ಲಲಿತಕಲೆ ಮತ್ತು ಕರಕುಶಲ ಉಪಸಮಿತಿಯ ಕಾರ್ಯಾಧ್ಯಕ್ಷರೂ ಆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ಮಾತನಾಡಿ, ‘ಚಿತ್ರಕಲಾ ಶಿಬಿರದಲ್ಲಿ ಮೈಸೂರಿನ ಪಾರಂಪರಿಕ ಕಟ್ಟಡಗಳು, ಪ್ರವಾಸಿ ತಾಣಗಳು ರಚನೆಯಾಗಲಿವೆ.ಸೆ.3ರ ನಂತರ ಇಲ್ಲಿ ರಚನೆಯಾದ ಕಲಾಕೃತಿಗಳ ಮಾರಾಟವೂ ನಡೆಯಲಿದ್ದು, ಕಲಾವಿದರ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಲಿದೆ’ ಎಂದರು.