<p><strong>ಮೈಸೂರು</strong>: ‘ಮೈಸೂರು ಆತಿಥ್ಯಕ್ಕೆ ಹೆಸರುವಾಸಿಯಾಗಿದ್ದು, ಪ್ರತಿ ವರ್ಷ ದಸರಾ ಯಶಸ್ವಿಯಾಗಲು ಇಲ್ಲಿನ ಹೋಟೆಲ್ಗಳ ಪಾತ್ರ ದೊಡ್ಡದಿದೆ’ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು.</p><p>ನಗರದಲ್ಲಿ ಮಂಗಳವಾರ ನಡೆದ ಮೈಸೂರು ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘದ 30ನೇ ವಾರ್ಷಿಕೋತ್ಸವ ಹಾಗೂ ಹಿರಿಯ ಹೋಟೆಲ್ ಉದ್ಯಮಿಗಳಿಗೆ ‘ಸಹಕಾರ ಮಿತ್ರ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ದಸರಾದಲ್ಲಿ ಒಂದು ದಿನ ಹೋಟೆಲ್ಗಳು ಬಂದ್ ಆದರೂ ಪರಿಸ್ಥಿತಿ ಊಹಿಸಿಕೊಳ್ಳುವಂತಿಲ್ಲ. ದಸರಾದ ಯಾವುದೇ ಕಾರ್ಯಕ್ರಮ ನೋಡಿಕೊಂಡು ಬರುವವರಿಗೆ ಇಲ್ಲಿನ ಹೋಟೆಲ್ನವರು ತಡರಾತ್ರಿವರೆಗೂ ರುಚಿ– ಶುಚಿಯಾದ ಆಹಾರ ನೀಡುತ್ತಿದ್ದಾರೆ. ದೇಶ-ವಿದೇಶಗಳಿಂದ ಮೈಸೂರಿಗೆ ಬರುವ ಪ್ರವಾಸಿಗರಿಗೆ ಅತ್ಯುತ್ತಮ ಆತಿಥ್ಯ ಸಿಗುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಹೋಟೆಲ್ ಉದ್ಯಮಿಗಳಾದ ಬಿ. ವಿಜಯಲಕ್ಷ್ಮೀ ಹಯವದನ ಆಚಾರ್, ಬಿ. ಬಾಲಕೃಷ್ಣಭಟ್ ಹಾಗೂ ಡಿ.ಚಂದ್ರಶೇಖರ್ ಶೆಟ್ಟಿ ಅವರಿಗೆ ‘ಸಹಕಾರ ಮಿತ್ರ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಸಹಕಾರ ಸಂಘದ ಅಧ್ಯಕ್ಷ ನಾರಾಯಣ ವಿ.ಹೆಗಡೆ, ಉಪಾಧ್ಯಕ್ಷ ಆನಂದ ಎಂ.ಶೆಟ್ಟಿ , ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮೈಸೂರು ಆತಿಥ್ಯಕ್ಕೆ ಹೆಸರುವಾಸಿಯಾಗಿದ್ದು, ಪ್ರತಿ ವರ್ಷ ದಸರಾ ಯಶಸ್ವಿಯಾಗಲು ಇಲ್ಲಿನ ಹೋಟೆಲ್ಗಳ ಪಾತ್ರ ದೊಡ್ಡದಿದೆ’ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು.</p><p>ನಗರದಲ್ಲಿ ಮಂಗಳವಾರ ನಡೆದ ಮೈಸೂರು ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘದ 30ನೇ ವಾರ್ಷಿಕೋತ್ಸವ ಹಾಗೂ ಹಿರಿಯ ಹೋಟೆಲ್ ಉದ್ಯಮಿಗಳಿಗೆ ‘ಸಹಕಾರ ಮಿತ್ರ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ದಸರಾದಲ್ಲಿ ಒಂದು ದಿನ ಹೋಟೆಲ್ಗಳು ಬಂದ್ ಆದರೂ ಪರಿಸ್ಥಿತಿ ಊಹಿಸಿಕೊಳ್ಳುವಂತಿಲ್ಲ. ದಸರಾದ ಯಾವುದೇ ಕಾರ್ಯಕ್ರಮ ನೋಡಿಕೊಂಡು ಬರುವವರಿಗೆ ಇಲ್ಲಿನ ಹೋಟೆಲ್ನವರು ತಡರಾತ್ರಿವರೆಗೂ ರುಚಿ– ಶುಚಿಯಾದ ಆಹಾರ ನೀಡುತ್ತಿದ್ದಾರೆ. ದೇಶ-ವಿದೇಶಗಳಿಂದ ಮೈಸೂರಿಗೆ ಬರುವ ಪ್ರವಾಸಿಗರಿಗೆ ಅತ್ಯುತ್ತಮ ಆತಿಥ್ಯ ಸಿಗುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಹೋಟೆಲ್ ಉದ್ಯಮಿಗಳಾದ ಬಿ. ವಿಜಯಲಕ್ಷ್ಮೀ ಹಯವದನ ಆಚಾರ್, ಬಿ. ಬಾಲಕೃಷ್ಣಭಟ್ ಹಾಗೂ ಡಿ.ಚಂದ್ರಶೇಖರ್ ಶೆಟ್ಟಿ ಅವರಿಗೆ ‘ಸಹಕಾರ ಮಿತ್ರ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಸಹಕಾರ ಸಂಘದ ಅಧ್ಯಕ್ಷ ನಾರಾಯಣ ವಿ.ಹೆಗಡೆ, ಉಪಾಧ್ಯಕ್ಷ ಆನಂದ ಎಂ.ಶೆಟ್ಟಿ , ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>