ಕುವೆಂಪು ಅವರ ಮಂತ್ರ ಮಾಂಗಲ್ಯ ಮದುವೆಯ ಪ್ರಮಾಣವಚನ ಬೋಧಿಸಿದ ಮಾನವ ಮಂಟಪದ ಸಂಚಾಲಕ ಕಾಳಚನ್ನೇಗೌಡ, ‘ಅಂತರ್ಜಾತಿ ಮದುವೆಗಳನ್ನು ಜನರು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಹಿಂದೆ ಇದ್ದಷ್ಟು ವಿರೋಧವಿಲ್ಲ. ಸುತ್ತೂರು, ಧರ್ಮಸ್ಥಳ, ಆದಿಚುಂಚನಗಿರಿ ಮಠಗಳಲ್ಲಿ ಸರಳ ಮದುವೆಗಳಾಗುತ್ತಿವೆ. ಸರಳವಾಗಿ ಮದುವೆಯಾದರೆ ಜನರು ಹೀಯಾಳಿಸುತ್ತಾರೆ ಎಂಬ ಯೋಚನೆ ಬಿಡಬೇಕು’ ಎಂದು ಸಲಹೆ ನೀಡಿದರು.