<p><strong>ಮೈಸೂರು</strong>: ದಸರಾ ಅಂಗವಾಗಿ ಆಯೋಜಿಸಿರುವ ಚಲನಚಿತ್ರೋತ್ಸವಕ್ಕೆ ಸೋಮವಾರ ನೀರಸ ಚಾಲನೆ ದೊರೆಯಿತು.</p>.<p>ಕಲಾಮಂದಿರದಲ್ಲಿ ಚಲನಚಿತ್ರೋತ್ಸವ ಉಪ ಸಮಿತಿಯಿಂದ ನಡೆದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೆರವೇರಿಸಿದರು. ಒಂದು ತಾಸು ತಡವಾಗಿ ಆರಂಭವಾದ ಕಾರ್ಯಕ್ರಮದಲ್ಲಿ, ಕಾಲೇಜುಗಳ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಚಿವರು ಮಾತನಾಡುತ್ತಿದ್ದಾಗಲೇ ಬಹುತೇಕರು, ಸಭಾಂಗಣದಿಂದ ಹೊರ ನಡೆದರು.</p>.<p>ಉತ್ಸವವನ್ನು ನಟ ಶಿವರಾಜ್ ಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದರು. ಕೊನೆ ಕ್ಷಣದಲ್ಲಿ ರದ್ದಾಗಿದ್ದರಿಂದ ಅಭಿಮಾನಿಗಳು ನಿರಾಸೆ ಅನುಭವಿಸಿದರು.</p>.<p>ಅಪ್ಪು ನಮನ:</p>.<p>ಚಲನಚಿತ್ರೋತ್ಸವದ ಮಾಹಿತಿ ಒಳಗೊಂಡ ಕೈಪಿಡಿ ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ‘ಹಲವು ಚಲನಚಿತ್ರಗಳನ್ನು ವೀಕ್ಷಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ಒಂದು ದಿನ ಪುನೀತ್ ರಾಜ್ಕುಮಾರ್ ಅಭಿನಯದ ಚಿತ್ರಗಳನ್ನೇ ಪ್ರದರ್ಶಿಸುವಂತೆ ಸೂಚಿಸಿದ್ದೇನೆ’ ಎಂದರು.</p>.<p>‘ಕೋವಿಡ್ ಹಿನ್ನೆಲೆಯಲ್ಲಿ 2 ವರ್ಷಗಳಿಂದ ಸರಳ ದಸರಾ ಆಚರಣೆ ಮಾಡಲಾಗಿತ್ತು. ಆದರೆ, ಈ ವರ್ಷ ಅದ್ಧೂರಿಯಾಗಿ ನಡೆಸಲಾಗುತ್ತಿದೆ. ಯುವ ದಸರಾದಲ್ಲಿ ‘ಅಪ್ಪು ನಮನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>ವಿಶೇಷ ಅತಿಥಿಯಾಗಿದ್ದ ನಟಿ ಅನು ಪ್ರಭಾಕರ್ ಮಾತನಾಡಿ, ‘2007ರಲ್ಲಿ ಪಾರ್ವತಮ್ಮ ರಾಜಕುಮಾರ್, ಎಂ.ಪಿ.ಶಂಕರ್ ಜೊತೆ ಬಂದು ಚಲನಚಿತ್ರೋತ್ಸವ ಉದ್ಘಾಟಿಸಿದ್ದೆ. ಮೈಸೂರಿಗೆ ಅದರಲ್ಲೂ ದಸರಾ ಸಂದರ್ಭದಲ್ಲಿ ಬರಲು ಬಹಳ ಖುಷಿಯಾಗುತ್ತದೆ’ ಎಂದರು.</p>.<p><strong>ಅಪ್ಪು ಅಮರ:</strong></p>.<p>‘ಅಪ್ಪು ಸದಾ ನಮ್ಮೆಲ್ಲರ ಹೃದಯದಲ್ಲಿ ಇರುತ್ತಾರೆ. ಅವರು ಅಮರ. ಚಲನಚಿತ್ರೋತ್ಸವದಲ್ಲಿ ಒಂದು ದಿನವನ್ನು ಅವರಿಗೆ ಅರ್ಪಿಸಿರುವುದು ಅಭಿನಂದನಾರ್ಹ. ಕನ್ನಡ ಚಲನಚಿತ್ರ ರಂಗಕ್ಕೆ ಜನರು ಪ್ರೋತ್ಸಾಹ ಮುಂದುವರಿಸಬೇಕು’ ಎಂದು ಹೇಳಿದರು.</p>.<p>‘ಇದೇ ಮೊದಲ ಬಾರಿಗೆ ಈ ಚಲನಚಿತ್ರೋತ್ಸವ ಉದ್ಘಾಟನೆಯಲ್ಲಿ ಭಾಗವಹಿಸಿದ್ದೇನೆ. ಮೈಸೂರಿಗೆ ಬರುವುದಕ್ಕೆ ಖುಷಿಯಾಗುತ್ತದೆ’ ಎಂದು ನಟಿ ಕಾವ್ಯಾ ಶೆಟ್ಟಿ ತಿಳಿಸಿದರು.</p>.<p>ನಟಿ ಅಮೃತಾ ಅಯ್ಯಂಗಾರ್ ಮಾತನಾಡಿ, ‘4–5 ವರ್ಷಗಳ ಹಿಂದೆ ಪ್ರೇಕ್ಷಕರ ಸಾಲಿನಲ್ಲಿ ಕುಳಿತು ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದೆ. ಈಗ, ಅತಿಥಿಯಾಗಿ ಪಾಲ್ಗೊಂಡಿರುವುದಕ್ಕೆ ಹೆಮ್ಮೆ ಇದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಸಕ ಎಲ್.ನಾಗೇಂದ್ರ ಮಾತನಾಡಿ, ‘ನಟ ಯಶ್ ಕಾರಣದಿಂದ ಕನ್ನಡ ಚಿತ್ರವನ್ನು ಇಡೀ ವಿಶ್ವವೇ ನೋಡುವಂತಾಯಿತು. ಬಾಲನಟನಾಗಿ ವೃತ್ತಿ ಆರಂಭಿಸಿ ಎತ್ತರಕ್ಕೆ ಬೆಳೆದ ಅಪ್ಪುಗೆ ದಸರೆಯಲ್ಲಿ ವಿಶೇಷ ಗೌರವವನ್ನು ಸಲ್ಲಿಸುತ್ತಿದ್ದೇವೆ’ ಎಂದರು.</p>.<p>ಮೈಲ್ಯಾಕ್ ಅಧ್ಯಕ್ಷ ರಘು ಕೌಟಿಲ್ಯ ‘ಅಪ್ಪು’ ಕುರಿತು ಎರಡು ಹನಿಗವನ ವಾಚಿಸಿದರು.</p>.<p>ಚಲನಚಿತ್ರ ನಿರ್ದೇಶಕ ಪ್ರವೀಣ್ ಕೃಪಾಕರ್ ಅವರನ್ನು ಸನ್ಮಾನಿಸಲಾಯಿತು.</p>.<p>ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ರೂಪಾ ಯೋಗೇಶ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಮಂಜುನಾಥಸ್ವಾಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಇದ್ದರು.</p>.<p>ಇದಕ್ಕೂ ಮುನ್ನ ಸುಮಂತ್ ವಶಿಷ್ಠ, ಅಮೂಲ್ಯಾ ಹಾಗೂ ತಂಡದವರು ಚಲನಚಿತ್ರ ಗೀತೆಗಳನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು. ಅಪ್ಪು ಗೀತೆಗಳಿಗೆ ಮೊಬೈಲ್ ಫೋನ್ ಟಾರ್ಚ್ ಲೈಟ್ ಆನ್ ಮಾಡಿ ನಮನ ಸಲ್ಲಿಸಿದರು.</p>.<p>ಸೆ.27ರಿಂದ ಡಿಆರ್ಸಿ ಮತ್ತು ಐನಾಕ್ಸ್ನ 3 ಪರದೆಗಳಲ್ಲಿ ಕನ್ನಡ, ಭಾರತೀಯ ಹಾಗೂ ವಿಶ್ವಚಿತ್ರಗಳು ಪ್ರದರ್ಶನಗೊಳ್ಳಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ದಸರಾ ಅಂಗವಾಗಿ ಆಯೋಜಿಸಿರುವ ಚಲನಚಿತ್ರೋತ್ಸವಕ್ಕೆ ಸೋಮವಾರ ನೀರಸ ಚಾಲನೆ ದೊರೆಯಿತು.</p>.<p>ಕಲಾಮಂದಿರದಲ್ಲಿ ಚಲನಚಿತ್ರೋತ್ಸವ ಉಪ ಸಮಿತಿಯಿಂದ ನಡೆದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೆರವೇರಿಸಿದರು. ಒಂದು ತಾಸು ತಡವಾಗಿ ಆರಂಭವಾದ ಕಾರ್ಯಕ್ರಮದಲ್ಲಿ, ಕಾಲೇಜುಗಳ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಚಿವರು ಮಾತನಾಡುತ್ತಿದ್ದಾಗಲೇ ಬಹುತೇಕರು, ಸಭಾಂಗಣದಿಂದ ಹೊರ ನಡೆದರು.</p>.<p>ಉತ್ಸವವನ್ನು ನಟ ಶಿವರಾಜ್ ಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದರು. ಕೊನೆ ಕ್ಷಣದಲ್ಲಿ ರದ್ದಾಗಿದ್ದರಿಂದ ಅಭಿಮಾನಿಗಳು ನಿರಾಸೆ ಅನುಭವಿಸಿದರು.</p>.<p>ಅಪ್ಪು ನಮನ:</p>.<p>ಚಲನಚಿತ್ರೋತ್ಸವದ ಮಾಹಿತಿ ಒಳಗೊಂಡ ಕೈಪಿಡಿ ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ‘ಹಲವು ಚಲನಚಿತ್ರಗಳನ್ನು ವೀಕ್ಷಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ಒಂದು ದಿನ ಪುನೀತ್ ರಾಜ್ಕುಮಾರ್ ಅಭಿನಯದ ಚಿತ್ರಗಳನ್ನೇ ಪ್ರದರ್ಶಿಸುವಂತೆ ಸೂಚಿಸಿದ್ದೇನೆ’ ಎಂದರು.</p>.<p>‘ಕೋವಿಡ್ ಹಿನ್ನೆಲೆಯಲ್ಲಿ 2 ವರ್ಷಗಳಿಂದ ಸರಳ ದಸರಾ ಆಚರಣೆ ಮಾಡಲಾಗಿತ್ತು. ಆದರೆ, ಈ ವರ್ಷ ಅದ್ಧೂರಿಯಾಗಿ ನಡೆಸಲಾಗುತ್ತಿದೆ. ಯುವ ದಸರಾದಲ್ಲಿ ‘ಅಪ್ಪು ನಮನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>ವಿಶೇಷ ಅತಿಥಿಯಾಗಿದ್ದ ನಟಿ ಅನು ಪ್ರಭಾಕರ್ ಮಾತನಾಡಿ, ‘2007ರಲ್ಲಿ ಪಾರ್ವತಮ್ಮ ರಾಜಕುಮಾರ್, ಎಂ.ಪಿ.ಶಂಕರ್ ಜೊತೆ ಬಂದು ಚಲನಚಿತ್ರೋತ್ಸವ ಉದ್ಘಾಟಿಸಿದ್ದೆ. ಮೈಸೂರಿಗೆ ಅದರಲ್ಲೂ ದಸರಾ ಸಂದರ್ಭದಲ್ಲಿ ಬರಲು ಬಹಳ ಖುಷಿಯಾಗುತ್ತದೆ’ ಎಂದರು.</p>.<p><strong>ಅಪ್ಪು ಅಮರ:</strong></p>.<p>‘ಅಪ್ಪು ಸದಾ ನಮ್ಮೆಲ್ಲರ ಹೃದಯದಲ್ಲಿ ಇರುತ್ತಾರೆ. ಅವರು ಅಮರ. ಚಲನಚಿತ್ರೋತ್ಸವದಲ್ಲಿ ಒಂದು ದಿನವನ್ನು ಅವರಿಗೆ ಅರ್ಪಿಸಿರುವುದು ಅಭಿನಂದನಾರ್ಹ. ಕನ್ನಡ ಚಲನಚಿತ್ರ ರಂಗಕ್ಕೆ ಜನರು ಪ್ರೋತ್ಸಾಹ ಮುಂದುವರಿಸಬೇಕು’ ಎಂದು ಹೇಳಿದರು.</p>.<p>‘ಇದೇ ಮೊದಲ ಬಾರಿಗೆ ಈ ಚಲನಚಿತ್ರೋತ್ಸವ ಉದ್ಘಾಟನೆಯಲ್ಲಿ ಭಾಗವಹಿಸಿದ್ದೇನೆ. ಮೈಸೂರಿಗೆ ಬರುವುದಕ್ಕೆ ಖುಷಿಯಾಗುತ್ತದೆ’ ಎಂದು ನಟಿ ಕಾವ್ಯಾ ಶೆಟ್ಟಿ ತಿಳಿಸಿದರು.</p>.<p>ನಟಿ ಅಮೃತಾ ಅಯ್ಯಂಗಾರ್ ಮಾತನಾಡಿ, ‘4–5 ವರ್ಷಗಳ ಹಿಂದೆ ಪ್ರೇಕ್ಷಕರ ಸಾಲಿನಲ್ಲಿ ಕುಳಿತು ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದೆ. ಈಗ, ಅತಿಥಿಯಾಗಿ ಪಾಲ್ಗೊಂಡಿರುವುದಕ್ಕೆ ಹೆಮ್ಮೆ ಇದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಸಕ ಎಲ್.ನಾಗೇಂದ್ರ ಮಾತನಾಡಿ, ‘ನಟ ಯಶ್ ಕಾರಣದಿಂದ ಕನ್ನಡ ಚಿತ್ರವನ್ನು ಇಡೀ ವಿಶ್ವವೇ ನೋಡುವಂತಾಯಿತು. ಬಾಲನಟನಾಗಿ ವೃತ್ತಿ ಆರಂಭಿಸಿ ಎತ್ತರಕ್ಕೆ ಬೆಳೆದ ಅಪ್ಪುಗೆ ದಸರೆಯಲ್ಲಿ ವಿಶೇಷ ಗೌರವವನ್ನು ಸಲ್ಲಿಸುತ್ತಿದ್ದೇವೆ’ ಎಂದರು.</p>.<p>ಮೈಲ್ಯಾಕ್ ಅಧ್ಯಕ್ಷ ರಘು ಕೌಟಿಲ್ಯ ‘ಅಪ್ಪು’ ಕುರಿತು ಎರಡು ಹನಿಗವನ ವಾಚಿಸಿದರು.</p>.<p>ಚಲನಚಿತ್ರ ನಿರ್ದೇಶಕ ಪ್ರವೀಣ್ ಕೃಪಾಕರ್ ಅವರನ್ನು ಸನ್ಮಾನಿಸಲಾಯಿತು.</p>.<p>ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ರೂಪಾ ಯೋಗೇಶ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಮಂಜುನಾಥಸ್ವಾಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಇದ್ದರು.</p>.<p>ಇದಕ್ಕೂ ಮುನ್ನ ಸುಮಂತ್ ವಶಿಷ್ಠ, ಅಮೂಲ್ಯಾ ಹಾಗೂ ತಂಡದವರು ಚಲನಚಿತ್ರ ಗೀತೆಗಳನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು. ಅಪ್ಪು ಗೀತೆಗಳಿಗೆ ಮೊಬೈಲ್ ಫೋನ್ ಟಾರ್ಚ್ ಲೈಟ್ ಆನ್ ಮಾಡಿ ನಮನ ಸಲ್ಲಿಸಿದರು.</p>.<p>ಸೆ.27ರಿಂದ ಡಿಆರ್ಸಿ ಮತ್ತು ಐನಾಕ್ಸ್ನ 3 ಪರದೆಗಳಲ್ಲಿ ಕನ್ನಡ, ಭಾರತೀಯ ಹಾಗೂ ವಿಶ್ವಚಿತ್ರಗಳು ಪ್ರದರ್ಶನಗೊಳ್ಳಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>