<p><strong>ಮೈಸೂರು</strong>: ‘ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಿಗೆ ಮಾಡಿರುವ ವಿದ್ಯುತ್ ದೀಪಾಲಂಕಾರವನ್ನು ಅ.12ರವರೆಗೂ ಮುಂದುವರಿಸಲು ನಿರ್ಧರಿಸಲಾಗಿದೆ’ ಎಂದು ಸೆಸ್ಕ್ ನಿರ್ದೇಶಕ ಜಯವಿಭವಸ್ವಾಮಿ ಹಾಗೂ ದಸರಾ ವಿದ್ಯುತ್ ದೀಪಾಲಂಕಾರ ಉಪ ಸಮಿತಿ ಅಧ್ಯಕ್ಷ ಟಿ.ರಮೇಶ್ ತಿಳಿಸಿದ್ದಾರೆ.</p>.<p>‘ಸಂಜೆ 6.30ರಿಂದ ರಾತ್ರಿ 10.30ರವರೆಗೆ ಮಾತ್ರ ಇರಲಿದೆ. ದೀಪಾಲಂಕಾರ ಮುಂದುವರಿಕೆಯಿಂದ ನಗರವು ಝಗಮಗಿಸಿವುದರೊಂದಿಗೆ ವ್ಯಾಪಾರ–ವಹಿವಾಟು ಕೂಡ ವೃದ್ಧಿಗೊಳ್ಳಲಿದೆ’ ಎಂದು ಹೇಳಿದ್ದಾರೆ.</p>.<p>ದಸರಾ ನಿಮಿತ್ತ ಮಾಡಿರುವ ದೀಪಾಲಂಕಾರವನ್ನು ಲಕ್ಷಾಂತರ ಮಂದಿ ಕಣ್ತುಂಬಿಕೊಂಡಿದ್ದಾರೆ. ಆದಾಗ್ಯೂ ಮುಂದುವರಿಸುವಂತೆ ಬೇಡಿಕೆ ಬಂದಿರುವುದರಿಂದ ಸೆಸ್ಕ್ ಸ್ಪಂದಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನಿರ್ದೇಶನದಂತೆ ಕ್ರಮ ವಹಿಸಲಾಗಿದೆ.</p>.<p>‘ಈ ವರ್ಷ ವಿಶೇಷ ವಿನ್ಯಾಸದೊಂದಿಗೆ ಮಾಡಿರುವ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯ ಬಗ್ಗೆ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಇಂಧನ ಸಚಿವರು ಸೇರಿದಂತೆ ಎಲ್ಲ ಸಚಿವರು, ಶಾಸಕರು ಮೊದಲಾದ ಜನಪ್ರತಿನಿಧಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರರಿಗೂ ಇಷ್ಟವಾಗಿದೆ. ಇದಕ್ಕಾಗಿ ಶ್ರಮಿಸಿದವರೆಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>‘ಸೆಸ್ಕ್ ಸಿಬ್ಬಂದಿ ದಿನವಿಡೀ ಕಾರ್ಯನಿರ್ವಹಿಸಿ ದೀಪಾಲಂಕಾರದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಂಡಿದ್ದಾರೆ. ವಿದ್ಯುತ್ ದೀಪಾಲಂಕಾರ ಮುಂದುವರಿಕೆಯಿಂದ ನಿಗಮಕ್ಕೆ ಹೆಚ್ಚುವರಿ ಹೊರೆಯಾಗುತ್ತದೆ. ಆದರೂ, ಎಲ್ಲರ ಒತ್ತಾಸೆಯ ಮೇರೆಗೆ ನಗರದ ಹೃದಯಭಾಗ ಹಾಗೂ ಮುಖ್ಯ ಸ್ಥಳಗಳಲ್ಲಿ 2 ದಿನಗಳವರೆಗೆ ಮುಂದುವರಿಸಲಾಗುವುದು’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಿಗೆ ಮಾಡಿರುವ ವಿದ್ಯುತ್ ದೀಪಾಲಂಕಾರವನ್ನು ಅ.12ರವರೆಗೂ ಮುಂದುವರಿಸಲು ನಿರ್ಧರಿಸಲಾಗಿದೆ’ ಎಂದು ಸೆಸ್ಕ್ ನಿರ್ದೇಶಕ ಜಯವಿಭವಸ್ವಾಮಿ ಹಾಗೂ ದಸರಾ ವಿದ್ಯುತ್ ದೀಪಾಲಂಕಾರ ಉಪ ಸಮಿತಿ ಅಧ್ಯಕ್ಷ ಟಿ.ರಮೇಶ್ ತಿಳಿಸಿದ್ದಾರೆ.</p>.<p>‘ಸಂಜೆ 6.30ರಿಂದ ರಾತ್ರಿ 10.30ರವರೆಗೆ ಮಾತ್ರ ಇರಲಿದೆ. ದೀಪಾಲಂಕಾರ ಮುಂದುವರಿಕೆಯಿಂದ ನಗರವು ಝಗಮಗಿಸಿವುದರೊಂದಿಗೆ ವ್ಯಾಪಾರ–ವಹಿವಾಟು ಕೂಡ ವೃದ್ಧಿಗೊಳ್ಳಲಿದೆ’ ಎಂದು ಹೇಳಿದ್ದಾರೆ.</p>.<p>ದಸರಾ ನಿಮಿತ್ತ ಮಾಡಿರುವ ದೀಪಾಲಂಕಾರವನ್ನು ಲಕ್ಷಾಂತರ ಮಂದಿ ಕಣ್ತುಂಬಿಕೊಂಡಿದ್ದಾರೆ. ಆದಾಗ್ಯೂ ಮುಂದುವರಿಸುವಂತೆ ಬೇಡಿಕೆ ಬಂದಿರುವುದರಿಂದ ಸೆಸ್ಕ್ ಸ್ಪಂದಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನಿರ್ದೇಶನದಂತೆ ಕ್ರಮ ವಹಿಸಲಾಗಿದೆ.</p>.<p>‘ಈ ವರ್ಷ ವಿಶೇಷ ವಿನ್ಯಾಸದೊಂದಿಗೆ ಮಾಡಿರುವ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯ ಬಗ್ಗೆ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಇಂಧನ ಸಚಿವರು ಸೇರಿದಂತೆ ಎಲ್ಲ ಸಚಿವರು, ಶಾಸಕರು ಮೊದಲಾದ ಜನಪ್ರತಿನಿಧಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರರಿಗೂ ಇಷ್ಟವಾಗಿದೆ. ಇದಕ್ಕಾಗಿ ಶ್ರಮಿಸಿದವರೆಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>‘ಸೆಸ್ಕ್ ಸಿಬ್ಬಂದಿ ದಿನವಿಡೀ ಕಾರ್ಯನಿರ್ವಹಿಸಿ ದೀಪಾಲಂಕಾರದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಂಡಿದ್ದಾರೆ. ವಿದ್ಯುತ್ ದೀಪಾಲಂಕಾರ ಮುಂದುವರಿಕೆಯಿಂದ ನಿಗಮಕ್ಕೆ ಹೆಚ್ಚುವರಿ ಹೊರೆಯಾಗುತ್ತದೆ. ಆದರೂ, ಎಲ್ಲರ ಒತ್ತಾಸೆಯ ಮೇರೆಗೆ ನಗರದ ಹೃದಯಭಾಗ ಹಾಗೂ ಮುಖ್ಯ ಸ್ಥಳಗಳಲ್ಲಿ 2 ದಿನಗಳವರೆಗೆ ಮುಂದುವರಿಸಲಾಗುವುದು’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>