<p><strong>ಮೈಸೂರು</strong>: ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆಯ ರೈತ ಸಂಘ ಬೆಂಬಲಿತ ಅಭ್ಯರ್ಥಿ ಪ್ರಸನ್ನ ಎನ್.ಗೌಡ ಅವರ ನಾಮಪತ್ರ ಸಲ್ಲಿಕೆಗೆ ಠೇವಣಿ ಹಣವನ್ನು ಬುಧವಾರ ಇಲ್ಲಿ ಜನರಿಂದಲೇ ಸಂಗ್ರಹಿಸಲಾಯಿತು.</p>.<p>ಪುರಭವನದಲ್ಲಿ ನಡೆದ ಚುನಾವಣಾ ಪ್ರಚಾರದ ಸಭೆಯಲ್ಲಿ ಪಾಲ್ಗೊಂಡಿದ್ದ ರೈತರು, ಮಹಿಳೆಯರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ಮುಖಂಡರು ₹ 10, 20, 50, 100, 500 ಮುಖಬೆಲೆಯ ನೋಟುಗಳನ್ನು ಜೋಳಿಗೆಗೆ ಹಾಕಿದರು.</p>.<p>ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಹಣ ಹಾಕಿ ಚಾಲನೆ ನೀಡಿದರು. ನಾಮಪತ್ರ ಸಲ್ಲಿಸಲು ₹ 10 ಸಾವಿರ ಬೇಕಿದ್ದು, ಹಣ ನೀಡುವಂತೆ ಮನವಿ ಮಾಡಿದರು. ಬಳಿಕ ಮುಖಂಡರು ಹಸಿರು ಟವೆಲ್ ಹಿಡಿದು ಪುರಭವನ ಆವರಣದಲ್ಲಿ ಹಣ ಸಂಗ್ರಹಿಸಿದರು. ₹ 18,500 ಸಂಗ್ರಹವಾಯಿತು.</p>.<p>‘ನಾನು ಚುನಾವಣಾ ಪ್ರಚಾರಕ್ಕೆ ಹೋದಲೆಲ್ಲಾ ಪದವೀಧರರು ಮತ ನೀಡುವ ಭರವಸೆ ನೀಡಿ ಹಣ ಕೂಡ ನೀಡುತ್ತಿದ್ದಾರೆ. ಇದುವರೆಗೆ ಜನರೇ ನೀಡಿದ ಹಣ ₹ 15ಲಕ್ಷ ದಾಟಿದೆ. ಅದನ್ನು ಒಳ್ಳೆಯ ಕಾರ್ಯಕ್ಕೆ ಬಳಸುತ್ತೇನೆ’ ಎಂದು ಅಭ್ಯರ್ಥಿ ಪ್ರಸನ್ನ ಎನ್.ಗೌಡ ಹೇಳಿದರು.</p>.<p>‘ಹೊಸ ನಡೆ ನುಡಿಯ ರಾಜಕಾರಣಕ್ಕೆ ಮುನ್ನುಡಿ ಬರೆಯುತ್ತಿರುವ ದಿನವಿದು. ಚಳವಳಿಗಾರರ ಕನಸು ನನಸಾಗುತ್ತಿದೆ’ ಎಂದರು.</p>.<p>ರೈತ ಸಂಘ, ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ, ಆಮ್ ಆದ್ಮಿ ಪಕ್ಷ ಹಾಗೂ ಪ್ರಗತಿಪರ ಸಂಘಟನೆಗಳು ಅವರನ್ನು ಬೆಂಬಲಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆಯ ರೈತ ಸಂಘ ಬೆಂಬಲಿತ ಅಭ್ಯರ್ಥಿ ಪ್ರಸನ್ನ ಎನ್.ಗೌಡ ಅವರ ನಾಮಪತ್ರ ಸಲ್ಲಿಕೆಗೆ ಠೇವಣಿ ಹಣವನ್ನು ಬುಧವಾರ ಇಲ್ಲಿ ಜನರಿಂದಲೇ ಸಂಗ್ರಹಿಸಲಾಯಿತು.</p>.<p>ಪುರಭವನದಲ್ಲಿ ನಡೆದ ಚುನಾವಣಾ ಪ್ರಚಾರದ ಸಭೆಯಲ್ಲಿ ಪಾಲ್ಗೊಂಡಿದ್ದ ರೈತರು, ಮಹಿಳೆಯರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ಮುಖಂಡರು ₹ 10, 20, 50, 100, 500 ಮುಖಬೆಲೆಯ ನೋಟುಗಳನ್ನು ಜೋಳಿಗೆಗೆ ಹಾಕಿದರು.</p>.<p>ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಹಣ ಹಾಕಿ ಚಾಲನೆ ನೀಡಿದರು. ನಾಮಪತ್ರ ಸಲ್ಲಿಸಲು ₹ 10 ಸಾವಿರ ಬೇಕಿದ್ದು, ಹಣ ನೀಡುವಂತೆ ಮನವಿ ಮಾಡಿದರು. ಬಳಿಕ ಮುಖಂಡರು ಹಸಿರು ಟವೆಲ್ ಹಿಡಿದು ಪುರಭವನ ಆವರಣದಲ್ಲಿ ಹಣ ಸಂಗ್ರಹಿಸಿದರು. ₹ 18,500 ಸಂಗ್ರಹವಾಯಿತು.</p>.<p>‘ನಾನು ಚುನಾವಣಾ ಪ್ರಚಾರಕ್ಕೆ ಹೋದಲೆಲ್ಲಾ ಪದವೀಧರರು ಮತ ನೀಡುವ ಭರವಸೆ ನೀಡಿ ಹಣ ಕೂಡ ನೀಡುತ್ತಿದ್ದಾರೆ. ಇದುವರೆಗೆ ಜನರೇ ನೀಡಿದ ಹಣ ₹ 15ಲಕ್ಷ ದಾಟಿದೆ. ಅದನ್ನು ಒಳ್ಳೆಯ ಕಾರ್ಯಕ್ಕೆ ಬಳಸುತ್ತೇನೆ’ ಎಂದು ಅಭ್ಯರ್ಥಿ ಪ್ರಸನ್ನ ಎನ್.ಗೌಡ ಹೇಳಿದರು.</p>.<p>‘ಹೊಸ ನಡೆ ನುಡಿಯ ರಾಜಕಾರಣಕ್ಕೆ ಮುನ್ನುಡಿ ಬರೆಯುತ್ತಿರುವ ದಿನವಿದು. ಚಳವಳಿಗಾರರ ಕನಸು ನನಸಾಗುತ್ತಿದೆ’ ಎಂದರು.</p>.<p>ರೈತ ಸಂಘ, ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ, ಆಮ್ ಆದ್ಮಿ ಪಕ್ಷ ಹಾಗೂ ಪ್ರಗತಿಪರ ಸಂಘಟನೆಗಳು ಅವರನ್ನು ಬೆಂಬಲಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>