ್ನಾಟಕ ಮಹಾನಗರಪಾಲಿಕೆಗಳ ಅಧಿನಿಯಮ 1976ರ ಅಡಿ ಪ್ರತಿ ವಾಹನದ ಮೇಲೆ ವಾರ್ಷಿಕ ನಿರ್ದಿಷ್ಟ ಮೊತ್ತದ ಉಪಕರ ವಿಧಿಸಲು ಪಾಲಿಕೆಯ ಸಾಮಾನ್ಯ ಕೌನ್ಸಿಲ್ ಸಭೆಯಲ್ಲಿ ಈ ಹಿಂದೆ ತೀರ್ಮಾನಿಸಲಾಗಿತ್ತು. ಇದರ ಅನ್ವಯ ದ್ವಿಚಕ್ರ ವಾಹನಗಳಿಗೆ ₹100, ತ್ರಿಚಕ್ರ ವಾಹನಗಳಿಗೆ ₹200 ಹಾಗೂ ನಾಲ್ಕುಚಕ್ರದ ವಾಹನಗಳಿಗೆ ₹500 ವಿಧಿಸಲು ನಿರ್ಧರಿಸಲಾಗಿತ್ತು. ಈ ಮೊತ್ತವನ್ನು 2026-27ನೇ ಸಾಲಿನ ಆಸ್ತಿ ತೆರಿಗೆಯೊಂದಿಗೆ ವಸೂಲಿ ಮಾಡಲು ನಿರ್ಧರಿಸಿ, ಮಾರ್ಚ್ 23ರಂದು ಸಾರ್ವಜನಿಕ ಪ್ರಕಟಣೆಯನ್ನೂ ಹೊರಡಿಸಲಾಗಿತ್ತು.</p><p>ಈ ಹೊಸ ತೆರಿಗೆ ಪದ್ಧತಿಯ ಕುರಿತು ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆಸ್ತಿ ತೆರಿಗೆಯೊಂದಿಗೆ ವಾಹನ ತೆರಿಗೆಯನ್ನು ಸೇರಿಸುವುದು ಅವೈಜ್ಞಾನಿಕ ಎಂಬ ದೂರುಗಳು ಕೇಳಿಬಂದಿದ್ದವು.</p><p>ಈ ಕಾರಣದಿಂದಾಗಿ, ಪ್ರಕ್ರಿಯೆಯ ಸಾಧಕ-ಬಾಧಕಗಳನ್ನು ಇನ್ನಷ್ಟು ಪರಿಶೀಲಿಸಿ ಜಾರಿಗೊಳಿಸಬೇಕಾಗಿದೆ. ಅಲ್ಲಿಯವರೆಗೆ ವಸೂಲಾತಿ ಪ್ರಕ್ರಿಕೆಯನ್ನು ಕೈಬಿಡಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಅವರ ಆಕ್ಷೇಪಣೆಗಳನ್ನು ಗೌರವಿಸಿ, ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>