<p><strong>ಮೈಸೂರು:</strong> ದಸರಾ ಮಹೋತ್ಸವದ ಸಿದ್ಧತೆ ಚುರುಕು ಪಡೆದಿದ್ದು, ಗಜಪಡೆ ಸ್ವಾಗತಿಸಲು ಅರಮನೆ ಆವರಣದಲ್ಲಿ ಭರದ ಸಿದ್ಧತೆ ನಡೆದಿದೆ.</p>.<p>ಆನೆಗಳ ಶೆಡ್ ನಿರ್ಮಿಸಲು ಸ್ವಚ್ಛತಾ ಕಾರ್ಯ ನಡೆದಿದ್ದು, ವಿದ್ಯುತ್ ದೀಪ ಅಳವಡಿಕೆ, ಪೇಂಟಿಂಗ್, ಹೂದೋಟ ನಿರ್ಮಾಣದಲ್ಲಿ ಸಿಬ್ಬಂದಿ ತೊಡಗಿದ್ದಾರೆ.</p>.<p>ಗಜಪಡೆಗೆ ಸ್ವಾಗತ ಕೋರಲು ಅರ ಮನೆ ಆವರಣದ ಜಯ ಮಾರ್ತಾಂಡ ದ್ವಾರದ ಬಳಿ ಉದ್ಯಾನದಲ್ಲಿ ಸ್ಪಾಂಜ್ ಹಾಗೂ ತಂತಿ ಬಳಸಿ ಹೂವುಗಳಿಂದ ಆನೆಗಳ ಪ್ರತಿಕೃತಿ ರಚಿಸಲಾಗುತ್ತಿದೆ. ಇಂಥ ಮೂರು ಪ್ರತಿಕೃತಿಗಳನ್ನು ನುರಿತ ಕಲಾವಿದರುಸಿದ್ಧಪಡಿಸುತ್ತಿದ್ದಾರೆ.</p>.<p>ಈ ನಡುವೆ, ಕುಶಾಲ ತೋಪು ಸಿಡಿಸಲು ಅರಮನೆಯಲ್ಲಿ ಫಿರಂಗಿ ಗಾಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ನಡೆದಿದೆ. ಜಂಬೂಸವಾರಿಯಲ್ಲಿ ಪಾ ಲ್ಗೊಳ್ಳ ಲಿರುವ ಅಭಿಮನ್ಯು ಸೇರಿದಂತೆ ಐದು ಆನೆಗಳು ಗುರುವಾರ ಹುಣಸೂರು ತಾಲ್ಲೂಕು ವೀರನಹೊಸಹಳ್ಳಿ<br />ಯಿಂದ ಹೊರಡಲಿವೆ.</p>.<p>‘ಒಂದು ರಾತ್ರಿ ವಾಸ್ತವ್ಯಕ್ಕೆ ಮೈಸೂರಿನ ಅರಣ್ಯ ಭವನದಲ್ಲಿ ಗಜ ಪಡೆಗೆ ವ್ಯವಸ್ಥೆ ಮಾಡಲಾಗಿದೆ. ಶುಕ್ರವಾರ ಬೆಳಿಗ್ಗೆ ಟ್ರಕ್ನಲ್ಲಿಯೇ ಅರಮನೆ ಆವರಣಕ್ಕೆ ಕರೆದೊಯ್ಯಲಾಗುವುದು. ಕಳೆದ ವರ್ಷದಂತೆ ಅರಣ್ಯ ಭವನದಿಂದ ಅರಮನೆಗೆ ರಸ್ತೆಯಲ್ಲಿ ನಡೆಸಿಕೊಂಡು ಹೋಗುವುದಿಲ್ಲ. ಕೋವಿಡ್ ಕಾರಣ ಈ ಕ್ರಮ ವಹಿಸಲಾಗಿದೆ’ ಎಂದು ಡಿಸಿಎಫ್ (ವನ್ಯಜೀವಿ) ಎಂ.ಜೆ.ಅಲೆಕ್ಸಾಂಡರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಶುಕ್ರವಾರಮಧ್ಯಾಹ್ನ12.18ಕ್ಕೆ ಸಲ್ಲುವ ಧನುರ್ ಲಗ್ನದಲ್ಲಿ ಅರಮನೆ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಗಜಪಡೆ ಸ್ವಾಗತಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ದಸರಾ ಮಹೋತ್ಸವದ ಸಿದ್ಧತೆ ಚುರುಕು ಪಡೆದಿದ್ದು, ಗಜಪಡೆ ಸ್ವಾಗತಿಸಲು ಅರಮನೆ ಆವರಣದಲ್ಲಿ ಭರದ ಸಿದ್ಧತೆ ನಡೆದಿದೆ.</p>.<p>ಆನೆಗಳ ಶೆಡ್ ನಿರ್ಮಿಸಲು ಸ್ವಚ್ಛತಾ ಕಾರ್ಯ ನಡೆದಿದ್ದು, ವಿದ್ಯುತ್ ದೀಪ ಅಳವಡಿಕೆ, ಪೇಂಟಿಂಗ್, ಹೂದೋಟ ನಿರ್ಮಾಣದಲ್ಲಿ ಸಿಬ್ಬಂದಿ ತೊಡಗಿದ್ದಾರೆ.</p>.<p>ಗಜಪಡೆಗೆ ಸ್ವಾಗತ ಕೋರಲು ಅರ ಮನೆ ಆವರಣದ ಜಯ ಮಾರ್ತಾಂಡ ದ್ವಾರದ ಬಳಿ ಉದ್ಯಾನದಲ್ಲಿ ಸ್ಪಾಂಜ್ ಹಾಗೂ ತಂತಿ ಬಳಸಿ ಹೂವುಗಳಿಂದ ಆನೆಗಳ ಪ್ರತಿಕೃತಿ ರಚಿಸಲಾಗುತ್ತಿದೆ. ಇಂಥ ಮೂರು ಪ್ರತಿಕೃತಿಗಳನ್ನು ನುರಿತ ಕಲಾವಿದರುಸಿದ್ಧಪಡಿಸುತ್ತಿದ್ದಾರೆ.</p>.<p>ಈ ನಡುವೆ, ಕುಶಾಲ ತೋಪು ಸಿಡಿಸಲು ಅರಮನೆಯಲ್ಲಿ ಫಿರಂಗಿ ಗಾಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ನಡೆದಿದೆ. ಜಂಬೂಸವಾರಿಯಲ್ಲಿ ಪಾ ಲ್ಗೊಳ್ಳ ಲಿರುವ ಅಭಿಮನ್ಯು ಸೇರಿದಂತೆ ಐದು ಆನೆಗಳು ಗುರುವಾರ ಹುಣಸೂರು ತಾಲ್ಲೂಕು ವೀರನಹೊಸಹಳ್ಳಿ<br />ಯಿಂದ ಹೊರಡಲಿವೆ.</p>.<p>‘ಒಂದು ರಾತ್ರಿ ವಾಸ್ತವ್ಯಕ್ಕೆ ಮೈಸೂರಿನ ಅರಣ್ಯ ಭವನದಲ್ಲಿ ಗಜ ಪಡೆಗೆ ವ್ಯವಸ್ಥೆ ಮಾಡಲಾಗಿದೆ. ಶುಕ್ರವಾರ ಬೆಳಿಗ್ಗೆ ಟ್ರಕ್ನಲ್ಲಿಯೇ ಅರಮನೆ ಆವರಣಕ್ಕೆ ಕರೆದೊಯ್ಯಲಾಗುವುದು. ಕಳೆದ ವರ್ಷದಂತೆ ಅರಣ್ಯ ಭವನದಿಂದ ಅರಮನೆಗೆ ರಸ್ತೆಯಲ್ಲಿ ನಡೆಸಿಕೊಂಡು ಹೋಗುವುದಿಲ್ಲ. ಕೋವಿಡ್ ಕಾರಣ ಈ ಕ್ರಮ ವಹಿಸಲಾಗಿದೆ’ ಎಂದು ಡಿಸಿಎಫ್ (ವನ್ಯಜೀವಿ) ಎಂ.ಜೆ.ಅಲೆಕ್ಸಾಂಡರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಶುಕ್ರವಾರಮಧ್ಯಾಹ್ನ12.18ಕ್ಕೆ ಸಲ್ಲುವ ಧನುರ್ ಲಗ್ನದಲ್ಲಿ ಅರಮನೆ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಗಜಪಡೆ ಸ್ವಾಗತಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>