<p><strong>ಮೈಸೂರು:</strong> ಜಿಲ್ಲೆಯ ವ್ಯಾಪ್ತಿಯಲ್ಲಿ ಪ್ರವಾಸಿ ತಾಣಗಳು, ರೆಸಾರ್ಟ್ಗಳು, ಕನ್ವೆನ್ಷನ್ಹಾಲ್, ಪಾರ್ಟಿ, ರಿಕ್ರಿಯೇಷನ್ ಕ್ಲಬ್ ಹಾಗೂ ಚಿತ್ರಮಂದಿರ ಪ್ರವೇಶಕ್ಕೆ ಕೋವಿಡ್–19 ನೆಗೆಟಿವ್ ವರದಿ ತರುವುದನ್ನು ಕಡ್ಡಾಯ ಮಾಡಿ ಮೈಸೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.</p>.<p>‘ಏ.10ರಿಂದ ಏ.20ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಅದಕ್ಕಾಗಿ 300 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗುತ್ತಿದೆ. ಈ ಸ್ಥಳಗಳಿಗೆ ಭೇಟಿ ನೀಡುವ 72 ಗಂಟೆಯೊಳಗೆ ಕೋವಿಡ್ ನೆಗೆಟಿವ್ ವರದಿ ಪಡೆದಿರಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಗುರುವಾರ ತಿಳಿಸಿದರು.</p>.<p>‘ಈ ನಿಯಮ ಉಲ್ಲಂಘನೆಯಾದರೆ ಈ ಸ್ಥಳಗಳ ಅಧಿಕಾರಿಗಳು ಅಥವಾ ಮಾಲೀಕರೇ ಜವಾಬ್ದಾರಿ. ಅಂಥ ಸ್ಥಳಗಳನ್ನು ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಕೊನೆಗೊಳ್ಳುವವರೆಗೆ ಮುಚ್ಚಲಾಗುವುದು. ವಿಪತ್ತು ನಿರ್ವಹಣೆ ಕಾಯ್ದೆ, ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಅಲ್ಲದೇ, ಬೆಂಗಳೂರಿನಿಂದ ಮೈಸೂರಿಗೆ ಬರುವವರು ಕೋವಿಡ್–19 ನೆಗೆಟಿವ್ ವರದಿ ಹೊಂದಿರುವುದು ಸೂಕ್ತವಾಗಿರುತ್ತದೆ ಎಂದು ಸಲಹೆ ನೀಡಿದ್ದಾರೆ.</p>.<p><a href="https://www.prajavani.net/video/india-news/pm-modi-takes-2nd-jab-of-covid-19-vaccine-at-aiims-820489.html" itemprop="url">Video: ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದ ಪ್ರಧಾನಿ ನರೇಂದ್ರ ಮೋದಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಿಲ್ಲೆಯ ವ್ಯಾಪ್ತಿಯಲ್ಲಿ ಪ್ರವಾಸಿ ತಾಣಗಳು, ರೆಸಾರ್ಟ್ಗಳು, ಕನ್ವೆನ್ಷನ್ಹಾಲ್, ಪಾರ್ಟಿ, ರಿಕ್ರಿಯೇಷನ್ ಕ್ಲಬ್ ಹಾಗೂ ಚಿತ್ರಮಂದಿರ ಪ್ರವೇಶಕ್ಕೆ ಕೋವಿಡ್–19 ನೆಗೆಟಿವ್ ವರದಿ ತರುವುದನ್ನು ಕಡ್ಡಾಯ ಮಾಡಿ ಮೈಸೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.</p>.<p>‘ಏ.10ರಿಂದ ಏ.20ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಅದಕ್ಕಾಗಿ 300 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗುತ್ತಿದೆ. ಈ ಸ್ಥಳಗಳಿಗೆ ಭೇಟಿ ನೀಡುವ 72 ಗಂಟೆಯೊಳಗೆ ಕೋವಿಡ್ ನೆಗೆಟಿವ್ ವರದಿ ಪಡೆದಿರಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಗುರುವಾರ ತಿಳಿಸಿದರು.</p>.<p>‘ಈ ನಿಯಮ ಉಲ್ಲಂಘನೆಯಾದರೆ ಈ ಸ್ಥಳಗಳ ಅಧಿಕಾರಿಗಳು ಅಥವಾ ಮಾಲೀಕರೇ ಜವಾಬ್ದಾರಿ. ಅಂಥ ಸ್ಥಳಗಳನ್ನು ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಕೊನೆಗೊಳ್ಳುವವರೆಗೆ ಮುಚ್ಚಲಾಗುವುದು. ವಿಪತ್ತು ನಿರ್ವಹಣೆ ಕಾಯ್ದೆ, ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಅಲ್ಲದೇ, ಬೆಂಗಳೂರಿನಿಂದ ಮೈಸೂರಿಗೆ ಬರುವವರು ಕೋವಿಡ್–19 ನೆಗೆಟಿವ್ ವರದಿ ಹೊಂದಿರುವುದು ಸೂಕ್ತವಾಗಿರುತ್ತದೆ ಎಂದು ಸಲಹೆ ನೀಡಿದ್ದಾರೆ.</p>.<p><a href="https://www.prajavani.net/video/india-news/pm-modi-takes-2nd-jab-of-covid-19-vaccine-at-aiims-820489.html" itemprop="url">Video: ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದ ಪ್ರಧಾನಿ ನರೇಂದ್ರ ಮೋದಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>