<p><strong>ಮೈಸೂರು:</strong> ‘ಹೇಮರೆಡ್ಡಿ ಮಲ್ಲಮ್ಮ ಅವರ ಆದರ್ಶಗಳು ನಮಗೆ ದಾರಿದೀಪವಾಗಿವೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಹೇಳಿದರು.</p>.<p>ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶನಿವಾರ ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರಲ್ಲಿ ಆಯೋಜಿಸಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಲ್ಲಮ್ಮ ಅವರ ವ್ಯಕ್ತಿತ್ವ ಎಂದಿಗೂ ಭಾರತೀಯ ಮಹಿಳೆಯರಿಗೆ ಆದರ್ಶವಾಗಿ ನಿಲ್ಲುತ್ತದೆ. ನಡತೆಯ ಮೂಲಕ ಕುಟುಂಬದ ಸಂಪೂರ್ಣ ಚಿತ್ರಣವನ್ನೇ ಬದಲಾಯಿಸಿದವರು. ಕನ್ನಡದಲ್ಲಿ ಸರ್ವಜ್ಞ ಹೇಗೋ ಹಾಗೆಯೇ ತೆಲುಗಿನಲ್ಲಿ ವೇಮನನನ್ನು ಗುರುತಿಸಲಾಗುತ್ತದೆ. ಅಂತಹ ಒಬ್ಬ ಮಹಾನ್ ವ್ಯಕ್ತಿಯನ್ನೇ ಸೃಷ್ಟಿ ಮಾಡಿದವರು ಮಲ್ಲಮ್ಮನವರು’ ಎಂದು ಸ್ಮರಿಸಿದರು.</p>.<p>‘ಇಡೀ ಮಾನವ ಸಮುದಾಯಕ್ಕೆ ಆದರ್ಶ ಪ್ರಿಯವಾದಂತಹ ಜೀವನ ಅವರು ಕಟ್ಟಿಕೊಟ್ಟಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಹುಣಸೂರು ತಾಲ್ಲೂಕಿನ ಗಾವಡೆಗೆರೆಯ ಗುರುಲಿಂಗ ಜಂಗಮ ದೇವರ ಮಠದ ನಟರಾಜ ಸ್ವಾಮೀಜಿ, ‘ಜೀವನದಲ್ಲಿ ಹೇಳಿಕೊಳ್ಳಲೂ ಆಗದಷ್ಟು ಕಷ್ಟಗಳನ್ನು ಅನುಭವಿಸಿದರೂ ಅವುಗಳನ್ನು ಸಂತೋಷದಿಂದ ಸ್ವೀಕರಿಸಿ ಸಮಾಜಕ್ಕೆ ಮಾದರಿಯಾಗಿ ಜೀವನ ನಡೆಸಿದರು ಮಲ್ಲಮ್ಮ’ ಎಂದರು.</p>.<p>ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ದೇವರಾಜು ಪಿ.ಚಿಕ್ಕಹಳ್ಳಿ (ದೇಚಿ) ಮಾತನಾಡಿ, ‘ಬಸವಣ್ಣನವರ ತತ್ವಗಳನ್ನು ಮೈಗೂಡಿಸಿಕೊಂಡು ಆ ಪರಂಪರೆಯಲ್ಲಿ ನಡೆದು ಬಂದವರು ಮಲ್ಲಮ್ಮ. ಅವರು ಮೊದಲು ಸಂಸಾರವನ್ನು ತಿದ್ದಿ ಇಡೀ ಸಮಾಜವನ್ನು ತಿದ್ದುವ ಕೆಲಸ ಮಾಡಿದರು. ಪವಾಡ ಮಲ್ಲಮ್ಮ, ಬೆಂಕಿ ಮಲಮ್ಮ ಎಂಬಿತ್ಯಾದಿ ಹೆಸರಿನಿಂದ ಅವರನ್ನು ಕರೆಯಲಾಗುತ್ತದೆ’ ಎಂದು ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಬಳಗದ ಉಪಾಧ್ಯಕ್ಷ ಶಿವಲಿಂಗ ಸ್ವಾಮಿ, ಮಹಾಂತೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಹೇಮರೆಡ್ಡಿ ಮಲ್ಲಮ್ಮ ಅವರ ಆದರ್ಶಗಳು ನಮಗೆ ದಾರಿದೀಪವಾಗಿವೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಹೇಳಿದರು.</p>.<p>ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶನಿವಾರ ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರಲ್ಲಿ ಆಯೋಜಿಸಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಲ್ಲಮ್ಮ ಅವರ ವ್ಯಕ್ತಿತ್ವ ಎಂದಿಗೂ ಭಾರತೀಯ ಮಹಿಳೆಯರಿಗೆ ಆದರ್ಶವಾಗಿ ನಿಲ್ಲುತ್ತದೆ. ನಡತೆಯ ಮೂಲಕ ಕುಟುಂಬದ ಸಂಪೂರ್ಣ ಚಿತ್ರಣವನ್ನೇ ಬದಲಾಯಿಸಿದವರು. ಕನ್ನಡದಲ್ಲಿ ಸರ್ವಜ್ಞ ಹೇಗೋ ಹಾಗೆಯೇ ತೆಲುಗಿನಲ್ಲಿ ವೇಮನನನ್ನು ಗುರುತಿಸಲಾಗುತ್ತದೆ. ಅಂತಹ ಒಬ್ಬ ಮಹಾನ್ ವ್ಯಕ್ತಿಯನ್ನೇ ಸೃಷ್ಟಿ ಮಾಡಿದವರು ಮಲ್ಲಮ್ಮನವರು’ ಎಂದು ಸ್ಮರಿಸಿದರು.</p>.<p>‘ಇಡೀ ಮಾನವ ಸಮುದಾಯಕ್ಕೆ ಆದರ್ಶ ಪ್ರಿಯವಾದಂತಹ ಜೀವನ ಅವರು ಕಟ್ಟಿಕೊಟ್ಟಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಹುಣಸೂರು ತಾಲ್ಲೂಕಿನ ಗಾವಡೆಗೆರೆಯ ಗುರುಲಿಂಗ ಜಂಗಮ ದೇವರ ಮಠದ ನಟರಾಜ ಸ್ವಾಮೀಜಿ, ‘ಜೀವನದಲ್ಲಿ ಹೇಳಿಕೊಳ್ಳಲೂ ಆಗದಷ್ಟು ಕಷ್ಟಗಳನ್ನು ಅನುಭವಿಸಿದರೂ ಅವುಗಳನ್ನು ಸಂತೋಷದಿಂದ ಸ್ವೀಕರಿಸಿ ಸಮಾಜಕ್ಕೆ ಮಾದರಿಯಾಗಿ ಜೀವನ ನಡೆಸಿದರು ಮಲ್ಲಮ್ಮ’ ಎಂದರು.</p>.<p>ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ದೇವರಾಜು ಪಿ.ಚಿಕ್ಕಹಳ್ಳಿ (ದೇಚಿ) ಮಾತನಾಡಿ, ‘ಬಸವಣ್ಣನವರ ತತ್ವಗಳನ್ನು ಮೈಗೂಡಿಸಿಕೊಂಡು ಆ ಪರಂಪರೆಯಲ್ಲಿ ನಡೆದು ಬಂದವರು ಮಲ್ಲಮ್ಮ. ಅವರು ಮೊದಲು ಸಂಸಾರವನ್ನು ತಿದ್ದಿ ಇಡೀ ಸಮಾಜವನ್ನು ತಿದ್ದುವ ಕೆಲಸ ಮಾಡಿದರು. ಪವಾಡ ಮಲ್ಲಮ್ಮ, ಬೆಂಕಿ ಮಲಮ್ಮ ಎಂಬಿತ್ಯಾದಿ ಹೆಸರಿನಿಂದ ಅವರನ್ನು ಕರೆಯಲಾಗುತ್ತದೆ’ ಎಂದು ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಬಳಗದ ಉಪಾಧ್ಯಕ್ಷ ಶಿವಲಿಂಗ ಸ್ವಾಮಿ, ಮಹಾಂತೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>